Uttarakhand: ನಾಲೆಗೆ ಕಾರು ಬಿದ್ದು 9 ಮಂದಿ ಸ್ಥಳದಲ್ಲೇ ಸಾವು..!

ಉತ್ತರಾಖಂಡದ ಪಿಥೋರಗಢದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಹಳ್ಳಕ್ಕೆ ಕಾರೊಂದು ಬಿದ್ದಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 22, 2023, 01:26 PM IST
  • ಉತ್ತರಾಖಂಡದ ಪಿಥೋರಗಢದಲ್ಲಿ ಭೀಕರ ಅಪಘಾತ ಸಂಭವಿಸಿದೆ
  • ನಾಲೆಯೊಂದಕ್ಕೆ ಕಾರು ಬಿದ್ದು 9 ಮಂದಿ ಸ್ಥಳದ್ಲಲೇ ಸಾವನ್ನಪ್ಪಿದ್ದಾರೆ
  • ಘಟನೆ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ
Uttarakhand: ನಾಲೆಗೆ ಕಾರು ಬಿದ್ದು 9 ಮಂದಿ ಸ್ಥಳದಲ್ಲೇ ಸಾವು..! title=
ಪಿಥೋರಗಢದಲ್ಲಿ ಭೀಕರ ಅಪಘಾತ

ಉತ್ತರಾಖಂಡ್: ಉತ್ತರಾಖಂಡದ ಪಿಥೋರಗಢದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಾಲೆಯೊಂದಕ್ಕೆ ಕಾರು ಬಿದ್ದು 9 ಮಂದಿ ಸ್ಥಳದ್ಲಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Watch: ರಾಷ್ಟ್ರಗೀತೆ ಮೊಳಗುತ್ತಿದ್ದಂತೆ ಮಳೆಯಲ್ಲೇ ನೆನಯುತ್ತಾ ನಿಂತ ಪ್ರಧಾನಿ ಮೋದಿ!

ಬಾಗೇಶ್ವರದ ಶಾಮಾದಿಂದ ಪಿಥೋರಗಢದ ನಾಚಾನಿ ಕಡೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಆಳವಾದ ನಾಲೆಗೆ ಕಾರು ಬಿದ್ದ ಪರಿಣಾಮ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: PM Modi In US: ಪ್ರಧಾನಿ ಮೋದಿ ಭಾಷಣ ಬಹಿಷ್ಕರಿಸಲು ಮುಂದಾದ ಇಬ್ಬರು ಅಮೆರಿಕ ಸಂಸದರು

ಇನ್ನು ಅಪಘಾತದ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಾಗೇಶ್ವರದ ಶಾಮಾದಿಂದ ಪಿಥೋರಗಢದ ನಾಚಾನಿ ಕಡೆಗೆ ಬರುತ್ತಿದ್ದ ವಾಹನ ಅಪಘಾತದಿಂದ ಅನೇಕ ಜನರು ಸಾವನ್ನಪ್ಪಿರುವ ಬಗ್ಗೆ ಅತ್ಯಂತ ದುಃಖದ ಸಂಗತಿ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಗಲಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ: ಶಾಂತಿ: ಶಾಂತಿ:’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News