Amit Shah: ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ, ರಾಜಕೀಯ ವಿದ್ಯಮಾನ ಚರ್ಚೆ ಸಾಧ್ಯತೆ

ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ಯಾವುದೇ ನಾಯಕರಿಗೂ ಅಧಿಕೃತ ಭೇಟಿಗೆ ಸಮಯ ನೀಡಿಲ್ಲವೆಂದು ತಿಳಿದುಬಂದಿದೆ.

Written by - Zee Kannada News Desk | Last Updated : Aug 3, 2022, 01:27 PM IST
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ
  • ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾ
  • ರಾಜ್ಯ ನಾಯಕರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಸಾಧ‍್ಯತೆ ಇದೆ
Amit Shah: ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ, ರಾಜಕೀಯ ವಿದ್ಯಮಾನ ಚರ್ಚೆ ಸಾಧ್ಯತೆ title=
ಇಂದು ಅಮಿತ್ ಶಾ ಬೆಂಗಳೂರಿಗೆ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಲಿಕಾನ್ ಸಿಟಿಗೆ ಆಗಮಿಸುತ್ತಿದ್ದಾರೆ. ಇದೇ ವೇಳೆ ಅವರು ರಾಜ್ಯ ನಾಯಕರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಸಾಧ‍್ಯತೆ ಇದೆ ಎಂದು ಹೇಳಲಾಗುತ್ತಿದೆ.

ದೆಹಲಿಯಿಂದ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಅಮಿತ್ ಶಾ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಅವರನ್ನು ಸ್ವಾಗತಿಸಲಿದ್ದಾರೆ. ಬಳಿಕ ಅವರು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ 'ಯೂನಿಟಿ ಕೇಕ್ ಕಟ್' ಮಾಡಿದ ಸಿದ್ದರಾಮಯ್ಯ

ತಮ್ಮ ಬೆಂಗಳೂರು ಭೇಟಿ ವೇಳೆ ಅಮಿತ್ ಶಾ ಅವರು ಬಜೆಪಿ ನಾಯಕರೊಂದಿಗೆ ರಾಜ್ಯದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಕೊಲೆ ಪ್ರಕರಣಗಳ ಬಗ್ಗೆಯೂ ರಾಜ್ಯ ನಾಯಕರಿಂದ ಶಾ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರೇ ಪಕ್ಷದ ವಿರುದ್ಧ ತಿರುಗಿಬಿದ್ದಿದ್ದಾರೆ. ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ‘ಕೇಸರಿ ಪಕ್ಷ’ದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತವಾಗಿದೆ. ಇದು ಬಿಜೆಪಿ ಮತ್ತು ನಾಯಕರಿಗೆ ಮುಜುಗರವನ್ನುಂಟು ಮಾಡಿದೆ. ಹೀಗಾಗಿ ಈ ಬಗ್ಗೆ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ

ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ಯಾವುದೇ ನಾಯಕರಿಗೂ ಅಧಿಕೃತ ಭೇಟಿಗೆ ಸಮಯ ನೀಡಿಲ್ಲವೆಂದು ತಿಳಿದುಬಂದಿದೆ. ನಾಳೆ(ಆಗಸ್ಟ್ 4) ಬೆಳಗ್ಗೆ ಖಾಸಗಿ ಹೊಟೇಲ್‌ನಲ್ಲಿ ‘ಸಂಕಲ್ಪ್ ಸೇ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ ಮಧ್ಯಾಹ್ನ ಬೆಂಗಳೂರಿನಿಂದ ವಾಪಸ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News