ಯಾತ್ರಿಕರ ಕಾರು ಪಲ್ಟಿ.. ಮಗು ಸಾವು, 6 ಮಂದಿಗೆ ಗಾಯ

Car Accident : ಮಲೆ ಮಹದೇಶ್ವರ ಬೆಟ್ಟದಲ್ಲಿ  ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. 

Written by - Chetana Devarmani | Last Updated : Dec 22, 2022, 04:03 PM IST
  • ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಾಸಾಗುತ್ತಿದ್ದ ಯಾತ್ರಿಕರು
  • ಯಾತ್ರಿಕರ ಕಾರು ಪಲ್ಟಿಯಾಗಿ ಮಗು ಸಾವು, 6 ಮಂದಿಗೆ ಗಾಯ
  • ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ಘಟನೆ
ಯಾತ್ರಿಕರ ಕಾರು ಪಲ್ಟಿ.. ಮಗು ಸಾವು, 6 ಮಂದಿಗೆ ಗಾಯ title=
ಕಾರು ಪಲ್ಟಿ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಾಸಾಗುತ್ತಿದ್ದ ಯಾತ್ರಿಕರ ಕಾರು ಪಲ್ಟಿ ಮಗು ಅಸುನೀಗಿರುವ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ : ಕಿರಿಮಗನ ಲವ್ ಸ್ಟೋರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

ಮೈಸೂರು ಮೂಲದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರು ಗಾಯಗೊಂಡವರು. 

ಮಲೆ ಮಹದೇಶ್ವರ ಬೆಟ್ಟದಲ್ಲಿ  ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಹನೂರು ಪೊಲೀಸರು ಗಾಯಾಳುಗಳನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ : Shocking: ಮುಗ್ಧ ಬಾಲಕಿಯ ಪ್ರಾಣ ಬಲಿ ಪಡೆದ ಪೆನ್ಸಿಲ್ ಸಿಪ್ಪೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News