OMG News: ‘ಲವ್’ಗೆ ಒಂದೇ ವಾರದಲ್ಲಿ ಒಂದೇ ಶಾಲೆಯ 3 ವಿದ್ಯಾರ್ಥಿನಿಯರು ಬಲಿ!

Love affairs Suicide Case: ಒಂದೇ ಶಾಲೆಯಲ್ಲಿ 11-12ನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರು ಡಿ.10ರಿಂದ 18ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Written by - Puttaraj K Alur | Last Updated : Dec 28, 2022, 06:58 AM IST
  • ಲವ್ ಕೇಸ್‍ಗೆ ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳ ಆತ್ಮಹತ್ಯೆ
  • ಉತ್ತರ ಪ್ರದೇಶದ ಸೀತಾಪುರದಲ್ಲಿ 10 ದಿನದಲ್ಲಿ ಮೂವರು ವಿದ್ಯಾರ್ಥಿನಿಯರ ಸೂಸೈಡ್
  • ಮೂವರ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣವೆಂದು ಪೊಲೀಸ್ ತನಿಖೆಯಿಂದ ಬಹಿರಂಗ
OMG News: ‘ಲವ್’ಗೆ ಒಂದೇ ವಾರದಲ್ಲಿ ಒಂದೇ ಶಾಲೆಯ 3 ವಿದ್ಯಾರ್ಥಿನಿಯರು ಬಲಿ! title=
ಪ್ರೇಮಪ್ರಕರಣಕ್ಕೆ ಮೂವರು ವಿದ್ಯಾರ್ಥಿನಿಯರು ಬಲಿ!

ಉತ್ತರಪ್ರದೇಶ: ಉತ್ತರ ಪ್ರದೇಶದ ಸೀತಾಪುರದಲ್ಲಿ ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕುರುಡು ಪ್ರೀತಿಗಾಗಿ ಈ ಮೂವರು 10 ದಿನಗಳ ಅಂತರದಲ್ಲಿ ದುಡುಕು ನಿರ್ಧಾರ ತೆಗೆದುಕೊಂಡು ಸಾವಿನ ಮನೆಯ ಬಾಗಿಲು ತಟ್ಟಿದ್ದಾರೆ.

ಒಂದೇ ಶಾಲೆಯಲ್ಲಿ 11-12ನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರು ಡಿ.10ರಿಂದ 18ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣವೆಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಈ ಯಾವುದೇ ಪ್ರಕರಣದಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಭಾಗಿಯಾಗಿಲ್ಲವೆಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸೀತಾಪುರ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ)ರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video : ರಸ್ತೆಬದಿ‌ ನಿಂತಿತ್ತು ಹಸು, ಹಿಂದೆ ಬಂತು ಚಿರತೆ.. ಅಷ್ಟರಲ್ಲಿ ನಡೀತು ಆಘಾತಕಾರಿ ಘಟನೆ!

ಡಿ.10ರಂದು ನಡೆದ ಮೊದಲ ಆತ್ಮಹತ್ಯೆ ಪ್ರಕರಣದಲ್ಲಿ ಯುವತಿ ತನ್ನ ನೆರೆಯವನಾದ ರಾಹುಲ್ ಯಾದವ್ ಜೊತೆ ಪ್ರೇಮ ಸಂಬಂಧ ಹೊಂದಿದ್ದಳಂತೆ. ಇವರಿಬ್ಬರ ಸಂಬಂಧವನ್ನು ಹುಡುಗಿಯ ಮನೆಯವರು ಒಪ್ಪಿರಲಿಲ್ಲ. ಹೀಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ರಾಹುಲ್ ಯಾದವ್​ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.   

2ನೇ ಆತ್ಮಹತ್ಯೆಯ ಘಟನೆ ಡಿ.12ರಂದು ನಡೆದಿದ್ದು, ಅಂಕಿತ್ ಪಾಸ್ವಾನ್ ಎಂಬ ಯುವಕನನ್ನು ಓರ್ವ ವಿದ್ಯಾರ್ಥಿನಿ ಪ್ರೀತಿಸುತ್ತಿದ್ದಳು. ಹುಡುಗಿಯ ಮನೆಯವರು ಈ ಸಂಬಂಧಕ್ಕೆ ಒಪ್ಪಿದ್ದರು, ಆದರೆ ಅಂಕಿತ್​ನ ತಾಯಿ ಮದುವೆಗೆ ವರಕ್ಷಿಣೆಯಾಗಿ ಬೈಕ್ ಕೇಳಿದ್ದರಂತೆ. ಇದರಿಂದ ದುಃಖದಲ್ಲಿ ಮುಳುಗಿದ ಹುಡುಗಿ ಇಲಿ ಪಾಷಾಣ ಕುಡಿದು ಸಾವನ್ನಪ್ಪಿದ್ದಾಳೆಂದು ತಿಳಿದುಬಂದಿದೆ.

ಇದನ್ನೂ ಓದಿ: WATCH : ಹೆತ್ತವ್ವನ ಕೊನೆಯಾಸೆ ಈಡೇರಿಸಲು ICUನಲ್ಲಿ ಮದುವೆಯಾದ ಮಗಳು, ಕಣ್ಣೀರು ತರಿಸುತ್ತೆ ವಿಡಿಯೋ 

3ನೇ ಘಟನೆಯಲ್ಲಿ ನದಿಗೆ ಹಾರಿ ಮತ್ತೊಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಸಹ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳಂತೆ. ಯುವತಿಯ ಸಂಬಂಧಿ ಸಂಜಯ್ ತಿವಾರಿ ಆಕೆಯ ಪ್ರೇಮ ಪ್ರಕರಣದ ಬಗ್ಗೆ ಪೋಷಕರಿಗೆ ತಿಳಿಸಿದ್ದ. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗಿದೆ. ಆದರೆ ಈ ಪ್ರಕರಣದಲ್ಲಿ ಸಂಜಯ್ ತಿವಾರಿ ಭಾಗಿಯಾಗಿದ್ದಾನೆಂದು ಮೃತ ಯುವತಿಯ ಸಹೋದರಿ ಆರೋಪಿಸಿದ್ದಾಳೆ. ನಾವು ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ 4ನೇ ಪ್ರಕರಣದಲ್ಲಿ ಸ್ನೇಹಿತರು ಮಾಡಿದ ಕಾಮೆಂಟ್‌ಗಳಿಂದ ಬೇಜಾರು ಮಾಡಿಕೊಂಡ ಯುವತಿಯೊಬ್ಬಳು ತನ್ನ ಮಣಿಕಟ್ಟನ್ನು ಸೀಳಿಸಿಕೊಂಡಿದ್ದಾಳೆ. ಆಕೆಗೆ ಕೌನ್ಸೆಲಿಂಗ್ ಮಾಡಲಾಗಿದ್ದು, ಈಗ ಆರೋಗ್ಯವಾಗಿದ್ದಾಳೆಂದು ಸೀತಾಪುರದ ಎಎಸ್​​ಪಿ ಮಾಹಿತಿ ನೀಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News