ನಾರಾಯಣಮೂರ್ತಿಯವರೇ ವಾರಕ್ಕೆ 80-90 ಗಂಟೆ ಕೆಲಸ ಮಾಡಿದ್ದಾರೆ: ಸುಧಾ ಮೂರ್ತಿ

‘ನಾರಾಯಣಮೂರ್ತಿಯವರು ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಅದಕ್ಕಿಂತ ಕಮ್ಮಿ ಏನು ಅನ್ನೋದು ಅವರಿಗೆ ಗೊತ್ತಿಲ್ಲ, ನಿಜವಾದ ದುಡಿಮೆಯನ್ನೇ ನಂಬಿ ಅವರು ಬದುಕುತ್ತಿದ್ದಾರೆ. ಹೀಗಾಗಿ ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ಅವರಿಗೆ ನಿಜವಾದ ಕಠಿಣ ಪರಿಶ್ರಮದಲ್ಲಿ ನಂಬಿಕೆ ಇದೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.

Written by - Puttaraj K Alur | Last Updated : Oct 30, 2023, 06:18 PM IST
  • ಭಾರತದ ಒಟ್ಟಾರೆ ಉತ್ಪಾದಕತೆ ಹೆಚ್ಚಿಸಲು ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂಬ ಹೇಳಿಕೆ
  • ನಾರಾಯಣಮೂರ್ತಿಯವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಪತ್ನಿ ಸುಧಾಮೂರ್ತಿ
  • ಸ್ವತಃ ನಾರಾಯಣಮೂರ್ತಿಯವರೇ 80-90 ಗಂಟೆ ಕೆಲಸ ಮಾಡುತ್ತಾರೆಂದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ
ನಾರಾಯಣಮೂರ್ತಿಯವರೇ ವಾರಕ್ಕೆ 80-90 ಗಂಟೆ ಕೆಲಸ ಮಾಡಿದ್ದಾರೆ: ಸುಧಾ ಮೂರ್ತಿ title=
ಪತಿ ಹೇಳಿಕೆ ಸಮರ್ಥಿಸಿಕೊಂಡ ಸುಧಾಮೂರ್ತಿ!

ಬೆಂಗಳೂರು: 'ಭಾರತದ ಒಟ್ಟಾರೆ ಉತ್ಪಾದಕತೆಯನ್ನು ಹೆಚ್ಚಿಸಲು ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು' ಸಲಹೆ ನೀಡಿದ್ದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿಯವರ ಹೇಳಿಕೆಯನ್ನು ಅವರ ಪತ್ನಿ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಸ್ವತಃ ನಾರಾಯಣಮೂರ್ತಿಯವರೇ ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಹೀಗಾಗಿ ಅವರು ಯುವಕರಿಗೆ ಅದನ್ನೇ ಸಲಹೆ ನೀಡಿದ್ದಾರೆ’ ಅಂತಾ ಹೇಳಿದ್ದಾರೆ.

ನಾರಾಯಣಮೂರ್ತಿಯವರು ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಅದಕ್ಕಿಂತ ಕಮ್ಮಿ ಏನು ಅನ್ನೋದು ಅವರಿಗೆ ಗೊತ್ತಿಲ್ಲ, ನಿಜವಾದ ದುಡಿಮೆಯನ್ನೇ ನಂಬಿ ಅವರು ಬದುಕುತ್ತಿದ್ದಾರೆ. ಹೀಗಾಗಿ ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ಅವರಿಗೆ ನಿಜವಾದ ಕಠಿಣ ಪರಿಶ್ರಮದಲ್ಲಿ ನಂಬಿಕೆ ಇದೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: 5G ಬಳಕೆದಾರರೇ ಎಚ್ಚರಿಕೆ! ಈ ಸೇವೆ ದುಬಾರಿಯಾಗಬಹುದೇ..?

‘ಕಠಿಣ ಪರಿಶ್ರಮದ ಬಗ್ಗೆ ನಾರಾಯಣಮೂರ್ತಿಯವರಿಗೆ ವಿಶೇಷ ನಂಬಿಕೆ ಇದೆ. ಹೀಗಾಗಿ ತಮ್ಮ ಅನುಭವದ ಆಧಾರದ ಮೇಲೆ ಅವರು ಇಂದಿನ ಯುವಜನತೆಗೆ ಸಲಹೆ ನೀಡಿದ್ದಾರೆ. ಕೆಲಸದ ವಿಷಯದಲ್ಲಿ ಅವರು ಏನು ನಂಬಿದ್ದಾರೋ ಅದನ್ನೇ ಹೇಳಿದ್ದಾರೆ’ ಅಂತಾ ಪತಿಯ ಹೇಳಿಕೆಯನ್ನು ಸುಧಾಮೂರ್ತಿಯವರು ಸಮರ್ಥಿಸಿಕೊಂಡಿದ್ದಾರೆ.

‘ಪ್ರಸ್ತುತ ದಿನಗಳಲ್ಲಿ ಕಾರ್ಪೊರೇಟ್ ಕಚೇರಿಗಳಲ್ಲಿ ವೃತ್ತಿ ಸಂಸ್ಕೃತಿ ಹೇಗಿದೆ? ಎಂಬ ಪ್ರಶ್ನೆಗೆ ಉತ್ತರಿಸಿದ ಸುಧಾಮೂರ್ತಿ, ‘ಈ ವಿಷಯದಲ್ಲಿ ಜನರು ತಮ್ಮದೇಯಾದ ವಿಭಿನ್ನ ಅಭಿವ್ಯಕ್ತಿ ವಿಧಾನಗಳನ್ನು ಹೊಂದಿದ್ದಾರೆ. ಆದರೆ ನಾರಾಯಣಮೂರ್ತಿಯವರು ಮಾತಿನಂತೆ ನಡೆದುಕೊಂಡವರು, ಅವರು ಹಾಗೆ ಬದುಕಿ ತೋರಿಸಿದವರು. ಹೀಗಾಗಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೊಸೆ ಕೈಗೆ ಸಿಕ್ಕಿ ಬಿತ್ತು ಅತ್ತೆ ಬಚ್ಚಿಟ್ಟಿದ್ದ 2 ಸಾವಿರ ರೂಪಾಯಿಯ ಗರಿ ಗರಿ ನೋಟು ! ಮುಂದೆ ?

ನಾರಾಯಣ ಮೂರ್ತಿಯವರು ಪಾಡ್‌ಕ್ಯಾಸ್ಟ್‌ನಲ್ಲಿ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ವಾರಕ್ಕೆ  ಯುವಕರು 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಅವರ ಹೇಳಿಕೆಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರೊಂದಿಗಿನ ಸಂವಾದದಲ್ಲಿ ಮಾತನಾಡಿದ್ದ ನಾರಾಯಣಮೂರ್ತಿ, ‘ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ’ ಎಂದು ಹೇಳಿದ್ದರು. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು 2ನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿ ಮಾಡಿದಂತೆ ಭಾರತದ ಯುವಕರು ಹೆಚ್ಚುವರಿ ಗಂಟೆಗಳ ಕೆಲಸವನ್ನು ಮಾಡಬೇಕಾಗುತ್ತದೆ’ ಎಂದು ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News