Small Loan: ಹೊಸ ವರ್ಷಾರಂಭದಲ್ಲಿಯೇ ಮೋದಿ ಸರ್ಕಾರದ ಮಹತ್ವದ ಘೋಷಣೆ, ಈ ಜನರಿಗೆ ಸಿಗಲಿದೆ 5000 ರೂ.ಧನಸಹಾಯ

Ashwini Vaishnaw : ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 2023 ರಲ್ಲಿ ಬೀದಿ ಬದಿ ವ್ಯಾಪಾರಿಗಳ ಸಣ್ಣ ಸಾಲದ ಅವಶ್ಯಕತೆಗಳನ್ನು ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡಲಾಗುವುದು ಎಂದಿದ್ದಾರೆ.  

Written by - Nitin Tabib | Last Updated : Jan 7, 2023, 08:16 PM IST
  • ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಮಾತನಾಡಿದ ವೈಷ್ಣವ್,
  • 2023ರಲ್ಲಿ ಬೀದಿ ಬದಿ ವ್ಯಾಪಾರಿಗಳ 3,000 ರೂ.ಗಳಿಂದ 5,000 ರೂ.ವರೆಗಿನ
  • ಸಣ್ಣ ಸಾಲವನ್ನು ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ಹರಿಸಲಾಗುವುದು ಎಂದಿದ್ದಾರೆ.
Small Loan: ಹೊಸ ವರ್ಷಾರಂಭದಲ್ಲಿಯೇ ಮೋದಿ ಸರ್ಕಾರದ ಮಹತ್ವದ ಘೋಷಣೆ, ಈ ಜನರಿಗೆ ಸಿಗಲಿದೆ 5000 ರೂ.ಧನಸಹಾಯ title=
Ashwini Vaishnaw

Small Loan: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನಸಾಮಾನ್ಯರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗಳ ಮೂಲಕ ಸರ್ಕಾರವೂ ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದೆ. ಈ ನಡುವೆ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಮಹತ್ವದ ಘೋಷಣೆಯೊಂದನ್ನು ಮೊಳಗಿಸಿದ್ದಾರೆ. ಜನರಿಗೆ 5000 ರೂ.ವರೆಗೆ ಸಾಲ ನೀಡುವ ಕುರಿತು ಅಶ್ವಿನಿ ವೈಷ್ಣವ್ ಮಾತನಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, 2023 ರಲ್ಲಿ, ಡಿಜಿಟಲ್ ತಂತ್ರಜ್ಞಾನದ ಸಹಾಯದಿಂದ, ಬೀದಿ ಬದಿ ವ್ಯಾಪಾರಿಗಳಿಗೆ 5,000 ರೂ.ವರೆಗಿನ ಮೈಕ್ರೋ ಸಾಲ ಸೌಲಭ್ಯವನ್ನು ಒದಗಿಸಲು ಸರ್ಕಾರವು ವಿಶೇಷ ಒತ್ತು ನೀಡಲಿದೆ ಎಂದು ಹೇಳಿದ್ದಾರೆ.

ಯಾರಿಗೆ ಈ ಸಹಾಯ ಸಿಗಲಿದೆ
ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಮಾತನಾಡಿದ ವೈಷ್ಣವ್, 2023ರಲ್ಲಿ ಬೀದಿ ಬದಿ ವ್ಯಾಪಾರಿಗಳ 3,000 ರೂ.ಗಳಿಂದ 5,000 ರೂ.ವರೆಗಿನ ಸಣ್ಣ ಸಾಲವನ್ನು ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ಹರಿಸಲಾಗುವುದು ಎಂದಿದ್ದಾರೆ. ಪ್ರತಿಯೊಬ್ಬ ನಾಗರಿಕರನ್ನು ಡಿಜಿಟಲ್ ಸಂಪರ್ಕಕ್ಕಾಗಿ ದೇಶದ ಎಲ್ಲಾ ಭಾಗಗಳಿಗೆ 4G ಮತ್ತು 5G ಟೆಲಿಕಾಂ ಸೇವೆಗಳನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಸುಮಾರು 52,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂದು ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ-

5G ತಂತ್ರಜ್ಞಾನ
ದೇಶವು ಈ ವರ್ಷ ಸ್ಥಳೀಯವಾಗಿ  ಭಿವೃದ್ಧಿಪಡಿಸಲಾದ 4G ಮತ್ತು 5G ತಂತ್ರಜ್ಞಾನಗಳ ಅನುಷ್ಠಾನವನ್ನು ನೋಡಲಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಮತ್ತೊಂದೆಡೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಕಾರ, ದೇಶದಲ್ಲಿ ಶೀಘ್ರದಲ್ಲೇ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ-

ನಷ್ಟ ಸರಿದೂಗಿಸಲು ಪರಿಹಾರ
ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ (SVANidhi) ಯೋಜನೆಯನ್ನು ಜೂನ್ 2020 ರಲ್ಲಿ ಮೈಕ್ರೋ-ಲೋನ್ ಸೌಲಭ್ಯ ಒದಗಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗುವ ನಷ್ಟವನ್ನು ಸರಿದೂಗಿಸಲು ಬೀದಿ ವ್ಯಾಪಾರಿಗಳಿಗೆ ಅವಕಾಶ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News