ಡಿಫೆನ್ಸ್ ಕೋಟಾದಡಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಅರ್ಜಿ ಅವಧಿ ವಿಸ್ತರಣೆ

ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Written by - Manjunath N | Last Updated : Jul 31, 2024, 06:07 PM IST
  • ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ
  • ಅರ್ಜಿಯನ್ನು 2024 ರ ಜುಲೈ 09 ರೊಳಗಾಗಿ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿತ್ತು.
  • ಇದೀಗ ಈ ಸಮಯವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.
ಡಿಫೆನ್ಸ್ ಕೋಟಾದಡಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಅರ್ಜಿ ಅವಧಿ ವಿಸ್ತರಣೆ title=
ಸಾಂಧರ್ಭಿಕ ಚಿತ್ರ

ಶಿವಮೊಗ್ಗ: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗ ಮಾಡಲು ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಜುಲೈ 20 ರವರೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ- Kerala Landslide: ಚಾಮರಾಜನಗರದ ಇಬ್ಬರು ಸಾವು, ಇಬ್ಬರು ನಾಪತ್ತೆ, ಓರ್ವನಿಗೆ ಗಾಯ

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು 2024 ರ ಜುಲೈ 09 ರೊಳಗಾಗಿ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿತ್ತು. ಇದೀಗ ಈ ಸಮಯವನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: "ದಲಿತ ವಿರೋಧಿ ನೀತಿ ಬಯಲಾಗುವ ಭಯದಿಂದಲೇ ಬಿಜೆಪಿ ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು-ಸಿಎಂ ಸಿದ್ದರಾಮಯ್ಯ ಟೀಕೆ

ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News