ಮೈಸೂರು ರಂಗಾಯಣದಲ್ಲಿ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣದಿಂದ 2023-24ನೇ ಸಾಲಿನ ಹತ್ತು ತಿಂಗಳ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : May 20, 2023, 09:07 PM IST
  • ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.
  • 18 ರಿಂದ 28 ವಯಸ್ಸಿನ ವಯೊಮಿತಿ ನಿಗದಿಪಡಿಸಲಾಗಿದ್ದು,
  • ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು
ಮೈಸೂರು ರಂಗಾಯಣದಲ್ಲಿ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗೆ ಅರ್ಜಿ ಆಹ್ವಾನ title=
file photo

ಮೈಸೂರು : ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣದಿಂದ 2023-24ನೇ ಸಾಲಿನ ಹತ್ತು ತಿಂಗಳ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಂಗತರಬೇತಿ ಕೋರ್ಸ್ಗೆ ಸೇರಲು ಇಚ್ಚಿಸುವ ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. 18 ರಿಂದ 28 ವಯಸ್ಸಿನ ವಯೊಮಿತಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.

ಇದನ್ನೂ ಓದಿ: "ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ"

ಅರ್ಜಿಯನ್ನು ರಂಗಾಯಣದ ವೆಬ್‌ಸೈಟ್  http://rangayanamysore.karnataka.gov.in ನಲ್ಲಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಮತ್ತು ರಂಗ ಕೈಪಿಡಿ ಸೇರಿ (ಸಾಮಾನ್ಯ ವರ್ಗಕ್ಕೆ  230ರೂ, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 180ರೂ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು 570005 ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 05ರ ಸಂಜೆ 05.30 ಗಂಟೆಯೊಳಗೆ ತಲುಪುವಂತೆ ಅಂಚೆಯ ಮೂಲಕ ಅಥವಾ ಖುದ್ದಾಗಿ ರಂಗಾಯಣದ ಕಚೇರಿಗೆ ತಲುಪಿಸಬೇಕು.

ಇದನ್ನೂ ಓದಿ: Video: ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧಕ್ಕೆ ಎಂಟ್ರಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪತ್ರದ ಮೂಲಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುತ್ತದೆ. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಸಂದರ್ಶನದ ದಿನ ಮಧ್ಯಾಹ್ನ ಲಘುಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುತ್ತದೆ. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2512639, ಮೊ.ಸಂ: 9448938661, 9148827720, 8867514311 ಗೆ ಸಂಪರ್ಕಿಸುವಂತೆ ಮೈಸೂರು ರಂಗಾಯಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News