Guarantee Schemes: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್‌ ತಿಳಿಯಲು ಇಷ್ಟು ಮಾಡಿ

Guarantee Schemes: ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್‌ ಹೇಗೆ ಚೆಕ್‌ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

Written by - Puttaraj K Alur | Last Updated : Aug 7, 2024, 11:45 PM IST
  • ಕಾಂಗ್ರೆಸ್‌ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಜನಪ್ರಿಯವಾಗಿವೆ
  • ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಹಣದ ಸ್ಟೇಟಸ್‌ ಅನ್ನು ಯಾವ ರೀತಿ ಚೆಕ್‌ ಮಾಡಬೇಕು..?
  • ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎರಡೂ ತಿಂಗಳ 4000 ಪೆಂಡಿಂಗ್ ಹಣ ಜಮಾ ಆಗಲಿದೆ
Guarantee Schemes: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್‌ ತಿಳಿಯಲು ಇಷ್ಟು ಮಾಡಿ title=
Guarantee Schemes

Guarantee Schemes: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಸೇರಿವೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ರೂಪಿಸಿದೆ.‌ ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಕುಟುಂಬದ ನಿರ್ವಹಣೆಯಲ್ಲಿ ಮನೆಯ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಲಿ ಎಂದು ಸರ್ಕಾರವು ಕುಟುಂಬದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಜಮಾ ಮಾಡಲು ಈ ಯೋಜನೆ ಅನುಷ್ಠಾನ ಮಾಡಿದೆ. ಈಗಾಗಲೇ ಮೇ ತಿಂಗಳವರೆಗೆ 10 ಕಂತುಗಳ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ ಜೂನ್‌ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಈ ಎರಡೂ ತಿಂಗಳ 4000 ರೂ. ಹಣವನ್ನು ಒಟ್ಟಿಗೆ ಜಮಾ ಮಾಡುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ.

ಇದನ್ನೂ ಓದಿ: ಏಕಾಏಕಿ 10 ದಿನಗಳ ಕಾಲ ರಜೆ ಘೋಷಿಸಿದ ವಿಶ್ವದ ಅತಿದೊಡ್ಡ ವಜ್ರಾಭರಣಗಳ ತಯಾರಕ ಕಂಪನಿ..!

ಇನ್ನು ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು, ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಐದು ಕೆಜಿ ಅಕ್ಕಿಗೆ ಒಟ್ಟು 170 ರೂ.ವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಅಥವಾ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್‌ ಹೇಗೆ ಚೆಕ್‌ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಹಣದ ಸ್ಟೇಟಸ್‌ ಈ ರೀತಿ ಚೆಕ್‌  

  • ನಿಮ್ಮ ಮೊಬೈಲ್‌ನಲ್ಲಿ ಪ್ಲೇ ಸ್ಟೋರ್‌ ಓಪನ್‌ ಮಾಡಿಕೊಳ್ಳಿ
  • DBT Karnataka ಅಪ್ಲಿಕೇಶನ್‌ ಡೌನ್‌ಲೋಡ್ ಮಾಡಿ
  • ಡೌನ್‌ಲೋಡ್ ಮಾಡಿದ ಅಪ್ಲಿಕೇಶನ್‌ ಓಪನ್‌ ಮಾಡಿ
  • ನಂತರ ನಿಮ್ಮ ಆಧಾರ್‌ ಕಾರ್ಡ್‌ ನಂಬರ್‌ ಮತ್ತು ಮೊಬೈಲ್‌ ನಂಬರ್‌ ಹಾಕಿ. ಈಗ ಆಧಾರ್‌ ಕಾರ್ಡ್‌ಗೆ ಲಿಂಕ್‌ ಇರುವ ನಂಬರ್‌ಗೆ ಬಂದಿರುವ OTP ನಮೂದಿಸಿ
  • 4 ಡಿಜಿಟ್‌ ಇರುವ ಕೊಡ್ ಕ್ರಿಯೇಟ್ ಮಾಡಿ (Password)
  • ಈಗ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಸಹಿತ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಬಹುದು

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಬಂಪರ್ !ವೇತನದಲ್ಲಿ ಆಗುವುದು ಒಂದು ಲಕ್ಷಕ್ಕಿಂತ ಅಧಿಕ ಹೆಚ್ಚಳ ! ಯಾವ ಲೆಕ್ಕಾಚಾರದಲ್ಲಿ ಎನ್ನುವ ವಿವರ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News