ಬಿಜೆಪಿಯ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಬಹಿರಂಗ ಸವಾಲು

ನೀವು ಎಷ್ಟು ಶಾಸಕರನ್ನು ಸೆಳೆಯುತ್ತಿರೋ ನಾವು ಅದರ ಎರಡು ಪಟ್ಟು ಶಾಸಕರನ್ನು ಸೆಳೆಯುತ್ತೇವೆ- ಕುಮಾರಸ್ವಾಮಿ

Last Updated : May 16, 2018, 03:15 PM IST
ಬಿಜೆಪಿಯ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಬಹಿರಂಗ ಸವಾಲು title=

ಬೆಂಗಳೂರು: ನೀವು ಎಷ್ಟು ಶಾಸಕರನ್ನು ಸೆಳೆಯುತ್ತಿರೋ ನಾವು ಅದರ ಎರಡು ಪಟ್ಟು ಶಾಸಕರನ್ನು ಸೆಳೆಯುತ್ತೇವೆ. ಆಪರೇಷನ್ ಕಮಲಕ್ಕೆ ಕೈ ಹಾಕಿದರೆ ಅದು ನಿಮಗೇ ತಿರುಗುಬಾಣವಾಗುತ್ತೆ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಶಾಸಕರಿಗೆ ಬಿಜೆಪಿ 100 ಕೋಟಿ ಆಫರ್ ನೀಡಿದೆ ಎಂದು ಗಂಭೀರ ಆರೋಪ ಮಾಡಿದ ಎಚ್ಡಿಕೆ, ಈ ಹಣ ಎಲ್ಲಿಂದ ನೀಡಲಾಗುತ್ತದೆ? ಇದು ಕಪ್ಪು ಹಣವೇ ಅಥವಾ ಬಿಳಿಹಣವೇ ಎಂದು ಪ್ರಶ್ನಿಸಿದರು.  

2008ರಲ್ಲಿ ನಡೆದ ಆಪರೇಷನ್ ಕಮಲವನ್ನು ರಾಜ್ಯದ ಜನತೆ ಮರೆತಿಲ್ಲ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ಅವರ ಹೇಳಿಕೆಯೇ ತೋರಿಸಿಕೊಟ್ಟಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Trending News