Good News! ನಿವೃತ್ತಿಯ ವಯಸ್ಸು ಹಾಗೂ ಪೆನ್ಷನ್ ಮೊತ್ತ ಏರಿಕೆಯಾಗುವ ಸಾಧ್ಯತೆ, ಇಲ್ಲಿದೆ ಮೋದಿ ಸರ್ಕಾರದ ಪ್ಲಾನ್!

Pension News: ಕೇಂದ್ರ ಸರ್ಕಾರ ಶೀಘ್ರದಲ್ಲೇ ತನ್ನ ನೌಕರರಿಗೆ ಒಳ್ಳೆಯ ಸುದ್ದಿ ನೀಡುವ ನಿರೀಕ್ಷೆ ಇದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತಾದ ಪ್ರಸ್ತಾವನೆಯನ್ನು (ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ) ಆರ್ಥಿಕ ಸಲಹಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕಳುಹಿಸಿದೆ.  

Written by - Nitin Tabib | Last Updated : Jun 15, 2022, 07:18 PM IST
  • ಕೇಂದ್ರ ಸರ್ಕಾರ ಶೀಘ್ರದಲ್ಲೇ ತನ್ನ ನೌಕರರಿಗೆ ಒಂದು ಗುಡ್ ನ್ಯೂಸ್ ನೀಡಲಿದೆ!
  • ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
  • ಈ ಕುರಿತಾದ ಪ್ರಸ್ತಾವನೆಯನ್ನು ಆರ್ಥಿಕ ಸಲಹಾ ಸಮಿತಿಯು ಈಗಾಗಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ
Good News! ನಿವೃತ್ತಿಯ ವಯಸ್ಸು ಹಾಗೂ ಪೆನ್ಷನ್ ಮೊತ್ತ ಏರಿಕೆಯಾಗುವ ಸಾಧ್ಯತೆ, ಇಲ್ಲಿದೆ ಮೋದಿ ಸರ್ಕಾರದ ಪ್ಲಾನ್! title=
Universal Pension System

Universal Pension System: ಕೇಂದ್ರ ಸರ್ಕಾರ ಶೀಘ್ರದಲ್ಲೇ ತನ್ನ ನೌಕರರಿಗೆ ಒಂದು ಗುಡ್ ನ್ಯೂಸ್ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈ ಕುರಿತಾದ ಪ್ರಸ್ತಾವನೆಯನ್ನು (ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ) ಆರ್ಥಿಕ ಸಲಹಾ ಸಮಿತಿಯು ಈಗಾಗಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ ಎನ್ನಲಾಗಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಯಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನೂ ಆರಂಭಿಸಬೇಕು ಎಂದು ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿ ಹೇಳಿದೆ.

ಹಿರಿಯ ನಾಗರಿಕರ ಸುರಕ್ಷತೆ
ಸಮಿತಿಯ ವರದಿಯ ಪ್ರಕಾರ, ಈ ಸಲಹೆಯ ಅಡಿಯಲ್ಲಿ, ಪ್ರತಿ ತಿಂಗಳು ನೌಕರರಿಗೆ ಕನಿಷ್ಠ 2000 ರೂ ಪಿಂಚಣಿ ಓದಗಿಸಬೇಕು  ಎನ್ನಲಾಗಿದೆ. ಆರ್ಥಿಕ ಸಲಹಾ ಸಮಿತಿಯು ದೇಶದ ಹಿರಿಯ ನಾಗರಿಕರ ಸುರಕ್ಷತೆಗಾಗಿ ಉತ್ತಮ ವ್ಯವಸ್ಥೆಗಳನ್ನು ಶಿಫಾರಸು ಮಾಡಿದೆ ಎಂಬುದು ಇಲ್ಲಿ ಉಲ್ಲೇಖನೀಯ

ಕೌಶಲ್ಯ ಅಭಿವೃದ್ಧಿ ಅತ್ಯಗತ್ಯ
ದುಡಿಯುವ ವಯಸ್ಸಿನ ಜನಸಂಖ್ಯೆ ಹೆಚ್ಚಾಗಬೇಕಾದರೆ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಅನಿವಾರ್ಯತೆ ಇದೆ ಎಂದು ವರದಿ ಹೇಳಿದೆ. ಸಾಮಾಜಿಕ ಭದ್ರತಾ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಇದನ್ನು ಮಾಡುವ ಅವಶ್ಯಕತೆಯನ್ನು ಒತ್ತಿ ಹೇಳಲಾಗಿದೆ. ವರದಿಯು 50 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿಯ ಬಗ್ಗೆಯೂ ಕೂಡ ಉಲ್ಲೇಖಿಸಿದೆ.

ಇದನ್ನೂ ಓದಿ-PM Kisan Yojana: ರೈತರು ಈ ತಪ್ಪು ಮಾಡಿದ್ದರೆ ಹಿಂದಿರುಗಿಸಬೇಕಾಗುತ್ತದೆ ಪಿಎಂ ಕಿಸಾನ್ ಹಣ

ಸರ್ಕಾರಗಳು ನೀತಿ ರೂಪಿಸುತ್ತವೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಇಂತಹ ನೀತಿಗಳನ್ನು ರೂಪಿಸಿ ಕೌಶಲ್ಯಾಭಿವೃದ್ಧಿ ಮಾಡುವಂತೆ ವರದಿಯಲ್ಲಿ ಹೇಳಲಾಗಿದೆ. ಈ ಪ್ರಯತ್ನವು ಅಸಂಘಟಿತ ವಲಯದಲ್ಲಿ ವಾಸಿಸುವವರು, ದೂರದ ಪ್ರದೇಶಗಳಲ್ಲಿ ವಾಸಿಸುವವರು, ನಿರಾಶ್ರಿತರು, ತರಬೇತಿ ಪಡೆಯಲು ದಾರಿಯಿಲ್ಲದ ವಲಸಿಗರನ್ನು ಸಹ ಒಳಗೊಂಡಿರಬೇಕು ಮತ್ತು ಅವರಿಗೆ ತರಬೇತಿ ನೀಡಬೇಕು ಎಂದು ವರದಿ ಹೇಳಿದೆ.

ಇದನ್ನೂ ಓದಿ-NPS ಹೂಡಿಕೆದಾರರಿಗೊಂದು ಭಾರಿ ಸಂತಸದ ಸುದ್ದಿ, ಇನ್ಮುಂದೆ ಚಂದಾದಾರರಿಗೆ ಸಿಗಲಿದೆ ಈ ಅದ್ಭುತ ಸೌಕರ್ಯ

ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟಸ್ 2019 ವರದಿ
ವಿಶ್ವ ಜನಸಂಖ್ಯೆಯ ಪ್ರಾಸ್ಪೆಕ್ಟಸ್ 2019 ರ ಪ್ರಕಾರ, 2050 ರ ವೇಳೆಗೆ ಭಾರತದಲ್ಲಿ ಸುಮಾರು 32 ಕೋಟಿ ಹಿರಿಯ ನಾಗರಿಕರು ಇರಲಿದ್ದಾರೆ ಎನ್ನಲಾಗಿದೆ. ಅಂದರೆ, ದೇಶದ ಜನಸಂಖ್ಯೆಯ ಸುಮಾರು ಶೇ. 19.5 ರಷ್ಟು  ಜನರು ನಿವೃತ್ತರ ವರ್ಗಕ್ಕೆ ಹೋಗುತ್ತಾರೆ. 2019 ರಲ್ಲಿ, ಭಾರತದ ಜನಸಂಖ್ಯೆಯ ಸುಮಾರು ಶೇ.10 ಅಥವಾ ಅಥವಾ 140 ಮಿಲಿಯನ್ ಜನರು ಹಿರಿಯ ನಾಗರಿಕರ ವರ್ಗದಲ್ಲಿರಲಿದ್ದಾರೆ ಎನ್ನಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News