ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ: ರಾಜನಾಥ್ ಸಿಂಗ್

ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟರು. 

Last Updated : Apr 23, 2018, 06:59 PM IST
ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ: ರಾಜನಾಥ್ ಸಿಂಗ್ title=

ಕಾರ್ಕಳ: ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟರು. 

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಇದ್ದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿದೆ. ಆದರೆ ಕರ್ನಾಟಕದಲ್ಲಿ ಅಭಿವೃದ್ಧಿ ಎಂಬುದು ಕಿಂಚಿತ್ತೂ ಕಾಣುತ್ತಿಲ್ಲ. ಹಾಗಾದರೆ ಕೇಂದ್ರ ಸರ್ಕಾರ ನೀಡಿದ್ದ ಅನುದಾನವೆಲ್ಲಾ ಎಲ್ಲಿ ಹೋಯಿತು ಎಂದು ರಾಜನಾಥ್ ಸಿಂಗ್ ಕಿಡಿಕಾರಿದರು. 

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ಇಂದು ಮಂಗಳೂರು, ಉಡುಪಿ, ಕಾರ್ಕಳ ಮತ್ತು ಬೆಳ್ತಂಗಡಿಗಳಲ್ಲಿ ನಡೆದ ಬಿಜೆಪಿ ಸಮಾವೇಶಗಳಲ್ಲಿ ಪಾಲ್ಗೊಂಡರು. 

Trending News