ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದು ಬೈಕ್ ಅಪಘಾತ ಎಂದು ಬಿಂಬಿಸಿದ ಪತ್ನಿ, ಮುಂದೆ...

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದು ಬೈಕ್ ಅಪಘಾತ ಎಂದು ಬಿಂಬಿಸಿದ ಧಾರುಣ ಘಟನೆ ಕೋಲಾರದಲ್ಲಿ ವರದಿಯಾಗಿದೆ. ಕೋಲಾರ ತಾಲ್ಲೂಕಿನ ಜನ್ನಘಟ್ಟ ಬಳಿ ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಜನ್ನಘಟ್ಟ ಗ್ರಾಮದ ಕಲಾವಿದ 45 ವರ್ಷದ ಕೃಷ್ಣಮೂರ್ತಿ ಬೈಕ್ ನಿಂದ ಬಿದ್ದು ಮೃತಪಟ್ಟ ಎಂದು ಗ್ರಾಮದಲ್ಲಿ ಸುದ್ದಿ ಹರಡಿತ್ತು. ಒಬ್ಬ ಕಲಾವಿದ ಬೈಕ್ ಆಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ಎಲ್ಲರಲ್ಲೂ ಒಂದು ಕ್ಷಣ ಆಶ್ಚರ್ಯ ಉಂಟಾಗಿತ್ತು.

Written by - Yashaswini V | Last Updated : May 30, 2023, 03:47 PM IST
  • ಸಂಬಂಧಿಕರು ಸೇರಿದಂತೆ ಇಡೀ ಗ್ರಾಮಕ್ಕೆ ಗೊತ್ತಿರುವಂತೆ ಕೃಷ್ಣಮೂರ್ತಿ ಪತ್ನಿಗೆ ಅಕ್ರಮ ಸಂಬಂಧ ಇದ್ದು ಆಕೆಯೆ ಕೊಲೆ ಮಾಡಿಸಿರುವ ಅನುಮಾನ ಎಲ್ಲೆಡೆ ಇತ್ತು.
  • ಅಲ್ಲದೆ ಪ್ರತಿನಿತ್ಯ ಗಲಾಟೆ, ನ್ಯಾಯಾ ಪಂಚಾಯತಿ ನೋಡಿದ್ದವರು ಇಲ್ಲ ಇದು ಬೈಕ್ ಅಪಘಾತವಲ್ಲ ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.
  • ಅಲ್ಲದೆ ಒಂದು ವರ್ಷದ ಹಿಂದೆ ಗಂಡ ಮಕ್ಕಳನ್ನ ಬಿಟ್ಟು ಓಡಿ ಹೋಗಿದ್ದಳು
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದು ಬೈಕ್ ಅಪಘಾತ ಎಂದು ಬಿಂಬಿಸಿದ ಪತ್ನಿ, ಮುಂದೆ... title=

ಆತ ಜನಪದ ಕಲಾವಿದ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷನಾಗಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ. ತನ್ನ ಗಾಯನದ ಮೂಲಕ ಅದೆಷ್ಟೋ ಜನರ ಮನಸ್ಸು ಗೆದ್ದಿದ್ರು. ಸಂಸಾರದ ಕಲೆ ಗೆಲ್ಲುವಲ್ಲಿ ವಿಫಲನಾಗಿದ್ದ. ತನ್ನ ಪತ್ನಿಗಿದ್ದ ಅಕ್ರಮ ಸಂಬಂಧ ಗೊತ್ತಿದ್ರು ತನ್ನ ಮಕ್ಕಳಿಗಾಗಿ ಎಲ್ಲವನ್ನ ಸಹಿಸಿಕೊಂಡಿದ್ದವ ಇಂದು ಪತ್ನಿ ಪ್ರಿಯಕರನಿಂದಲೇ ಕೊಲೆಯಾಗಿದ್ದಾನೆ.  

ಎಲ್ಲಾ ಮಾಯ ನಾಳೆ ನಾವು ಮಾಯ ಎಂದು ಹಾಡುತ್ತಿದ್ದ ಹಾಡುಗಾರ, ಗ್ರಾಮದ ಬಳಿಯೇ ಪತ್ನಿಯ ಪ್ರಿಯಕರನಿಂದಲೇ ಕೊಲೆಯಾಗಿ ಬಿದ್ದಿರುವ ಜನಪದ ಕಲಾವಿದ. ಮತ್ತೊಂದೆಡೆ ಪುಟ್ಟ ಮಕ್ಕಳೊಂದಿಗೆ ಕಣ್ಣೀರಾಕುತ್ತಿರುವ ಮಗನನ್ನ ಕಳೆದುಕೊಂಡ ತಾಯಿ, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದಲ್ಲಿ. 

ಹೌದು, ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದು ಬೈಕ್ ಅಪಘಾತ ಎಂದು ಬಿಂಬಿಸಿದ ಧಾರುಣ ಘಟನೆ ಕೋಲಾರದಲ್ಲಿ ವರದಿಯಾಗಿದೆ. ಕೋಲಾರ ತಾಲ್ಲೂಕಿನ ಜನ್ನಘಟ್ಟ ಬಳಿ ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಜನ್ನಘಟ್ಟ ಗ್ರಾಮದ ಕಲಾವಿದ 45 ವರ್ಷದ ಕೃಷ್ಣಮೂರ್ತಿ ಬೈಕ್ ನಿಂದ ಬಿದ್ದು ಮೃತಪಟ್ಟ ಎಂದು ಗ್ರಾಮದಲ್ಲಿ ಸುದ್ದಿ ಹರಡಿತ್ತು. ಒಬ್ಬ ಕಲಾವಿದ ಬೈಕ್ ಆಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ಎಲ್ಲರಲ್ಲೂ ಒಂದು ಕ್ಷಣ ಆಶ್ಚರ್ಯ ಉಂಟಾಗಿತ್ತು, ಆದ್ರೆ ಬೆಳಗಾಗುವಷ್ಟರಲ್ಲಿ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಲಾಗಿತ್ತು ಅನ್ನೋ ಸುದ್ದಿ ಜೋರಾಗಿಯೇ ಹರಡಿತ್ತು. 

ಇದನ್ನೂ ಓದಿ- Shocking News: ಪತ್ನಿ, ಪುತ್ರ-ಪುತ್ರಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ: 
ವಾಸ್ತವವಾಗಿ, ಸಂಬಂಧಿಕರು ಸೇರಿದಂತೆ ಇಡೀ ಗ್ರಾಮಕ್ಕೆ ಗೊತ್ತಿರುವಂತೆ ಕೃಷ್ಣಮೂರ್ತಿ ಪತ್ನಿಗೆ ಅಕ್ರಮ ಸಂಬಂಧ ಇದ್ದು ಆಕೆಯೆ ಕೊಲೆ ಮಾಡಿಸಿರುವ ಅನುಮಾನ ಎಲ್ಲೆಡೆ ಇತ್ತು. ಅಲ್ಲದೆ ಪ್ರತಿನಿತ್ಯ ಗಲಾಟೆ, ನ್ಯಾಯಾ ಪಂಚಾಯತಿ ನೋಡಿದ್ದವರು ಇಲ್ಲ ಇದು ಬೈಕ್ ಅಪಘಾತವಲ್ಲ ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಒಂದು ವರ್ಷದ ಹಿಂದೆ ಗಂಡ ಮಕ್ಕಳನ್ನ ಬಿಟ್ಟು ಓಡಿ ಹೋಗಿದ್ದಳು, ಆಗ ಪೊಲೀಸ್ ಠಾಣೆಯಲ್ಲಿ ರಾಜಿ ಸಂಧಾನ ಮಾಡಿದ್ರು. ಆದ್ರೂ ಸಹ ಪ್ರತಿನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾ ಇದ್ದ ಪತ್ನಿ ಸೌಮ್ಯ ಗಂಡನೊಂದಿಗೆ ಒಂದಿಲ್ಲೊಂದು ವಿಚಾರಕ್ಕೆ ತಗಾದೆ ತೆಗೆಯುತ್ತಲೇ ಇದ್ದಳು. ಇವೆಲ್ಲವನ್ನೂ ತನ್ನ ಮೂರು ಜನ ಮಕ್ಕಳಿಗಾಗಿ ಸಹಿಸಿಕೊಂಡಿದ್ದ ಪತಿ (ಕಲಾವಿದ ಕೃಷ್ಣಮೂರ್ತಿ) ತನ್ನ ಸಂಸಾರದಲ್ಲಿದ್ದ ಕಲಹಕ್ಕೆ ಬಲಿಯಾಗಿದ್ದಾನೆ ಅನ್ನೋದು ತಾಯಿ ಚೌಡಮ್ಮ ಅಳಲು.

ಪ್ರಿಯಕರನೊಂದಿಗೆ ಕೂಡಿ ಕೊಲೆ ಮಾಡಿ ಅಪಘಾತ ಎಂದು ಸುದ್ದಿ ಹಬ್ಬಿಸಿದ್ದ ಪತ್ನಿ: 
ಇನ್ನೂ ಕೃಷ್ಣಮೂರ್ತಿ ಹಾಗೂ ಸೌಮ್ಯಾಳ 10 ವರ್ಷಗಳ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ ಗಣೇಶ್ ಮೂರ್ತಿ ಎಂಬ ಮಗ ಜ್ಞಾನಶ್ರೀ ಹಾಗೂ ದತ್ತಾಶ್ರೀ ಎಂಬ ಇಬ್ಬರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ. ಇನ್ನೂ ಪುಟ್ಟ ಮಕ್ಕಳಿಗಾಗಿ ಕೃಷ್ಣಮೂರ್ತಿ ಸಂಬಂಧಿಕರ ಮಾತು ಕೇಳಿ ಹಲವು ಬಾರಿ ನ್ಯಾಯ ಪಂಚಾಯತಿ ಮಾಡಿ ಎಲ್ಲವನ್ನ ಸಹಿಸಿಕೊಂಡಿದ್ದ, ಆದ್ರೆ ಹಳೆ ಚಾಳಿ ಬಿಡದ ಸೌಮ್ಯ ಗಂಡ ಇಲ್ಲದ ವೇಳೆ ತನ್ನ ಪ್ರಿಯಕರನನ್ನ ಮನೆಗೆ ಕರೆಸಿಕೊಳ್ಳುತ್ತಿದ್ದಳಂತೆ. ಅಲ್ಲದೆ ಇತ್ತೀಚೆಗೆ ಆತನೊಂದಿಗೆ ಸುತ್ತಾಡುತ್ತಾ ಹಲವು ಬಾರಿ ಗಂಡನಿಗೆ ಹೊಡೆಯೋದು, ಕೊಲೆ ಮಾಡುವ ಬೆದರಿಕೆ ಹಾಕುತ್ತಿದ್ದಳಂತೆ. ಅಷ್ಟೇ ಅಲ್ಲದೆ,  ಗಂಡನಿಂದ ಚಿನ್ನ ಹಾಗೂ ಮೊಬೈಲ್ ಸಹ ಪಡೆದಿರುವ ಸೌಮ್ಯ ಆತನೊಂದಿಗೆ ಸೌಜನ್ಯದಿಂದಲೂ ವರ್ತಿಸುತ್ತಿರಲಿಲ್ಲ. ಇತ್ತೀಚೆಗೆ ಕೊಲೆ ಮಾಡುವ ಬೆದರಿಕೆ ಸಹ ಹಾಕಿದ್ದು ನಿನ್ನೆ ಸಂಜೆ ಕೃಷ್ಣಮೂರ್ತಿ ಮನೆಗೆ ಬರ್ತಿರೋ ವೇಳೆ ಮಾಹಿತಿ ಪಡೆದು, ಅದರಂತೆ ಕಳೆದ ರಾತ್ರಿ ತನ್ನ ಪ್ರಿಯಕರನಿಗೆ ತಿಳಿಸಿ ಗ್ರಾಮದ ರೈಲ್ವೇ ಅಂಡರ್ ಪಾಸ್ ಬಳಿ ರಾಡ್ ನಿಂದ ಹೊಡೆದು ಕೊಲೆ ಮಾಡಿಸಿ ಬೈಕ್ ನಿಂದ ಬಿದ್ದು ಮೃತಪಟ್ಟಿರುವಂತೆ ಗ್ರಾಮದಲ್ಲೆಲ್ಲಾ ಈಕೆಯೆ ಹಬ್ಬಿಸಿದ್ದಾಳೆ. 

ಇದನ್ನೂ ಓದಿ- ಗೂಡ್ಸ್ ರೈಲಿನಡಿ ಬಿದ್ದು 20ಕ್ಕೂ ಹೆಚ್ಚು ಎಮ್ಮೆಗಳು ಮೃತ

ಇದು ಅಪಘಾತವಲ್ಲ, ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದ ಸಂಬಂಧಿಕರು: 
ಆದರೆ, ಕೃಷ್ಣಮೂರ್ತಿ ಸಂಬಂಧಿಕರು ಮಾತ್ರ ಇಲ್ಲಾ ಇದೊಂದು ಕೊಲೆ ಅನ್ನೋ ಅನುಮಾನ ವ್ಯಕ್ತಪಡಿಸಿದ್ದಾರೆ. ಅದರಂತೆ ತನಿಖೆ ಕೈಗೊಂಡ ಪೊಲೀಸರಿಗೆ ತಿಳಿದಿದ್ದು ಕಲಾವಿದ ಕೃಷ್ಣಮೂರ್ತಿ ಪತ್ನಿ ಸೌಮ್ಯ ಖತರ್ನಾಕ್ ಕೊಲೆ ಮಾಡಿಸಿರುವುದು ಹೊರ ಬಿದ್ದಿದೆ. ಪ್ರಿಯಕರ ಶ್ರೀನಿವಾಸಪುರ ತಾಲ್ಲೂಕಿನ ಚೊಕ್ಕರೆಡ್ಡಪಲ್ಲಿ ಶ್ರೀಧರ್, ತನ್ನ ಸ್ನೇಹಿತ ಮತ್ತೊಬ್ಬ ಶ್ರೀಧರ್‌ನೊಂದಿಗೆ ಸೇರಿ ಕೃಷ್ಣಮೂರ್ತಿಯನ್ನ ಕೊಲೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದಿದೆ. ಅದರಂತೆ ಸದ್ಯ ಮೂರು ಜನರನ್ನ ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ ಪತ್ನಿಯ ಅಕ್ರಮ ಸಂಬಂಧ ಗೊತ್ತಿದ್ರು ತನ್ನ ಮಕ್ಕಳಿಗಾಗಿ ಎಲ್ಲವನ್ನ ಸಹಿಸಿಕೊಂಡು ತ್ಯಾಗ ಮಾಡಿದ್ದ ಕಲಾವಿದ ಇಂದು ಕೊಲೆಯಾಗಿದ್ದಾನೆ. ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದಾಕೆ ಜೈಲು ಸೇರಿದ್ದಾಳೆ, ಆದ್ರೆ ಮೂರು ಪುಟ್ಟ ಮಕ್ಕಳು ಮಾತ್ರ ಅನಾಥವಾಗಿದ್ದು, ಕಲಾವಿದನ ಸಂಸಾರ ನಾವಿಕನಿಲ್ಲದ ನೌಕೆಯಂತ್ತಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News