Job Updates: ವೈದ್ಯಕೀಯ / ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

Written by - Manjunath N | Last Updated : Aug 9, 2024, 06:34 PM IST
  • ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.
  • ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.
  • ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.
Job Updates: ವೈದ್ಯಕೀಯ / ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ title=

ಶಿವಮೊಗ್ಗ: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂರ‍್ನ್ಶಿಪ್ ಪೂರೈಸಿರಬೇಕು.  

ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು,

ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.  

ಇದನ್ನೂ ಓದಿ: ಎಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ ಮಂಜೂರಾತಿಗೆ ರಾಜ್ಯಪಾಲರಿಗೆ ಲೋಕಾಯುಕ್ತ  ಮನವಿ

ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.

ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು.

ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ  ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಮಹಾನಗರ ಪಾಲಿಕೆ/ಸಂಬಂಧಿಸಿದ ಪಂಚಾಯತ್‌ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರಗಳೊಂದಿಗೆ ಆ.13 ರಂದು ಮಧ್ಯಾಹ್ನ 1.30ರೊಳಗಾಗಿ ಸಲ್ಲಿಸುವುದು.

ಅದೇ ದಿನ ಸಂಜೆ 5.30ರವೆಗೆ ಎಲ್ಲಾ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-200337 ನ್ನು ಸಂಪರ್ಕಿಸುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News