Adani-Hindenburg Case: ಸುಪ್ರೀಂ ಕೋರ್ಟ್ ನಲ್ಲಿ ತನ್ನ ಉತ್ತರ ದಾಖಲಿಸಿದ ಸೆಬಿ, 2016 ರಿಂದ ಅಡಾಣಿ ಕಂಪನಿ ತನಿಖೆಗೆ ನಕಾರ

Adani Hindenburg Case: ಸೆಬಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, 2016 ರಿಂದ ಅದಾನಿ ಕಂಪನಿಗಳ ಮೇಲೆ ಸೆಬಿ ತನಿಖೆ ನಡೆಸುತ್ತಿದೆ ಎಂಬ ಆರೋಪಗಳು ನಿರಾಧಾರ ಎಂದು ಹೇಳಲಾಗಿದೆ. 2016 ರ ನಂತರ ಯಾವುದೇ ಅದಾನಿ ಕಂಪನಿಯನ್ನು ತನಿಖೆಗೆ ಒಳಪಡಿಸಲಾಗಿಲ್ಲ ಎಂದು ಸೆಬಿ ಹೇಳಿದೆ.   

Written by - Nitin Tabib | Last Updated : May 15, 2023, 03:34 PM IST
  • ತಜ್ಞರ ಸಮಿತಿಯ ನೇತೃತ್ವವನ್ನು ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ವಹಿಸಿಕೊಂಡಿದ್ದಾರೆ,
  • ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಇತರ ಐದು ಸದಸ್ಯರು - ನಿವೃತ್ತ ನ್ಯಾಯಮೂರ್ತಿಗಳಾದ ಜೆಪಿ ದೇವಧರ್,
  • ಒಪಿ ಭಟ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಸಮಿತಿಯ ಭಾಗವಾಗಿರಲಿದ್ದಾರೆ.
Adani-Hindenburg Case: ಸುಪ್ರೀಂ ಕೋರ್ಟ್ ನಲ್ಲಿ ತನ್ನ ಉತ್ತರ ದಾಖಲಿಸಿದ ಸೆಬಿ, 2016 ರಿಂದ ಅಡಾಣಿ ಕಂಪನಿ ತನಿಖೆಗೆ ನಕಾರ title=
ವಾಣಿಜ್ಯ ಸುದ್ದಿ

Adani Hindenburg Case: ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ (ಸೆಬಿ) ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಉತ್ತರವನ್ನು ದಾಖಲಿಸಿದೆ. ಈ ಕುರಿತು ಸೆಬಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, 2016 ರಿಂದ ಅದಾನಿ ಸಮೂಹದ ಕಂಪನಿಗಳ ಕುರಿತು ಸೆಬಿ ತನಿಖೆ ನಡೆಸುತ್ತಿದೆ ಎಂಬ ಆರೋಪಗಳನ್ನು ನಿರಾಧಾರ ಎಂದು ಸೆಬಿ ಹೇಳಿದೆ. 2016 ರ ನಂತರ ಯಾವುದೇ ಅದಾನಿ ಕಂಪನಿಯನ್ನು ತನಿಖೆಗೆ ಒಳಪಡಿಸಲಾಗಿಲ್ಲ ಎಂದು ಸೆಬಿ ಹೇಳಿದೆ. ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠವು ಅದಾನಿ ಗ್ರೂಪ್ ವಿರುದ್ಧದ ಹಿಂಡೆನ್‌ಬರ್ಗ್ ರಿಸರ್ಚ್‌ನ ಆರೋಪಗಳನ್ನು ತನಿಖೆ ಮಾಡಲು ಆರು ತಿಂಗಳ ಕಾಲ ವಿಸ್ತರಣೆಯ ಬೇಡಿಕೆಯನ್ನು ಪರಿಗಣಿಸುತ್ತಿದೆ.

3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ
ಸೋಮವಾರ ನೀಡಿದ ಉತ್ತರದಲ್ಲಿ, ತನಿಖೆಯನ್ನು ಪೂರ್ಣಗೊಳಿಸಲು ತನಗೆ ಹೆಚ್ಚಿನ ಸಮಯವಕಾಶವನ್ನು ನೀಡಬೇಕ್ದು ಎಂದು ಸೆಬಿ ಪುನರುಚ್ಚರಿಸಿದೆ. ತನಿಖೆಯನ್ನು ಪೂರ್ಣಗೊಳಿಸಲು ಸೆಬಿಯಿಂದ ಆರು ತಿಂಗಳ ಕಾಲಾವಕಾಶ ಕೋರಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಆದರೆ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದಕ್ಕೂ ಮುನ್ನ ಮೇ 12 ರಂದು ಸೋಮವಾರ ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಲಾಗಿತ್ತು.

ಆಗಸ್ಟ್ 14 ರ ಸುಮಾರಿಗೆ ಮತ್ತೆ ವಿಚಾರಣೆ ನಡೆಯಲಿದೆ
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತನಿಖೆಗೆ 6 ತಿಂಗಳುಗಳ ಕಾಲಾವಕಾಶ ತುಂಬಾ ಹೆಚ್ಚಾಗಿದೆ. ಹೀಗಾಗಿ, ಆಗಸ್ಟ್ 14 ರ ಸುಮಾರಿಗೆ ನಾವು ಈ ಪ್ರಕರಣವನ್ನು ಆಲಿಸಲಿದ್ದೇವೆ ಎಂದು ಹೇಳಿದ್ದರು. ಅದಾನಿ-ಹಿಂಡೆನ್‌ಬರ್ಗ್ ವರದಿಯ ವಿಚಾರಣೆಯ ಸಂದರ್ಭದಲ್ಲಿ, 'ನಾವು ತನಿಖೆಗೆ ಸಮಯವನ್ನು ವಿಸ್ತರಿಸುತ್ತೇವೆ, ಆದರೆ ಆರು ತಿಂಗಳವರೆಗೆ ಅಲ್ಲ' ಎಂದು ಸೆಬಿಗೆ ತಿಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು. ನಾವು ಮೂರು ತಿಂಗಳ ಕಾಲ ಸಮಯವನ್ನು ವಿಸ್ತರಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ-Maharashtra Politics: ಶರದ್ ಪವಾರ್ ಮನೆಯಲ್ಲಿ ಎಂವಿಎ ಸಭೆ, 2024ರ ಸ್ಥಾನ ಹಂಚಿಕೆ ಕುರಿತು ಚರ್ಚೆ

ಮಾರ್ಚ್ 2ರಂದು ತನಿಖೆಗೆ ಆದೇಶ ನೀಡಲಾಗಿತ್ತು
ಹಿಂಡೆನ್‌ಬರ್ಗ್ ವರದಿಯಲ್ಲಿ ಅದಾನಿ ಗ್ರೂಪ್‌ನಿಂದ ಯಾವುದೇ ಭದ್ರತಾ ಕಾನೂನು ಉಲ್ಲಂಘನೆಯ ಕುರಿತು ತನಿಖೆ ನಡೆಸುವಂತೆ ಮಾರ್ಚ್ 2 ರಂದು ಸುಪ್ರೀಂ ಕೋರ್ಟ್ SEBI ಗೆ ನಿರ್ದೇಶನ ನೀಡಿದೆ ಎಂಬುದು ಇಲ್ಲಿ ಗಮನಾರ್ಹ. ಆ ಸಮಯದಲ್ಲಿ ಅದಾನಿ ಸಮೂಹದ ಮಾರುಕಟ್ಟೆ ಮೌಲ್ಯ US $ 140 ಶತಕೋಟಿಗಿಂತ ಹೆಚ್ಚಿನ ನಷ್ಟವನ್ನು ಅನುಭವಿಸಿತ್ತು.

ಇದನ್ನೂ ಓದಿ-Maharashtra Violence: ಅಕೋಲಾ ಬಳಿಕ ಇದೀಗ ಅಹ್ಮದ್ ನಗರದಲ್ಲಿ ಭುಗಿಲೆದ್ದ ಹಿಂಸಾಚಾರ

ಸಮಿತಿಯಲ್ಲಿ ಯಾರನ್ನು ಸೇರಿಸಲಾಗಿದೆ?
ತಜ್ಞರ ಸಮಿತಿಯ ನೇತೃತ್ವವನ್ನು ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ವಹಿಸಿಕೊಂಡಿದ್ದಾರೆ, ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಇತರ ಐದು ಸದಸ್ಯರು - ನಿವೃತ್ತ ನ್ಯಾಯಮೂರ್ತಿಗಳಾದ ಜೆಪಿ ದೇವಧರ್, ಒಪಿ ಭಟ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಸಮಿತಿಯ ಭಾಗವಾಗಿರಲಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News