Bharat Rice: ಭಾರತ್ ರೈಸ್ ಹೆಸರಿನಲ್ಲಿ 29 ರೂ./ಕೆಜಿ ಅಕ್ಕಿ ಪರಿಚಯಿಸಿದ ಕೇಂದ್ರ ಸರ್ಕಾರ! ಎಲ್ಲಿ ಖರೀದಿಸಬೇಕು?

Bharat Rice: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ನಿನ್ನೆ (ಫೆ. 6) ಗ್ರಾಹಕರಿಗೆ ನೇರವಾಗಿ ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡುವ ಭಾರತ್ ರೈಸ್ ಗೆ ಚಾಲನೆ ನೀಡಿದರು.  

Written by - Yashaswini V | Last Updated : Feb 7, 2024, 11:43 AM IST
  • ದೇಶದಲ್ಲಿ ಏರುತ್ತಿರುವ ಹಣದುಬ್ಬರವನ್ನು ನಿಯಂತ್ರಿಸಲು, ಸರ್ಕಾರವು ಭಾರತ್ ಬ್ರಾಂಡ್ ಅಡಿಯಲ್ಲಿ ಕಡಿಮೆ ಬೆಲೆಗೆ ಹಿಟ್ಟು, ಬೇಳೆಕಾಳುಗಳು, ಅಗ್ಗದ ಈರುಳ್ಳಿ ಮತ್ತು ಟೊಮೆಟೊಗಳನ್ನು ಮೊದಲು ಮಾರಾಟ ಮಾಡಿದೆ
  • ಭಾರತ್ ಅಟ್ಟಾವನ್ನು 6 ನವೆಂಬರ್ 2023 ರಂದು ಕೇಂದ್ರ ಸರ್ಕಾರವು ಪ್ರಾರಂಭಿಸಿತು, ಅಲ್ಲಿ ದೇಶದಲ್ಲಿ ಹಿಟ್ಟಿನ ಸರಾಸರಿ ಬೆಲೆ ಕೆಜಿಗೆ 35 ರೂ. ಆಗಿದ್ದರೆ ಗ್ರಾಹಕರು 27.50 ರೂ.ಗೆ ಹಿಟ್ಟು ಖರೀದಿಸಬಹುದು
  • ಅದರಂತೆ ಇದೀಗ ಭಾರತ್ ರೈಸ್ ಅನ್ನು ಆರಂಭಿಸಲಾಗಿದ್ದು ಇದರಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿ ಖರೀದಿಸಬಹುದಾಗಿದೆ.
Bharat Rice: ಭಾರತ್ ರೈಸ್ ಹೆಸರಿನಲ್ಲಿ 29 ರೂ./ಕೆಜಿ ಅಕ್ಕಿ ಪರಿಚಯಿಸಿದ ಕೇಂದ್ರ ಸರ್ಕಾರ! ಎಲ್ಲಿ ಖರೀದಿಸಬೇಕು?  title=

Bharat Rice: ಹಣದುಬ್ಬರದಿಂದ ಜನ ಸಾಮಾನ್ಯರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಂದಾರೆ ಸರ್ಕಾರ "ಭಾರತ್ ರೈಸ್" ಅನ್ನು ಪ್ರಾರಂಭಿಸಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ನಿನ್ನೆ (ಫೆ. 6) ಗ್ರಾಹಕರಿಗೆ ನೇರವಾಗಿ ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡುವ ಭಾರತ್ ರೈಸ್ ಗೆ ಚಾಲನೆ ನೀಡಿದರು.  

ಸಬ್ಸಿಡಿ ದರದಲ್ಲಿ ಅಕ್ಕಿ! 
ಭಾರತ್ ರೈಸ್ ನಲ್ಲಿ ಸಾರ್ವಜನಿಕರು ಪ್ರತಿ ಕೆಜಿಗೆ 29 ರೂ. ದರದಲ್ಲಿ ಅಕ್ಕಿಯನ್ನು ಖರೀದಿಸಬಹುದಾಗಿದೆ.  ಸಬ್ಸಿಡಿ ಅಕ್ಕಿ 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ಲಭ್ಯವಿರುತ್ತದೆ. 

ಭಾರತ್ ರೈಸ್ ಅನ್ನು ಎಲ್ಲಿ? ಹೇಗೆ ಖರೀದಿಸಬೇಕು? 
ಎಫ್‌ಸಿಐ ಮೂಲಕ ಅಕ್ಕಿಯನ್ನು ಚಿಲ್ಲರೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ, ನೀವು ಭಾರತ್ ರೈಸ್ ಅನ್ನು NAFED, NCCF ಮತ್ತು ಕೇಂದ್ರೀಯ ಭಂಡಾರ್ ಮೂಲಕ ಖರೀದಿಸಬಹುದಾಗಿದೆ. 

ಇದನ್ನೂ ಓದಿ- ನಿಮ್ಮ ಪಿ‌ಪಿ‌ಎಫ್ ಅಕೌಂಟ್ ಬಂದ್ ಆಗಿದ್ಯಾ? ಅದನ್ನು ಮತ್ತೆ ಪ್ರಾರಂಭಿಸಲು ಇಲ್ಲಿದೆ ಸುಲಭ ವಿಧಾನ

ಭಾರತ್ ರೈಸ್ ಅನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್,  ಕೈಗೆಟುಕುವ ಬೆಲೆಯಲ್ಲಿ ಪಡಿತರ ನೀಡಲು ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ 81 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ ಮತ್ತು ಸರ್ಕಾರವು ಮುಂದಿನ ಐದು ವರ್ಷಗಳವರೆಗೆ ಯೋಜನೆಯನ್ನು ವಿಸ್ತರಿಸಿದೆ ಎಂದು ಹೇಳಿದರು.

ಭಾರತ್ ರೈಸ್ ಯೋಜನೆಯಡಿ ಬಡ ಕುಟುಂಬಗಳು ಪ್ರತಿ ತಿಂಗಳು 1500 ರಿಂದ 2000 ರೂಪಾಯಿಗಳನ್ನು ಉಳಿಸಲು ಸಾಧ್ಯವಾಗುತ್ತದೆ.  ಈ ಉಪಕ್ರಮವು ರೈತರ ಬದುಕನ್ನು ಬದಲಾಯಿಸುವುದಲ್ಲದೆ ಅವರಿಗೆ ಭದ್ರತೆಯನ್ನು ನೀಡುತ್ತದೆ ಎಂದು ಸಚಿವ ಗೋಯಲ್ ಭರವಸೆ ವ್ಯಕ್ತಪಡಿಸಿದರು. 

ಇದನ್ನೂ ಓದಿ- Salary Hike News : ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಗಿಫ್ಟ್ : ಮಾಸಿಕ ವೇತನದಲ್ಲಿ ಭಾರೀ ಹೆಚ್ಚಳ

ಮೊದಲ ಹಂತದಲ್ಲಿ ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಿಗೆ ಎಂದರೆ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಹಾಗೂ ಚಿಲ್ಲರೆ ಸರಪಳಿ ಕೇಂದ್ರೀಯ ಭಂಡಾರ್  5 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಒದಗಿಸುತ್ತದೆ.  

ಈ ಏಜೆನ್ಸಿಗಳು 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ಅಕ್ಕಿಯನ್ನು ಪ್ಯಾಕ್ ಮಾಡುತ್ತವೆ ಮತ್ತು "ಭಾರತ್ ರೈಸ್" ಬ್ರಾಂಡ್‌ನ ಅಡಿಯಲ್ಲಿ ತಮ್ಮ ಔಟ್‌ಲೆಟ್‌ಗಳ ಮೂಲಕ ಚಿಲ್ಲರೆ ಮಾರಾಟ ಮಾಡುತ್ತವೆ. ಅಕ್ಕಿಯನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕವೂ ಖರೀದಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News