Job Alert: 25 ಸಾವಿರ ʼಅಗ್ನಿವೀರ್' ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ

Indian Army Agniveer Recruitment 2024: ಫೆಬ್ರವರಿ 8ರಿಂದ ʼಅಗ್ನಿವೀರ್ʼ ನೇಮಕಾತಿ ರ್ಯಾಲಿಗಾಗಿ ನೋಂದಣಿ ಪ್ರಾರಂಭಿಸಿದ್ದು, ಮಾ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

Written by - Puttaraj K Alur | Last Updated : Mar 5, 2024, 09:46 AM IST
  • ಭಾರತೀಯ ಸೇನೆಯು 'ಅಗ್ನಿವೀರ್' ನೇಮಕಾತಿಯಡಿ 25 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
  • ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
  • ಅಭ್ಯರ್ಥಿಗಳು joinindianarmy.nic.in ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
Job Alert: 25 ಸಾವಿರ ʼಅಗ್ನಿವೀರ್' ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ   title=
ʼಅಗ್ನಿವೀರ್‌ʼ ನೇಮಕಾತಿ

ನವದೆಹಲಿ: ಭಾರತೀಯ ಸೇನೆಯು 'ಅಗ್ನಿವೀರ್' ನೇಮಕಾತಿಯಡಿ 25 ಸಾವಿರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ ಮಾರ್ಚ್ 22 ಕೊನೆಯ ದಿನಾಂಕವಾಗಿದೆ.

ನೇಮಕಾತಿ ವಿವರ: ಭಾರತೀಯ ಸೇನೆಯಲ್ಲಿ ಖಾಲಿ ಇರುವ 25 ಸಾವಿರ ʼಅಗ್ನಿವೀರ್ʼ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಕೇವಲ ಆನ್‌ಲೈನ್‌ ಮೂಲಕವಷ್ಟೇ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಸೇವೆಗೆ ನೀಯೋಜಿಸಲಾಗುತ್ತದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಬೀಳಲಿದೆ: ಮಾಜಿ ಸಚಿವ ರೇಣುಕಾಚಾರ್ಯ

ಫೆಬ್ರವರಿ 8ರಿಂದ ʼಅಗ್ನಿವೀರ್ʼ ನೇಮಕಾತಿ ರ್ಯಾಲಿಗಾಗಿ ನೋಂದಣಿ ಪ್ರಾರಂಭಿಸಿದ್ದು, ಮಾ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್‌ joinindianarmy.nic.inಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು joinindianarmy.nic.in ʼಅಗ್ನಿವೀರ್ʼ ನೇಮಕಾತಿಗೆ ಮೀಸಲಾಗಿರುವ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ʼಅಗ್ನಿವೀರ್ ನೇಮಕಾತಿ 2024ʼ ವಿಭಾಗವನ್ನು ವೀಕ್ಷಿಸಿ ಮತ್ತು ಅರ್ಜಿ ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ.
  • ಖಾತೆಯನ್ನು ರಚಿಸಲು ಅಗತ್ಯ ವಿವರಗಳನ್ನು ಒದಗಿಸುವ ಮೂಲಕ ಹೆಸರು ನೋಂದಾಯಿಸಿ.
  • ಹೊಸದಾಗಿ ರಚಿಸಲಾದ ರುಜುವಾತುಗಳನ್ನು ಬಳಸಿಕೊಂಡು ಲಾಗಿನ್ ಮಾಡಿ.
  • ನಿಖರವಾದ ಮಾಹಿತಿಯೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರಗಳು, ಗುರುತು ಮತ್ತು ಛಾಯಾಚಿತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಅರ್ಜಿ ಸಲ್ಲಿಸಿ.
  • ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿರಿ.

ಇದನ್ನೂ ಓದಿ: "ಕರ್ನಾಟಕದಲ್ಲಿ ಬಾಬರ್‌ ಮತ್ತು ಟಿಪ್ಪು ಸರ್ಕಾರವಿದೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News