IND vs ZIM: ಜಿಂಬಾಬ್ವೆ ವಿರುದ್ಧ ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ

IND vs ZIM: ಇಂದು ಎಲ್ಲರ ಕಣ್ಣು ಭಾರತ ಕ್ರಿಕೆಟ್ ತಂಡದ ನೂತನ ನಾಯಕ ಶುಭ್‌ಮಾನ್ ಗಿಲ್ ಮೇಲೆ ನೆಟ್ಟಿದೆ. ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್‌ ಗಿಲ್‌ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಹೊಂಚು ಹಾಕಿ ಕಾಯುತ್ತಿದೆ.

Written by - Zee Kannada News Desk | Last Updated : Jul 13, 2024, 10:03 AM IST
  • ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್‌ ಗಿಲ್‌ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ.
  • T20 ವಿಶ್ವಕಪ್ ಗೆದ್ದ ನಂತರ, ಭಾರತ ತಂಡವು ಹೊಸ ನಾಯಕ ಮತ್ತು ಹೊಸ ಆಟಗಾರರೊಂದಿಗೆ ಪ್ರವಾಸವನ್ನು ಕೈಗೊಂಡಿದೆ.
  • ಸರಣಿಯನ್ನು ಗೆಲ್ಲುವ ಮೂಲಕ ಮೊದಲ ವಿದೇಶಿ ಪ್ರವಾಸದಲ್ಲಿ ವಿಶೇಷ ಸಾಧನೆ ಮಾಡುವ ತವಕದಲ್ಲಿದ್ದಾರೆ.
IND vs ZIM: ಜಿಂಬಾಬ್ವೆ ವಿರುದ್ಧ ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ title=

IND vs ZIM: ಇಂದು ಎಲ್ಲರ ಕಣ್ಣು ಭಾರತ ಕ್ರಿಕೆಟ್ ತಂಡದ ನೂತನ ನಾಯಕ ಶುಭ್‌ಮಾನ್ ಗಿಲ್ ಮೇಲೆ ನೆಟ್ಟಿದೆ. ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್‌ ಗಿಲ್‌ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಹೊಂಚು ಹಾಕಿ ಕಾಯುತ್ತಿದೆ.

5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂಕಗಳಿಂದ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಶನಿವಾರ, ಜುಲೈ 13 ರಂದು ನಾಲ್ಕನೆ ಪಂದ್ಯ ನಡೆಯಲಿದ್ದು, ಭಾರತ ತಂಡಕ್ಕಿದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಶನಿವಾರ(ಜುಲೈ, 13) ಸಂಜೆ ನಡೆಯಲಿದೆ. T20 ವಿಶ್ವಕಪ್ ಗೆದ್ದ ನಂತರ, ಭಾರತ ತಂಡವು ಹೊಸ ನಾಯಕ ಮತ್ತು ಹೊಸ ಆಟಗಾರರೊಂದಿಗೆ ಪ್ರವಾಸವನ್ನು ಕೈಗೊಂಡಿದೆ. ಮೊದಲ ಪಂದ್ಯದಲ್ಲಿ ಸೋತಿದ್ದ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಲಿಷ್ಠ ಪುನರಾಗಮನ ಮಾಡಿದೆ. ಇದೀಗ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಸಜ್ಜಾಗಿದೆ. 

ಇದನ್ನೂ ಓದಿ: ಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾ

ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುತ್ತಿರುವ ಶುಭಮನ್ ಗಿಲ್ ಅವರು ಸರಣಿಯನ್ನು ಗೆಲ್ಲುವ ಮೂಲಕ ಮೊದಲ ವಿದೇಶಿ ಪ್ರವಾಸದಲ್ಲಿ ವಿಶೇಷ ಸಾಧನೆ ಮಾಡುವ ತವಕದಲ್ಲಿದ್ದಾರೆ. ಜಿಂಬಾಬ್ವೆ ಪ್ರವಾಸದಲ್ಲಿ ಬಹುತೇಕ ಹೊಸ ತಂಡದೊಂದಿಗೆ ಕಣಕ್ಕಿಳಿದಿರುವ, ಗಿಲ್ ಯುವ ನಾಯಕನಾಗಿ ಸರಣಿ ಗೆದ್ದು ದಾಖಲೆ ಪುಸ್ತಕದಲ್ಲಿ ಹೆಸರು ನೋಂದಾಯಿಸುವ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಲಲು ಕಾಯುತ್ತಿದ್ದಾರೆ.  23ನೇ ವಯಸ್ಸಿನಲ್ಲಿ ಸುರೇಶ್ ರೈನಾ ನಾಯಕತ್ವ ವಹಿಸಿ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದಿದ್ದರು. 24ರ ಹರೆಯದ ಶುಭಮನ್ ಸರಣಿ ಗೆಲ್ಲುವ ಮೂಲಕ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆಯಬಹುದಾದ ಅವಕಾಶಗಳಿವೆ.

5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 13 ರನ್‌ಗಳಿಂದ ಸೋತಿತ್ತು. ಸರಣಿಯಲ್ಲಿ ಹಿಂದೆ ಬಿದ್ದ ಭಾರತ ಎರಡನೇ ಪಂದ್ಯವನ್ನು 100 ರನ್‌ಗಳ ಅಂತರದಿಂದ ಗೆದ್ದು ನಂತರ ಮೂರನೇ ಟಿ20 ಅನ್ನು 23 ರನ್‌ಗಳಿಂದ ಗೆದ್ದು 2-1 ಅಂಕಗಳಿಂದ ಮುನ್ನಡೆ ಸಾಧಿಸಿತು. ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಬಹುದು. 

ಯುವ ನಾಯಕ ಸರನಿ ಗೆಲ್ಲವ ಮೂಲಕ ಹೊಸ ಸಾಧನೆಯನ್ನು ಮಾಡುತ್ತಾರಾ, ಇಲ್ವಾ? ಅನ್ನುವುದನ್ನ ಇನ್ನು ಮುಂದೆ ಅಷ್ಟೆ ಕಾದು ನೋಡ್ಬೇಕಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News