ಜನಾರ್ಧನ ರೆಡ್ಡಿ ಸಹಾಯದಿಂದ 10-15 ಸೀಟು ಗೆಲ್ಲುತ್ತೇವೆ: ಯಡಿಯೂರಪ್ಪ

ಜನಾರ್ಧನ ರೆಡ್ಡಿ ಸಹಾಯದಿಂದ 10 ರಿಂದ 15 ಸ್ಥಾನಗಳನ್ನು ಗೆಲ್ಲುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

Last Updated : Apr 27, 2018, 04:35 PM IST
ಜನಾರ್ಧನ ರೆಡ್ಡಿ ಸಹಾಯದಿಂದ 10-15 ಸೀಟು ಗೆಲ್ಲುತ್ತೇವೆ: ಯಡಿಯೂರಪ್ಪ title=

ಹಾಸನ: ಉತ್ತರ ಕರ್ನಾಟಕ ಭಾಗದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಹಾಯದಿಂದ 10 ರಿಂದ 15 ಸ್ಥಾನಗಳನ್ನು ಗೆಲ್ಲುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಇಂದಿಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜನಾರ್ದನ ರೆಡ್ಡಿ ಬಿಜೆಪಿಯಿಂದ ಟಿಕೆಟ್ ಕೊಡಿ ಎಂದು ಯಾವತ್ತೂ ಕೇಳಿಲ್ಲ. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು, ನಮಗೆ ಸಹಾಯ ಆಗುವುದಾದರೆ ವಿರೋಧಿಗಳ ನೆರವನ್ನೂ ಪಡೆಯಿರಿ ಎಂದು ಹೇಳಿದ್ದಾರೆ. ಹಾಗಾಗಿ ಜನಾರ್ಧನ್ ರೆಡ್ಡಿ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಅವಕಾಶ ನೀಡಿರುವುದಾಗಿ ಯಡಿಯೂರಪ್ಪ ಹೇಳಿದರು.

ಮುಂದುವರೆದು, ಉತ್ತರ ಪ್ರದೇಶ ಮಾದರಿಯ ಚುನಾವಣಾ ಫಲಿತಾಂಶ ರಾಜ್ಯದಲ್ಲೂ ಪುನರಾವರ್ತನೆಯಾಗಲಿದೆ. ನಾವು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿದ್ದೇವೆ. ಪ್ರಧಾನಿ ನರೇಂದ್ರ ಮೋದಿ‌ ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಪ್ರಚಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.

Trending News