ಅರಿವು ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲಕ್ಕಾಗಿ ಅರ್ಜಿ ಆಹ್ವಾನ 

ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ 12% ರಷ್ಟು ಹಣವನ್ನು ಪಾವತಿಸಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

Written by - Manjunath N | Last Updated : Aug 23, 2024, 04:11 PM IST
  • ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ 12% ರಷ್ಟು ಹಣವನ್ನು ಪಾವತಿಸಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
  • ವಿದ್ಯಾರ್ಥಿಗಳು ಹಾಗೂ ಅರಿವು ವಿದ್ಯಾಭ್ಯಾಸ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು
  • ಇಂತಹ ವಿದ್ಯಾರ್ಥಿಗಳು ರಿನಿವಲ್ ಮೊತ್ತವನ್ನು ಪಾವತಿಸುವುದು ಅಗತ್ಯವಿರುವುದಿಲ್ಲ
 ಅರಿವು ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲಕ್ಕಾಗಿ ಅರ್ಜಿ ಆಹ್ವಾನ  title=

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆ ಅಡಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಎಂಬಿಬಿಎಸ್ ಎಂಡಿ ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆಯುಷ್, ಮಾಸ್ಟರ್ ಆಫ್ ಆಯುಷ್, ಬಿ.ಇ. ಬಿ.ಟೆಕ್, ಎಂಇ, ಎಂ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬಿಎಸ್‌ಸಿ ಇನ್ ಹಾರ್ಟಿಕಲ್ಚರ್. ಕೃಷಿ ಇಂಜಿನಿಯರಿAಗ್, ಡೈರಿ ಟೆಕ್ನಾಲಜಿ, ಫಾರೆಸ್ಟರಿ, ಪಶುವೈದ್ಯಕೀಯ ಮತ್ತು ಪ್ರಾಣಿ ತಂತ್ರಜ್ಞಾನ, ಮೀನುಗಾರಿಕೆ, ಸಿರಿಕಲ್ಚರ್, ಗೃಹ/ಸಮುದಾಯ ವಿಜ್ಞಾನಗಳು ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ. ಫಾರ್ಮಾ, ಎಂ. ಫಾರ್ಮಾ, ಫಾರ್ಮಾ ಡಿ ಆಂಡ್ ಡಿ ಫಾರ್ಮಾ ಕೋರ್ಸ್ಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆಯಡಿಯಲ್ಲಿ ಆನ್‌ಲೈನ್ ಮೂಲಕ ದಿನಾಂಕ: 17-08-2024 ರಿಂದ ದಿನಾಂಕ: 31-10-2024 ರ ವರೆಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಇದನ್ನೂ ಓದಿ: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ

ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ 12% ರಷ್ಟು ಹಣವನ್ನು ಪಾವತಿಸಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಅರಿವು ವಿದ್ಯಾಭ್ಯಾಸ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಇಂತಹ ವಿದ್ಯಾರ್ಥಿಗಳು ರಿನಿವಲ್ ಮೊತ್ತವನ್ನು ಪಾವತಿಸುವುದು ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗಮದ ವೆಬ್‌ಸೈಟ್: kmdconline.karnataka.gov.in ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ತೆಗೆದುಕೊಂಡು ವ್ಯಾಸಂಗ ಪ್ರಮಾಣಪತ್ರ, ಕಾಲೇಜು ಶುಲ್ಕ ವಿನ್ಯಾಸ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಹಿಂದಿನ ವರ್ಷ ಉತ್ತೀರ್ಣರಾದ ಅಂಕಪಟ್ಟಿ, ಬ್ಯಾಂಕ್ ಖಾತೆಯ ವಿವರ, 12% ಸಾಲದ ಮೊತ್ತ ಪಾವತಿಸಿದ ರಸೀದಿ, ಕೆಇಎ ಪ್ರವೇಶ ಆದೇಶದ ಪ್ರತಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ನೋಟರಿಯೊಂದಿಗೆ ಇಂಡೆಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ಘೋಷಣೆ ಪತ್ರ. ಈ ಎಲ್ಲಾ ದಾಖಲಾತಿಗಳೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31-10-2024 ಆಗಿರುತ್ತದೆ. ಹಾಗೂ ಸದರಿ ದಾಖಲಾತಿಗಳನ್ನು ಆನ್‌ಲೈನ್ ಅರ್ಜಿಯ ಜೊತೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಚ್ಚುತರಾವ್ ಲೇ ಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.

ಇದನ್ನೂ ಓದಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ದೂರವಾಣಿ ಸಂಖ್ಯೆ:08182-228262 ಮತ್ತು ಜಿಲ್ಲಾ ವ್ಯವಸ್ಥಾಪಕರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News