ಬೆಂಗಳೂರಿನಲ್ಲಿ ಬೆಳಗಿನ ಜಾವ ಭೀಕರ ಅಪಘಾತ.. ಪುಟ್ಟ ಮಗು ಸೇರಿ ಇಬ್ಬರು ಸಾವು

Road Accident in Karnataka : ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಜಾವ ಭೀಕರ ಅಪಘಾತ ಸಂಭವಿಸಿದೆ. ಮತ್ತೊಂದೆಡೆ ಚಾಮರಾಜನಗರದಲ್ಲಿ ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Written by - Chetana Devarmani | Last Updated : Oct 3, 2023, 10:01 AM IST
  • ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಸಾವು
  • ಬೆಂಗಳೂರಿನಲ್ಲಿ ಬೆಳಗಿನ ಜಾವ ಭೀಕರ ಅಪಘಾತ
  • ಚಾಮರಾಜನಗರದಲ್ಲಿ ಲಾರಿ ಚಾಲಕ ಸಾವು
ಬೆಂಗಳೂರಿನಲ್ಲಿ ಬೆಳಗಿನ ಜಾವ ಭೀಕರ ಅಪಘಾತ.. ಪುಟ್ಟ ಮಗು ಸೇರಿ ಇಬ್ಬರು ಸಾವು  title=

ಬೆಂಗಳೂರು/ಚಾಮರಾಜನಗರ: ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಜಾವ ಭೀಕರ ಅಪಘಾತ ಸಂಭವಿಸಿದೆ. ಸೋಮಾಪುರ ಬಳಿಯ ನೈಸ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡ್ತಿದ್ದ ಕಾರು ಅಪಘಾತಕ್ಕೀಡಾಗಿದೆ. 

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರಿನಲ್ಲಿ ಮಹೇಂದ್ರನ್, ಸಿಂಧು ಮತ್ತು ಇಬ್ಬರು ಮಕ್ಕಳು ಇದ್ದರು. ಈ ವೇಳೆ ಸಿಂಧು ಮತ್ತು ಎರಡು ವರ್ಷದ ಒಂದು ಮಗು ಸಾವನ್ನಪ್ಪಿದ್ದಾರೆ. ಮಹೇಂದ್ರನ್ ಮತ್ತು ಒಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನಿದ್ರೆಯ ಮಂಪರಿನಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಸ್ತೆಯಿಂದ ಹೊರಬಂದು ಲಾರಿ ಮತ್ತು ಮೋರಿಯ ಗೋಡೆಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿ ರಭಸಕ್ಕೆ ಲಾರಿ ಸಹ ಪಲ್ಟಿ ಹೊಡೆದಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಕಾವೇರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ ಆರೋಪ 

ಘಟನಾ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಗೆಯಲ್ಲಿ ಗಾಯಾಳು ಮಹೇಂದ್ರ ಮತ್ತು ಒಂದು ಮಗುವನ್ನು ದಾಖಲಿಸಲಾಗಿದೆ. 

ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಒಳಗಾಗಿ ಬೆಂಕಿ ಹೊತ್ತುಕೊಂಡು ಟಾಟಾ ನೆಕ್ಸಾನ್ ಕಾರು‌ ಸುಟ್ಟು ಕರಕಲಾಗಿದೆ. ರಾಮಮೂರ್ತಿ ನಗರದ ವಿಜಿನಾಪುರದಲ್ಲಿ ವಾಸವಾಗಿದ್ದ ಕುಟುಂಬ. ಮೂಲತಃ‌ ತಮಿಳು‌ನಾಡಿನ ಸೇಲಂನವರು ಎಂದು ತಿಳಿದುಬಂದಿದೆ. 

ಹೃದಯಾಘಾತ.. ಗೂಡ್ಸ್ ಟೆಂಪೋಗೆ ಗುದ್ದಿ ಚಾಲಕ ಸಾವು : 

ಚಾಮರಾಜನಗರದಲ್ಲಿ ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. 

ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ಲಾರಿ ನಿಂತಿದೆ. ಲಾರಿ ಚಾಲಕ  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

ಇದನ್ನೂ ಓದಿ : ಕರ್ನಾಟಕಕ್ಕೆ ಕೆಟ್ಟದಾಗದಿರಲಿ: ಕಿವಿ, ಬಾಯಿ, ಕಣ್ಣು ಮುಚ್ಚಿ ಕಾವೇರಿಗಾಗಿ ಪ್ರತಿಭಟನೆ!!

iframe allow="accelerometer; autoplay; encrypted-media; gyroscope; picture-in-picture" allowfullscreen="" frameborder="0" height="350" src= https://zeenews.india.com/kannada/live-tv/embed?autoplay=1&mute=0 width="100%">

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News