ಸೋಷಿಯಲ್ ಮೀಡಿಯಾ ಪೋಸ್ಟ್ ಕಂಡು ಕುರಿ ಕಾಯುತ್ತಿದ್ದ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ ಸಿಎಂ

CM Siddaramaiah: ಪೋಷಕರ ಒತ್ತಡದಿಂದಾಗಿ ವಿದ್ಯೆ ಬಿಟ್ಟು ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಮರಳುವಂತೆ ಮಾಡಿ ಬಾಲ್ಯದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ. 

Written by - Yashaswini V | Last Updated : Sep 12, 2023, 03:06 PM IST
  • ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ
  • ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ.
  • ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ- ಸಿಎಂ ಸಿದ್ದರಾಮಯ್ಯ
ಸೋಷಿಯಲ್ ಮೀಡಿಯಾ ಪೋಸ್ಟ್ ಕಂಡು ಕುರಿ ಕಾಯುತ್ತಿದ್ದ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ ಸಿಎಂ  title=
Pic Credits@@CMofKarnataka

CM Siddaramaiah: ಸೋಷಿಯಲ್ ಮೀಡಿಯಾ ಪೋಸ್ಟ್ ಕಂಡು 24ಗಂಟೆಗಳ ಒಳಗೆ ಕುರಿ ಕಾಯುತ್ತಿದ್ದ 11 ವರ್ಷದ ಬಾಲಕನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಗೆ ಮರಳುವಂತೆ ಮಾಡಿದ್ದಾರೆ. 

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ 11 ವರ್ಷದ ಬಾಲಕ ಯೋಗೇಶ್, ಓದುವ ವಯಸ್ಸಿನಲ್ಲಿ ಶಾಲೆ ತೊರೆದು ಕುರಿ ಕಾಯುವ ಕೆಲಸ ಮಾಡುತ್ತಿದ್ದ. ಕಳೆದೆರಡು ವರ್ಷಗಳಿಂದ ಇದನ್ನೇ ಕಾಯಕವಾಗಿಸಿಕೊಂಡಿದ್ದ ಯೋಗೇಶ್ ಬಗ್ಗೆ ಸಾಮಾಜಿಕ ಬಳಕೆದಾರರೊಬ್ಬರು ಮಾಹಿತಿ ನೀಡಿದ್ದರು. 

ಮಹೇಂದ್ರ (ಮಹೇಂದ್ರ್85260219) ಎಂಬಾತ ಟ್ವಿಟ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯನ್ನು ಟ್ಯಾಗ್ ಮಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ,  ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸಾಪುರ ಗ್ರಾಮದ ಮಂಜಣ್ಣ ಎಂಬುವರ ಪುತ್ರ ಯೋಗೇಶ್ ವಯಸ್ಸು  (11) 2 ವರ್ಷದಿಂದ ಕುರಿ ಕಾಯುತ್ತ ಇದ್ದಾನೆ. ನಾಗರಿಕ ಜನಗಳ ಮದ್ಯ ಸ್ವಂತ ಮಗನನ್ನೇ ಅನಾಗರಿಕ ಮಾಡಲು ಹೊರಟಿರುವುದು ನೋವಿನ ಸಂಗತಿ ಎಂದು ಬರೆದಿದ್ದರು. 

ಇದನ್ನೂ ಓದಿ- ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಸಿಎಂ ಸಿದ್ದರಾಮಯ್ಯ

ಈ ಟ್ವಿಟ್ಟರ್ ಅನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟ್ವೀಟ್ ಮಾಡಿದ 24 ಗಂಟೆಗಳ ಒಳಗೆ 11 ವರ್ಷದ ಬಾಲಕ ಯೋಗೇಶ್ ನನ್ನು ಶಾಲೆಗೆ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನೂ ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಬಾಲ್ಯದ ಅನುಭವವನ್ನು ಮೆಲುಕು ಹಾಕಿದ್ದು, ಈ ರೀತಿ ಬರೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ. 

ಇದನ್ನೂ ಓದಿ- ವಿದ್ಯೆ ಕಲಿತು ಜಾತಿವಾದಿಗಳಾದರೆ ಪ್ರಯೋಜನವಿಲ್ಲ: ಸಿಎಂ ಸಿದ್ದರಾಮಯ್ಯ

ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News