ಟ್ರಾಕ್ಟರ್ ಇನೋವಾ ಕಾರ್ ನಡುವೆ ಅಪಘಾತ

ಎದುರಿನಿಂದ ಬರುತ್ತಿದ್ದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಇನ್ನೋವಾ ಡಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ರಸ್ತೆ ಬದಿಯೇ ಪಲ್ಟಿಯಾಗಿದೆ. ಟ್ರ್ಯಾಕ್ಟರ್‌ನಡಿ ಸಿಲುಕಿದ ಚಾಲಕನ‌ನ್ನು ಸ್ಥಳೀಯರು ರಕ್ಷಿಸಿದ್ದಾರೆ. 

Written by - Yashaswini V | Last Updated : Dec 24, 2023, 08:43 AM IST
  • ಇನ್ನೋವಾ ಡಿಕ್ಕಿ, ಕಬ್ವು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ
  • ಟ್ರ್ಯಾಕ್ಟರ್‌ನಡಿ ಸಿಲುಕಿದ ಚಾಲಕನ ರಕ್ಷಿಸಿದ ಸ್ಥಳೀಯರು
  • ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಟ್ರಾಕ್ಟರ್ ಇನೋವಾ ಕಾರ್ ನಡುವೆ ಅಪಘಾತ  title=

Accident: ಒಂದು ಕುಟುಂಬ ದೇವರ ದರ್ಶನಕ್ಕೆ ತೆರಳುತ್ತಿದ್ರೆ ಮತ್ತೋರ್ವ ತುತ್ತಿನ ಚೀಲ ತುಂಬಿಸಲು ಸಕ್ಕರೆ ಕಾರ್ಖಾನೆಗೆ ಟ್ರ್ಯಾಕ್ಟರ್‌ನಲ್ಲಿ ಕಬ್ಬು ಸಾಗಿಸುತ್ತಿದ್ದ. ಒಂದೇ ಒಂದು ಕ್ಷಣ ಎದುರಿಗೆ ಬರುತ್ತಿದ್ದ ಇನ್ನೋವಾ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಅದೃಷ್ಟವಶಾತ್ ಎಲ್ಲರೂ ಅಪಘಾತದಲ್ಲಿ ಬಚಾವ್ ಆಗಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ...

ಹೌದು...  ಎದುರಿನಿಂದ ಬರುತ್ತಿದ್ದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಇನ್ನೋವಾ ಡಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ರಸ್ತೆ ಬದಿಯೇ ಪಲ್ಟಿಯಾಗಿದೆ. ಟ್ರ್ಯಾಕ್ಟರ್‌ನಡಿ ಸಿಲುಕಿದ ಚಾಲಕನ‌ನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಘಟನೆ ನಡೆದಿರುವುದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿ‌ನ ಕಂಕಣವಾಡಿ ಬಳಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಇದನ್ನೂ ಓದಿ- ಹುಡುಗಿಯರ ಹಾಸ್ಟೆಲ್ ಬಾತ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟ ಕಾಮುಕ, ಮುಂದೆ..!

ಕುಮಾರ್ ಹುಕ್ಕೇರಿ ಎಂಬ ಚಾಲಕ ಟ್ರ್ಯಾಕ್ಟರ್‌ನಲ್ಲಿ ಕಬ್ಬು ಸಾಗಿಸುತ್ತಿದ್ದ ಈ ವೇಳೆ ಎದುರುಗಡೆ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಚಾಲಕನ‌‌ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.‌ ಈ ವೇಳೆ ಟ್ರ್ಯಾಕ್ಟರ್‌ನಡಿ ಚಾಲಕ ಕುಮಾರ್ ಹುಕ್ಕೇರಿ ಸಿಲುಕಿದ್ದಾನೆ. ತಕ್ಷಣ ಸ್ಥಳೀಯರು ದೌಡಾಯಿಸಿದ್ದಾರೆ‌. ಜೆಸಿಬಿ ಹಾಗೂ ಹಿಟಾಚಿ ಸಹಾಯದಿಂದ ಟ್ರ್ಯಾಕ್ಟರ್ ಕುಮಾರ್ ಹುಕ್ಕೇರಿ ರಕ್ಷಿಸಿದ್ದಾರೆ. ಗಾಯಾಳು ಕುಮಾರ್ ಹುಕ್ಕೇರಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನು ಇನ್ನೋವಾ ಕಾರಿನಲ್ಲಿ ಚಾಲಕ ಸೇರಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು. ಮೈಸೂರು ಮೂಲದ ಪ್ರಯಾಣಿಕರು ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದು ಕೊಲ್ಹಾಪುರ ಮಹಾಲಕ್ಷ್ಮಿ ದೇವಿ ದರ್ಶನಕ್ಕೆ ತೆರಳುತ್ತಿದ್ದರು‌.‌ ಇನ್ನೋವಾ ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಇದ್ದ ಶಿವಕುಮಾರ(62), ಪಾಪಣ್ಣ(63), ಮಂಜುನಾಥ(38), ಮಹೇಂದ್ರ(30), ಕೃಷ್ಣಮೂರ್ತಿ(58), ಜಯರಾಜ(40) ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗೋಕಾಕ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ- ಹೆಸ್ಕಾಂನಲ್ಲಿ 51 ಕೋಟಿ ವಂಚನೆ: ಮಧ್ಯಂತರ ವರದಿ ಸಲ್ಲಿಕೆ, ಐವರು ಸಿಬ್ಬಂದಿ ಅಮಾನತು

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಟ್ರಾಫಿಕ್ ಜಾಮ್ ಆಗಿ ಜನಜಂಗುಳಿ ಏರ್ಪಟ್ಟಿತ್ತು. ನಾಲ್ಕು ಜೆಸಿಬಿ ಒಂದು ಹಿಟಾಚಿ ಬಳಸಿ ಟ್ರ್ಯಾಕ್ಟರ್ ಹಾಗೂ ಕಬ್ಬು ತೆರವು ಮಾಡಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News