ಪ್ರವಾಸೋದ್ಯಮ ಇಲಾಖೆ ಹಗರಣ ಬೆನ್ನಲ್ಲೆ ಐಡಿಬಿಐ ಬ್ಯಾಂಕ್ ನಲ್ಲಿ ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣ..

ಬಗೆದಷ್ಡು ಹೊರ ಬರುತ್ತಿರೋ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು: ಇದೀಗ ಬಾಗಲಕೋಟೆ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಗರಣ ಬೆಳಕಿಗೆ

Written by - Yashaswini V | Last Updated : Aug 2, 2024, 02:31 PM IST
  • ಬಾಗಲಕೋಟೆ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಗರಣ ಬೆಳಕಿಗೆ...
  • ಎರಡೂ ಇಲಾಖೆ ಸೇರಿ 1.66 ಕೋಟಿ ಹಣ ಅಕ್ರಮ ಹಣ ವರ್ಗಾವಣೆ...
  • ಪಂಚಾಯತ್ ರಾಜ್ ವಿಭಾಗದಿಂದ 86.40 ಲಕ್ಷ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 79.75 ಲಕ್ಷ ಹಣ ವರ್ಗಾವಣೆ...
ಪ್ರವಾಸೋದ್ಯಮ ಇಲಾಖೆ ಹಗರಣ ಬೆನ್ನಲ್ಲೆ ಐಡಿಬಿಐ ಬ್ಯಾಂಕ್ ನಲ್ಲಿ ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣ.. title=

Money Scandal: ಐಡಿಬಿಐ ಬ್ಯಾಂಕಿನಲ್ಲಿ ಪ್ರವಾಸೋದ್ಯಮ‌ ಇಲಾಖೆಯ ಅಕ್ರಮ ಹಣ ವರ್ಗಾವಣೆ (Money Laundering Scandals) ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಈಗ ಮತ್ತೆ ಪಂಚಾಯತರಾಜ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಗರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿರುವ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು, ಪಂಚಾಯತರಾಜ್ (Panchayat Raj) ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿದ 1ಕೋಟಿ 66 ಲಕ್ಷ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ- ATM Card Trap Scam: ಏನಿದು ಎಟಿಎಂ ಕಾರ್ಡ್ ಟ್ರ್ಯಾಪ್ ಸ್ಕ್ಯಾಮ್? ಈ ಬಗ್ಗೆ ಇರಲಿ ಎಚ್ಚರ

ಪಂಚಾಯತರಾಜ್ ವಿಭಾಗದಿಂದ 86ಲಕ್ಷ 40ಸಾವಿರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ 79ಲಕ್ಷ 75 ಸಾವಿರ ಹಣ ವರ್ಗಾವಣೆಯಾಗಿದೆ. ಕಳೆದ 2023-2024ನೇ ಸಾಲಿನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ಇವಾಗಿವೆ ಎಂದು ಹೇಳಿದ್ದಾರೆ. 

ಅನುದಾನ ಕೋರಿ ಬಂದ ಇಲಾಖೆಯ ಪತ್ರದ ಹೆಡ್ಡಿಂಗ್ ಮತ್ತು ಸಹಿ‌ ತುಂಡರಿಸಿ ಬಿಳಿ ಹಾಳೆ ಮೇಲೆ ಅಂಟಿಸಿ ಹಣ ವರ್ಗಾವಣೆಯಾಗಿದೆ ಎಂದು‌ ತಿಳಿಸಿದ್ದಾರೆ. ಈಗ ಎರಡೂ ಇಲಾಖೆಯಿಂದ ಬಾಗಲಕೋಟೆಯ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ (CEN Crime Police Station) ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ- Car Insurance Tips: ರಿಯಾಯಿತಿ ಹೆಸರಿನಲ್ಲಿ ಮೋಸ ಹೋಗದಿರಿ, ಕಾರ್ ವಿಮೆ ಕೊಳ್ಳುವಾಗ ನೆನಪಿರಲಿ ಈ ವಿಷಯ

ಕಳೆದ ಎರಡು‌ ವರ್ಷಗಳಿಂದ ಆ್ಯಕ್ಟೀವ್ ಆಗಿರುವ ಖಾತೆಗಳನ್ನು ಪತ್ತೆ ಮಾಡಿ ಐಡಿಬಿಐ ಬ್ಯಾಂಕ್ ಸಿಬ್ಬಂದಿ ಅಕ್ರಮ‌ ನಡೆಸಿದ್ದಾರೆ. ಈಗಾಗಲೇ ಅಕ್ರಮದಲ್ಲಿ ಭಾಗಿಯಾದ ಬ್ಯಾಂಕ್ ಸಿಬ್ಬಂದಿ ಸೇರಿ ಒಟ್ಟು ಒಂಭತ್ತು‌ ಜನರನ್ನ ಬಂಧಿಸಲಾಗಿದೆ. ಬ್ಯಾಂಕಿನ ಸಿಬ್ಬಂಸಿ ಸೂರಜ ಸಾಗರ್ ಸೇರಿ ಒಂಬತ್ತು‌ ಜನರ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News