ಯಾರಾಗ್ತಾರೆ ತೆಲಂಗಾಣದ ನೂತನ ಸಿಎಂ; ಡಿ.ಕೆ.ಶಿವಕುಮಾರ್ ಹೇಳಿದ್ದೇನು..?

Who is Next Telangana CM?: ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿಯವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಡಿಕೆಶಿ ಹೇಳಿದರು.

Written by - Puttaraj K Alur | Last Updated : Dec 4, 2023, 10:33 PM IST
  • ಮುಖ್ಯಮಂತ್ರಿ ಆಯ್ಕೆ ತೀರ್ಮಾನವನ್ನು ಎಐಸಿಸಿ ಅಧ್ಯಕ್ಷರಿಗೆ ಬಿಡಲು CLP ಸಭೆಯಲ್ಲಿ ತೀರ್ಮಾನ
  • ನಮಗೆ ಬೇರೆ ಪಕ್ಷಗಳ ಶಾಸಕರ ಬೆಂಬಲದ ಅಗತ್ಯವಿಲ್ಲ, ತೆಲಂಗಾಣದ ಜನ ಸಂಪೂರ್ಣ ಬಹುಮತ ನೀಡಿದ್ದಾರೆ
  • ನಮ್ಮ ಆಶ್ವಾಸನೆಗಳನ್ನು ಜಾರಿಗೊಳಿಸುವ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ
ಯಾರಾಗ್ತಾರೆ ತೆಲಂಗಾಣದ ನೂತನ ಸಿಎಂ; ಡಿ.ಕೆ.ಶಿವಕುಮಾರ್ ಹೇಳಿದ್ದೇನು..? title=
ಯಾರಾಗ್ತಾರೆ ತೆಲಂಗಾಣದ ನೂತನ ಸಿಎಂ?

ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಸಿಎಲ್‍ಪಿ ಸಭೆಯ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ’ ಎಂದು ಹೇಳಿದರು.

ನಮಗೆ ಬೇರೆ ಪಕ್ಷಗಳ ಶಾಸಕರ ಬೆಂಬಲದ ಅಗತ್ಯವಿಲ್ಲ. ತೆಲಂಗಾಣದ ಜನರು ನಮಗೆ ಸಂಪೂರ್ಣ ಬಹುಮತ ನೀಡಿದ್ದು, ನಮ್ಮ ಆಶ್ವಾಸನೆಗಳನ್ನು ಆದಷ್ಟು ಬೇಗ ಜಾರಿಗೊಳಿಸುವ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಇದನ್ನೂ ಓದಿ: HDK ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಿಮ್ಮನ್ನು ಗೇಮ್ ಚೇಂಜರ್ ಎಂದು ಪರಿಗಣಿಸಲಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಪಾಲಿಗೆ ಗೇಮ್ ಚೇಂಜರ್ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ನಾನು ಯಾವುದೇ ಗೇಮ್ ಚೇಂಜರ್ ಅಲ್ಲ. ತೆಲಂಗಾಣ ರಾಜ್ಯದ ಜನರೇ ನಿಜವಾದ ಗೇಮ್ ಚೇಂಜರ್‍ಗಳು. ಬದಲಾವಣೆ ಬಯಸಿದ ಮತದಾರರು ಹಾಗೂ ನಾಯಕರು ತೆಲಂಗಾಣದಲ್ಲಿ ಈ ಹೊಸ ಬದಲಾವಣೆ ತಂದಿದ್ದಾರೆ" ಎಂದರು.

ದೆಹಲಿಗೆ ಡಿಕೆಶಿ: ತೆಲಂಗಾಣದಲ್ಲಿ CLP ಸಭೆ ಮುಗಿದ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಣಿಕ್ ರಾವ್ ಥಾಕೂರ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ಉಭಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಕಾಂಗ್ರೆಸ್‍ ಹೈ ಕಮಾಂಡ್‍ನ ನಾಯಕರನ್ನು ಭೇಟಿ ಮಾಡಿ, ತೆಲಂಗಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಶಾಸಕರ ಜೊತೆಗಿನ ಪ್ರತ್ಯೇಕ ಮಾತುಕತೆ ಬಗ್ಗೆ ವಿವರಗಳನ್ನು ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: ಡಿಕೆಶಿ ಅವರ ಸಿಎಂ ಹಗಲು ಕನಸು ನನಸಾಗದೇ ಉಳಿಯಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News