ಕೊಪ್ಪಳ ವಿಶ್ವವಿದ್ಯಾಲಯ: ಸ್ನಾತಕ ಪದವಿಗಳ ಪ್ರವೇಶಾತಿಗೆ ಸೆ.22ರವರೆಗೆ ಕಾಲಾವಕಾಶ

ಕೊಪ್ಪಳ ವಿಶ್ವವಿದ್ಯಾಲಯದಿಂದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ ಯ ಎರಡನೇಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇವರು 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ.

Written by - Manjunath N | Last Updated : Sep 14, 2023, 11:29 PM IST
  • 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿ (ದಂಡ ಸಹಿತ) ಕೊನೆಯ ದಿನಾಂಕವು ಈ ಹಿಂದೆ ಸೆಪ್ಟೆಂಬರ್ 19ರವರೆಗೆ ವಿಸ್ತರಿಸಲಾಗಿತ್ತು.
  • ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 22ರವರೆಗೆ ವಿಸ್ತರಿಸಲಾಗಿದೆ
  • ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9448687862 ಗೆ ಸಂಪರ್ಕಿಸಬಹುದಾಗಿದೆ
 ಕೊಪ್ಪಳ ವಿಶ್ವವಿದ್ಯಾಲಯ: ಸ್ನಾತಕ ಪದವಿಗಳ ಪ್ರವೇಶಾತಿಗೆ ಸೆ.22ರವರೆಗೆ ಕಾಲಾವಕಾಶ title=

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾಲಯದಿಂದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ ಯ ಎರಡನೇಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇವರು 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ- ಪುಷ್ಪ ಸಿನಿಮಾದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ

ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ/ ಅನುದಾನರಹಿತ ಕಾಲೇಜುಗಳು ದ್ವಿತೀಯ ಪಿಯುಸಿ ಯ ಎರಡನೆಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಗೊಳ್ಳುವ ವಿದ್ಯಾರ್ಥಿಗಳಿಗೆ ಫಲಿತಾಂಶದ ಆಧಾರದ ಮೇಲೆ ಪದವಿ ತರಗತಿಗಳಿಗೆ ಪ್ರವೇಶಾತಿಯ ಕಾಲಮಿತಿಯನ್ನು ಸೆ. 13 ರಿಂದ 10 ದಿನಗಳ ಕಾಲಮಿತಿಯೊಳಗೆ ಪ್ರವೇಶಾತಿ ನೀಡಲು ಹಾಗೂ ಸದರಿ ವಿದ್ಯಾರ್ಥಿಗಳಿಗೆ ಪೂರಕ ತರಗತಿಗಳನ್ನು ಬ್ರಿಡ್ಜ ಕೋರ್ಸ ಮುಖಾಂತರ ನಡೆಸಲು ಸರ್ಕಾರವು ಆದೇಶ ನೀಡಿರುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹೊರಡಿಸಿದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ಶೈಕ್ಷಣಿಕ ವೇಳಾಪಟ್ಟಿಯನ್ನು ಯಥಾವತ್ತಾಗಿ ಮತ್ತು ಕಡ್ಡಾಯವಾಗಿ ಪಾಲಿಸಲು ಈ ಮೂಲಕ ಸೂಚಿಸಲಾಗಿದೆ.

ಇದನ್ನೂ ಓದಿ: "ಯಡಿಯೂರಪ್ಪ ಅವರೇ ನಿಮಗೆ ಮೋಸ ಮಾಡಿದ ಕುಮಾರಸ್ವಾಮಿ ಅವರನ್ನು ಮತ್ತೆ ಹೇಗೆ ಸೇರಿಸಿಕೊಳ್ಳುತ್ತಿದ್ದೀರಿ"

2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿ (ದಂಡ ಸಹಿತ) ಕೊನೆಯ ದಿನಾಂಕವು ಈ ಹಿಂದೆ ಸೆಪ್ಟೆಂಬರ್ 19ರವರೆಗೆ ವಿಸ್ತರಿಸಲಾಗಿತ್ತು. ಇದೀಗ ದ್ವಿತೀಯ ಪಿ.ಯು.ಸಿಯ ಎರಡನೇಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಸ್ನಾತಕ ಪದವಿಗಳ ಪ್ರವೇಶಾತಿ ದಂಡ ರಹಿತ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 22ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9448687862 ಗೆ ಸಂಪರ್ಕಿಸಬಹುದಾಗಿದೆ. ಈ ಅಧಿಸೂಚನೆಯ ಮಾಹಿತಿಯನ್ನು ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲಾ ಮಹಾವಿದ್ಯಾಲಯಗಳ ಪ್ರಾಚಾರ್ಯರುಗಳಿಗೆ ಕಳುಹಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

 

Trending News