ಕೌಟಂಬಿಕ ಕಲಹ: ಮೈದುನನ್ನು ಕೊಂದ ಬಾವ- ಅಳಿಯನನ್ನು ಕೊಂದ ಮಾವ!!

ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿ ಕಣ್ಣಿಗೆ ಕಾರದ ಪುಡಿ ಎರಚಿ ಚಾಕುವಿನಿಂದ ಇರಿದು ಮೈದುನನ್ನೇ ಬಾವ ಕೊಂದಿದ್ದಾನೆ. 

Written by - Yashaswini V | Last Updated : Feb 23, 2024, 11:00 AM IST
  • ಬಾವ-ಮೈದುನನ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯ
  • ಇನ್ನೊಂದು ಘಟನೆಯಲ್ಲಿ ಅಳಿಯನನ್ನೇ ಕೊಂದ ಮಾವ
ಕೌಟಂಬಿಕ ಕಲಹ: ಮೈದುನನ್ನು ಕೊಂದ ಬಾವ- ಅಳಿಯನನ್ನು ಕೊಂದ ಮಾವ!!  title=

ಚಾಮರಾಜನಗರ: ಬಾವ-ಮೈದುನನ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಸಾಗಡೆ ಗ್ರಾಮದ ನಾಗೇಂದ್ರ ಮೃತ ವ್ಯಕ್ತಿಯಾಗಿದ್ದು ರಾಜು ಎಂಬಾತ ಚಾಕುವಿನಿಂದ ಇರಿದ ಈತನ ಬಾವನಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿ ಕಣ್ಣಿಗೆ ಕಾರದ ಪುಡಿ ಎರಚಿ ಚಾಕುವಿನಿಂದ ಇರಿದು ಮೈದುನನ್ನೇ ಬಾವ ಕೊಂದಿದ್ದಾನೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ- ರಾಜ್ಯ ರಾಜಧಾನಿಯಲ್ಲಿ ಮಣಿಪುರ ಮೂಲದ ಮಹಿಳೆಗೆ ಕಿರುಕುಳ, ಸ್ನೇಹಿತನ ಮೇಲೆಯೂ ಹಲ್ಲೆ

ಅಳಿಯನನ್ನೇ ಕೊಂದ ಮಾವ: 
ಇನ್ನೊಂದು ಘಟನೆಯಲ್ಲಿ ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಮಗಳಿಗೆ ಕಾಟ ಕೊಡುತ್ತಾನೆಂದು ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಪ್ರೀತಿಸಿ ಮದುವೆಯಾಗಿದ್ದ ಹುಬ್ಬಳಿ ಮೂಲದ ಉಮೇಶ್ (28) ಮೃತ ವ್ಯಕ್ತಿ.  ಕೊಲೆ ಮಾಡಿದ ಮಾವ  ನಂಜುಂಡಯ್ಯನನ್ನು ಕುದೇರು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ- ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ್ದ ದಂಪತಿ ಬಂಧನ..!

ನಿತ್ಯ ಕುಡಿದು ಬಂದು ರಂಪಾಟ ಮಾಡುತ್ತಿದ್ದರಿಂದ ಬೇಸತ್ತ ಮಾವ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News