Bengaluru: ATMಗೆ ಹಣ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ವ್ಯಕ್ತಿ ಪರಾರಿ!

ATM Theft in Bengaluru: ಆರೋಪಿ ರಾಜೇಶ್ ಮೇಸ್ತಾ ಎಟಿಎಂಗಳಿಗೆ ಹಣ ತುಂಬಿಸುವ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್‍ ಸಂಸ್ಥೆಯ ನೌಕರನಾಗಿದ್ದ. ಕಳೆದ 11 ವರ್ಷದಿಂದ ಸಂಸ್ಥೆಯಲ್ಲಿ ಈತ ಕೆಲಸ ಮಾಡುತ್ತಿದ್ದ.

Written by - Puttaraj K Alur | Last Updated : Feb 7, 2023, 02:47 PM IST
  • ಎಟಿಎಂಗೆ ಹಣ ತುಂಬಿಸಬೇಕಿದ್ದ 1 ಕೋಟಿ ರೂ. ಹಣದ ಜೊತೆ ವ್ಯಕ್ತಿಯೊಬ್ಬ ಪರಾರಿ
  • ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
  • ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್‍ ಸಂಸ್ಥೆಯಲ್ಲಿ ಕೆಲಸಕ್ಕಿದ್ದವನಿಂದ ಕೃತ್ಯ
Bengaluru: ATMಗೆ ಹಣ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ವ್ಯಕ್ತಿ ಪರಾರಿ! title=
1 ಕೋಟಿ ರೂ. ಹಣದ ಜೊತೆ ವ್ಯಕ್ತಿ ಪರಾರಿ!

ಬೆಂಗಳೂರು: ಎಟಿಎಂಗೆ ಹಣ ತುಂಬಿಸಬೇಕಿದ್ದ 1 ಕೋಟಿ ರೂ. ಹಣದ ಜೊತೆ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ ಮೇಸ್ತಾ ಎಂಬಾತನೇ ಕೋಟಿ ಹಣದ ಜೊತೆಗೆ ಎಸ್ಕೇಪ್ ಆಗಿರುವ ಆರೋಪಿ.

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಹೇಳಿಕೆ; ‘ಕಮಲ’ ನಾಯಕರಲ್ಲಿ ತಲ್ಲಣ!

ಆರೋಪಿ ರಾಜೇಶ್ ಮೇಸ್ತಾ ಎಟಿಎಂಗಳಿಗೆ ಹಣ ತುಂಬಿಸುವ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್‍ ಸಂಸ್ಥೆಯ ನೌಕರನಾಗಿದ್ದ. ಕಳೆದ 11 ವರ್ಷದಿಂದ ಸಂಸ್ಥೆಯಲ್ಲಿ ಈತ ಕೆಲಸ ಮಾಡುತ್ತಿದ್ದ. ಆದರೆ ಜನವರಿ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಪೋನ್ ಸ್ವಿಚ್ ಅಪ್ ಮಾಡಿ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು

ಇದರಿಂದ ಅನುಮಾನಗೊಂಡು‌ ಸಂಸ್ಥೆಯಿಂದ ರಾಜೇಶ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಆಡಿಟ್ ನಡೆದಿದೆ. ಈ ವೇಳೆ 1 ಕೋಟಿ 3 ಲಕ್ಷ ರೂ. ಹಣದ ಸಮೇತ ಆರೋಪಿ ಪರಾರಿಯಾಗಿರುವುದು ಗೊತ್ತಾಗಿದೆ. ಸದ್ಯ ಈ ಬಗ್ಗೆ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆದಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News