ಸಿಎಂ ತವರು ಕ್ಷೇತ್ರದಲ್ಲಿ ಇಂದು ಕುಮಾರಸ್ವಾಮಿ ಭರ್ಜರಿ ಪ್ರಚಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಇಂದು ಜೆಡಿಎಸ್ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿದೆ.   

Last Updated : Apr 22, 2018, 11:02 AM IST
ಸಿಎಂ ತವರು ಕ್ಷೇತ್ರದಲ್ಲಿ ಇಂದು ಕುಮಾರಸ್ವಾಮಿ ಭರ್ಜರಿ ಪ್ರಚಾರ  title=

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೆಜ್ ಕ್ಷೇತ್ರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಇಂದು ಜೆಡಿಎಸ್ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರವಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಇಂದು ಪ್ರಚಾರಕ್ಕೆ ಮುಂದಾಗಿದ್ದಾರೆ. ಆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಪರ ಪ್ರಚಾರ ಮಾಡಲಿರುವ ಕುಮಾರಸ್ವಾಮಿ, ಎರಡು ದಿನಗಳ ಹಿಂದೆ ಸಿದ್ದರಾಮಯ್ಯ ಅವರು ಪ್ರಚಾರ ಮಾಡಿದ್ದ ಗ್ರಾಮಗಳಿಗೇ ಭೇಟಿ ನೀಡಿ ಮತಯಾಚನೆ ಮಾಡಲಿದ್ದಾರೆ. 

ಚಾಮುಂಡೇಶ್ವರಿ ಕ್ಷೇತ್ರದ ಒಟ್ಟು 30 ಗ್ರಾಮಗಳಲ್ಲಿ ಕುಮಾರಸ್ವಾಮಿ ಪ್ರಚಾರ ನಡೆಸುವುದರೊಂದಿಗೆ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಅಲ್ಲದೆ, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಇಲಾವಲದಲ್ಲಿ ರೋಡ್ ಶೋ ನಡೆಸಲಿದ್ದು, ಎರಡು ಪಕ್ಷದ ನಾಯಕರು ಮುಖಾಮುಖಿಯಾಗುವ ಸಾಧ್ಯತೆ ಇದೆ. 

Trending News