ಇಂದು ರಾಜ್ಯದ 4 ಜಿಲ್ಲೆಗಳಲ್ಲಿ ನರೇಂದ್ರ ಮೋದಿ ಪ್ರಚಾರ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಿತ್ರದುರ್ಗದ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ, ಪ್ರಚಾರ ನಡೆಸಲಿದ್ದಾರೆ.  

Last Updated : May 6, 2018, 10:20 AM IST
ಇಂದು ರಾಜ್ಯದ 4 ಜಿಲ್ಲೆಗಳಲ್ಲಿ ನರೇಂದ್ರ ಮೋದಿ ಪ್ರಚಾರ  title=

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಿತ್ರದುರ್ಗ, ರಾಯಚೂರು, ಜಮಖಂಡಿ ಮತ್ತು ಹುಬ್ಬಳ್ಳಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ, ಪ್ರಚಾರ ನಡೆಸಲಿದ್ದಾರೆ. 

ಪ್ರಧಾನಿ ಮೋದಿ ಅವರ ಇಂದಿನ ಕಾರ್ಯಕ್ರಮ 
* ಬೆಳಗ್ಗೆ 10.30ಕ್ಕೆ ಚಿತ್ರದುರ್ಗದ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
* ಮಧ್ಯಾಹ್ನ 1.30ಕ್ಕೆ ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯ ಆವರಣದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಮೋದಿ, ಜಿಲ್ಲೆಯ 7 ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ವಿಶ್ವವಿದ್ಯಾನಿಲಯ ಆವರಣದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. 
* ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. 
* ಸಂಜೆ 6.30ಕ್ಕೆ ಹುಬ್ಬಳ್ಳಿಯಲ್ಲಿ ಬಹಿರಂಗ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. 

Trending News