ಪ್ರೇಯಸಿಯ ಪತಿಯನ್ನು ಹತ್ಯೆಗೈದು 6 ತುಂಡುಗಳಾಗಿ ಮೃತದೇಹ ಕತ್ತರಿಸಿ ಹೂತಿಟ್ಟ ವ್ಯಕ್ತಿ!

ಜುಲೈ 11ರಂದು ಮನೆಯಿಂದ ಹೋಗಿದ್ದ ಜೋಗೇಂದ್ರ ನಂತರ ವಾಪಸ್ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಅವರ ತಂದೆ, ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ‘ನನ್ನ ಮಗನನ್ನು ಹತ್ಯೆ ಮಾಡಲಾಗಿದೆ, ಇದರಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದರು.

Written by - Puttaraj K Alur | Last Updated : Jul 19, 2023, 07:52 PM IST
  • ಪ್ರೇಯಸಿಯ ಪತಿಯನ್ನು ಹತ್ಯೆಗೈದು ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿದ ವ್ಯಕ್ತಿ
  • ಮನೆಯಿಂದ ಸಮೀಪದ ತೋಟದಲ್ಲಿ ಮೃತವ್ಯಕ್ತಿಯ ತಲೆ, ಕೈ ಮತ್ತು ಕಾಲುಗಳು ಪತ್ತೆ
  • ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಹತ್ಯೆ ಮಾಡಿದ್ದ ಆರೋಪಿಯ ಬಂಧನ
ಪ್ರೇಯಸಿಯ ಪತಿಯನ್ನು ಹತ್ಯೆಗೈದು 6 ತುಂಡುಗಳಾಗಿ ಮೃತದೇಹ ಕತ್ತರಿಸಿ ಹೂತಿಟ್ಟ ವ್ಯಕ್ತಿ! title=
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ವ್ಯಕ್ತಿಯ ಹತ್ಯೆ!

Rajasthan Shocking News: ವ್ಯಕ್ತಿಯೊಬ್ಬ ಪ್ರೇಯಸಿಯ ಪತಿಯನ್ನು ಹತ್ಯೆಗೈದು ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟಿರುವ ಶಾಕಿಂಗ್ ಘಟನೆ ರಾಜಸ್ಥಾನದ ಪಾಲಿಯಲ್ಲಿ ನಡೆದಿದೆ. ಹೌದು, ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 33 ವರ್ಷದ ವ್ಯಕ್ತಿಯನ್ನು ಪತ್ನಿಯ ಪ್ರಿಯಕರ ಕೊಲೆಗೈದು ಶವವನ್ನು 6 ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಹೂತಿಟ್ಟಿದ್ದ.

ಆರೋಪಿ ಮದನಲಾಲ್ ಎಂಬಾತ ಜೋಗೇಂದ್ರ ಎಂಬುವರನ್ನು ಕೊಂದು ಮೃತದೇಹವನ್ನು ಕತ್ತರಿಸಿ ಸಮೀಪದ ಕಾಡಿನಲ್ಲಿ ಹೂತಿಟ್ಟಿದ್ದ. ಮನೆಯಿಂದ 100 ಮೀಟರ್ ದೂರದಲ್ಲಿರುವ ತೋಟದಲ್ಲಿ ಮೃತವ್ಯಕ್ತಿಯ ತಲೆ, ಕೈ ಮತ್ತು ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಟೊಮೆಟೊದಲ್ಲಿ ಮಗಳ ತುಲಾಭಾರ ಮಾಡಿದ ತಂದೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಜೋಗೇಂದ್ರನನ್ನು ಕೊಂದಿದ್ದ ಆರೋಪಿ ಮದನಲಾಲ್ ಆತನನ್ನು ಸಮಾಧಿ ಮಾಡಿದ್ದ. ಸಮಾಧಿ ಸ್ಥಳದ ಮೇಲೆ ಮಾವಿನ ಸಸಿ ನೆಟ್ಟಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮಗನ ಕೊಲೆಯಾಗಿರುವ ಬಗ್ಗೆ ಜೋಗೇಂದ್ರನ ತಂದೆ ಮಿಶ್ರಾಲಾಲ್ ಮೇಘವಾಲ್ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು.

ಜುಲೈ 11ರಂದು ಮನೆಯಿಂದ ಹೋಗಿದ್ದ ಜೋಗೇಂದ್ರ ನಂತರ ವಾಪಸ್ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಅವರ ತಂದೆ ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ‘ನನ್ನ ಮಗನನ್ನು ಹತ್ಯೆ ಮಾಡಲಾಗಿದೆ, ಇದರಲ್ಲಿ ಅನೇಖ ಜನರು ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕರ್ನಾಟಕ ರಾಜ್ಯದಿಂದ ಪುಣ್ಯ ಕ್ಷೇತ್ರಗಳಿಗೆ ವಿಶೇಷ ರೈಲಿನ ವ್ಯವಸ್ಥೆ

ಈ ದೂರು ಆಧರಿಸಿ ತನಿಖೆ ನಡೆಸಿ ಪೊಲೀಸರು ಮದನ್‍ಲಾಲ್‍ನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ತಾನು ಜೋಗೇಂದ್ರನ ಪತ್ನಿಯೊಂದಿಗೆ ಸಂಬಂಧಿ ಹೊಂದಿದ್ದೆ, ಹೀಗಾಗಿ ಆತನನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News