ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲು

ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.  

Written by - Yashaswini V | Last Updated : Jun 13, 2024, 12:57 PM IST
  • ನಟ ದರ್ಶನ್ & ಗ್ಯಾಂಗ್ ನ ಮತ್ತೊಂದು ಕರಾಳ ಮುಖ ಬಯಲು!.
  • ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ.
  • ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಆಕ್ರೋಶ.
ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ:  ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲು  title=

ಚಾಮರಾಜನಗರ: ಅಭಿಮಾನಿ ಕೊಲೆ ಕೇಸ್ ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿರುದ್ಧ ಯಾವುದೇ ಪರಿಹಾರ ಕೊಡದ ಆರೋಪ ಕೇಳಿಬಂದಿದೆ‌‌. ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲಾಗಿದ್ದು  ಕೊಲೆ ಪ್ರಕರಣ ಬಳಿಕ ದರ್ಶನ್‌ನ (Darshan) ಒಂದೊಂದೆ ಮುಖ ಅನಾವರಣಗೊಳ್ಳುತ್ತಿದೆ. 

ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ- Actor Darshan: ನಟ ದರ್ಶನ್ 'ದಶ' ಅವಾಂತರಗಳು

ಕೆಲಸ ಮಾಡುವ ವೇಳೆ ಎತ್ತೊಂದು ಕೊಂಬಿನಿಂದ ತಿವಿದಿತ್ತು. ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಎತ್ತಿನ ಕೊಂಬು ಬಂದಿತ್ತು. ಬಳಿಕ ನಟ ದರ್ಶನ್ ಕಡೆಯವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋದರು.  ನಂತರ ಕುಟುಂಬದತ್ತ ನಟ ತಿರುಗಿಯೂ ನೋಡಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರಂ ಹೌಸ್ ಗೆ ಹೋದ್ರೆ ಸಾಕುನಾಯಿಗಳನ್ನು  ಛೂ ಬಿಡಲಾಗಿತ್ತು, ಬಳಿಕ ಮೈಸೂರಿನ ಹೊಟೇಲ್ ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಿದ್ದರು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು  ಡಿ ಬಾಸ್ ಅಂಡ್ ಗ್ಯಾಂಗ್ ಹೆದರಿಸಿದ್ದರು ಎಂದು ಮಹೇಶ್ ಕುಟುಂಬ ಆರೋಪಿಸಿದೆ.

ಇದನ್ನೂ ಓದಿ- ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌

ಹತ್ತು ವರ್ಷಗಳಿಂದ ಹಾಸಿಗೆ ಹಿಡಿದಿರುವ ಕೂಲಿ ಕಾರ್ಮಿಕ ಮಹೇಶ್ ಗೆ ಸದ್ಯ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದ್ದು, ದರ್ಶನ್ ಗೆ ಹಿಡಿ ಶಾಪ ಹಾಕುತ್ತಾ ಕಾರ್ಮಿಕ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಇವರಿಗೆ ದಾನಿಗಳ ನೆರವು ಅಗತ್ಯವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News