ನಾಳೆ ನಾನೊಬ್ಬನೇ ಪ್ರಮಾಣ ವಚನ ಸ್ವೀಕಾರ ಮಾಡುತ್ತಿಲ್ಲ: ಎಚ್.ಡಿ. ಕುಮಾರಸ್ವಾಮಿ

ನಾಳೆ ನಾನೊಬ್ಬನೇ ಪ್ರಮಾಣವಚನ ಸ್ವೀಕಾರ ಮಾಡುತ್ತಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.  

Last Updated : May 22, 2018, 10:43 AM IST
ನಾಳೆ ನಾನೊಬ್ಬನೇ ಪ್ರಮಾಣ ವಚನ ಸ್ವೀಕಾರ ಮಾಡುತ್ತಿಲ್ಲ: ಎಚ್.ಡಿ. ಕುಮಾರಸ್ವಾಮಿ title=
ಸಂಗ್ರಹ ಚಿತ್ರ

ಬೆಂಗಳೂರು: ನಾಳೆ ನಾನೊಬ್ಬನೇ ಪ್ರಮಾಣವಚನ ಸ್ವೀಕಾರ ಮಾಡುತ್ತಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ, ಮೇ 23 ಬುಧವಾರ ಸಂಜೆ 4:00 ಗಂಟೆಗೆ ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಎಚ್ಡಿಕೆ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿಬಗ್ಗೆ ಸ್ಪಷ್ಟೀಕರಣ ನೀಡಿರುವ ಅವರು ನಾಳೆ ನಾನೊಬ್ಬನೇ ಪ್ರಮಾಣವಚನ ಸ್ವೀಕಾರ ಮಾಡುತ್ತಿಲ್ಲ. ನನ್ನ ಜೊತೆ ಕೆಲವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಯಾರು ಯಾರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು, ಏನು ಅನ್ನೋದು ಸಂಜೆ ನಿರ್ಧಾರವಾಗಲಿದೆ. ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೊತೆ ಚರ್ಚೆ ಮಾಡಿ‌ ಆ ಬಗ್ಗೆ ನಿರ್ಧಾರ ಮಾಡಲಿದ್ದೇವೆ ಎಂದು ಹೇಳಿದರು.

ಇಂದೂ ಸಹ ಮುಂದುವರೆಯಲಿದೆ ಎಚ್ ಡಿಕೆ ಟೆಂಪಲ್ ರನ್
ಇಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಅಲ್ಲಿಂದ ಶೃಂಗೇರಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ.ಸಾಧ್ಯವಾದರೆ ತುಮಕೂರಿಗೂ ಹೋಗಿ ಸಿದ್ದಗಂಗಾ ಶ್ರೀ ಗಳ ಆಶೀರ್ವಾದ ಪಡೆಯುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

Trending News