ಸ್ಯಾಂಡಲ್‌ವುಡ್‌ ಯುವ ನಟನ ಬರ್ಬರ ಹತ್ಯೆ.. ಭಾಮೈದುನನಿಂದಲೇ ಕೊಲೆ ಶಂಕೆ!

ಸ್ಯಾಂಡಲ್‌ವುಡ್ ಯುವ ನಟನನ್ನು ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

Written by - VISHWANATH HARIHARA | Edited by - Chetana Devarmani | Last Updated : Jun 18, 2022, 04:06 PM IST
  • ಸ್ಯಾಂಡಲ್‌ವುಡ್‌ ಯುವ ನಟನ ಬರ್ಬರ ಹತ್ಯೆ
  • ಚಾಕುನಿಂದ ಇರಿದು ಯುವ ನಟನ ಕೊಲೆ
  • ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಸ್ಯಾಂಡಲ್‌ವುಡ್‌ ಯುವ ನಟನ ಬರ್ಬರ ಹತ್ಯೆ.. ಭಾಮೈದುನನಿಂದಲೇ ಕೊಲೆ ಶಂಕೆ!  title=
ನಟನ ಬರ್ಬರ ಹತ್ಯೆ

ಬೆಂಗಳೂರು: ಸ್ಯಾಂಡಲ್‌ವುಡ್ ಯುವ ನಟನನ್ನು ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಯ ಲಾಭಾರ್ಥಿಗಳಿಗೆ ಮತ್ತೊಂದು ನೆಮ್ಮದಿಯ ಸುದ್ದಿ ಪ್ರಕಟಿಸಿದ ಮೋದಿ ಸರ್ಕಾರ

ಸತೀಶ್ ವಜ್ರ ಕೊಲೆಯಾದ ವ್ಯಕ್ತಿ. ಮನೆಯಲ್ಲೇ ಚಾಕುವಿನಿಂದ ಇರಿದು ಸತೀಶ್ ಹತ್ಯೆ ಮಾಡಲಾಗಿದೆ. ಸತೀಶ್ ಕನ್ನಡದ ಲಗೋರಿ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಘಟನಾ ಸ್ಥಳಕ್ಕೆ ಆರ್.ಆರ್ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ‌.

ಮಂಡ್ಯ ಜಿಲ್ಲೆಯ ಪಾಂಡವಪುರದ ಹಳೇಬೀಡು ಮೂಲದ ಸತೀಶ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮೂರು ತಿಂಗಳ ಹಿಂದೆಯಷ್ಟೇ ಸತೀಶ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ. 

ನಿನ್ನೆ ರಾತ್ರಿ ಸತೀಶ್ ಮನೆಗೆ ಇಬ್ಬರೂ ಅಪರಿಚಿತರು ಬಂದಿದ್ದಾರೆ ಎನ್ನಲಾಗಿದೆ. ಅವರೇ ಸತೀಶ್ ಕೊಲೆ ಮಾಡಿ ಬೈಕ್ ಸಮೇತ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸತೀಶ್‌ ಪತ್ನಿ ಆತ್ಮಹತ್ಯೆಗೆ ಸತೀಶ್ ಕಾರಣ ಎಂದು ಭಾಮೈದುನನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ‌.

ಇದನ್ನೂ ಓದಿ: ಫೋನ್ ನಂಬರ್‌ ಸೇವ್‌ ಮಾಡದೆ WhatsApp ಸಂದೇಶ ಕಳುಹಿಸುವುದು ಹೇಗೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News