Honor killing: ಅನ್ಯಜಾತಿಯ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ಕೊಲೆಗೈದ ತಂದೆ!

Honor killing: ಕೊಲೆಯಾಗಿರುವ ಕವನ ಅದೇ ಗ್ರಾಮದ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಆಕೆಯ ಅಪ್ಪ ಮಂಜುನಾಥನಿಗೆ ತಿಳಿದ ನಂತರ ಮನೆಯಲ್ಲಿ ಗಲಾಟೆಯಾಗಿತ್ತು. ಈ ಬಗ್ಗೆ ಮಂಜುನಾಥ್ ತನ್ನ ಮಗಳಿಗೆ ಎರಡ್ಮೂರು ಬಾರಿ ಬುದ್ದಿ ಹೇಳಿದ್ದನಂತೆ. ಆದರೆ ತಂದೆಯ ಮಾತು ಕೇಳದ ಕವನ ಪ್ರೀತಿಸುವುದನ್ನು ಮುಂದುವರಿಸಿದ್ದಳು.

Written by - Puttaraj K Alur | Last Updated : Oct 12, 2023, 04:23 PM IST
  • ಅನ್ಯಜಾತಿಯ ಯುವಕನ ಪ್ರೀತಿಸಿದ ಮಗಳ ಕತ್ತುಕೊಯ್ದು ಹತ್ಯೆ ಮಾಡಿದ ತಂದೆ!
  • ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿದಲೂರಿನಲ್ಲಿ ನಡೆದಿದೆ
  • ಮಗಳನ್ನು ಭೀಕರವಾಗಿ ಕೊಂದು ಪೊಲೀಸ್ ಠಾಣೆಗೆ ತೆರಳಿ ಶರಣಾದ ತಂದೆ
Honor killing: ಅನ್ಯಜಾತಿಯ ಯುವಕನ ಪ್ರೀತಿಸಿದ ಮಗಳ ಕತ್ತು ಕೊಯ್ದು ಕೊಲೆಗೈದ ತಂದೆ!    title=
ಮಗಳ ಕತ್ತುಕೊಯ್ದು ಹತ್ಯೆ ಮಾಡಿದ ತಂದೆ!

ದೇವನಹಳ್ಳಿ: ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ತನ್ನ ಮಗಳನ್ನೇ ಅಪ್ಪನೊಬ್ಬ ಕತ್ತು ಕೊಯ್ದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿದಲೂರಿನಲ್ಲಿ ನಡೆದಿದೆ.

ಕವನ (20) ಕೊಲೆಯಾಗಿರುವ ಯುವತಿ. ಈಕೆಯ ಅಪ್ಪ ಮಂಜುನಾಥ್ (47) ಎಂಬಾತ ಪುತ್ರಿಯನ್ನು ಕೊಲೆ ಮಾಡಿ ಪೋಲಿಸರಿಗೆ ಶರಣಾಗಿದ್ದಾನೆ. ತನ್ನ ಮಗಳು ಬೇರೆ ಜಾತಿಯ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಹೀಗಾಗಿ ನನಗೆ ವಿಪರಿತ ಕೋಪಬಂದಿತ್ತು. ಹೀಗಾಗಿ ನಾನು ಮಗಳನ್ನು ಕೊಲೆ ಮಾಡಿದ್ದೀನಿ ಅಂತಾ ಮಂಜುನಾಥ್ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದ ಸಾವಿನ‌ ಸಂಖ್ಯೆ 16ಕ್ಕೆ ಏರಿಕೆ

ಘಟನೆಯ ವಿವರ

ಕೊಲೆಯಾಗಿರುವ ಕವನ ಅದೇ ಗ್ರಾಮದ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಆಕೆಯ ಅಪ್ಪ ಮಂಜುನಾಥನಿಗೆ ತಿಳಿದ ನಂತರ ಮನೆಯಲ್ಲಿ ಗಲಾಟೆಯಾಗಿತ್ತು. ಈ ಬಗ್ಗೆ ಮಂಜುನಾಥ್ ತನ್ನ ಮಗಳಿಗೆ ಎರಡ್ಮೂರು ಬಾರಿ ಬುದ್ದಿ ಹೇಳಿದ್ದನಂತೆ. ಆದರೆ ತಂದೆಯ ಮಾತು ಕೇಳದ ಕವನ ಪ್ರೀತಿಸುವುದನ್ನು ಮುಂದುವರಿಸಿದ್ದಳು. ಇದರಿಂದ ಕುಪಿತಗೊಂಡ ಮಂಜುನಾಥ್ ಊರಲ್ಲಿ ತನ್ನ ಮರ್ಯಾದೆ ಹೋಗುತ್ತದೆ ಅಂತಾ ಮಗಳನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಮಂಜುನಾಥ್‍ ಅವರ ಕಿರಿಯ ಮಗಳು ಸಹ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳಂತೆ. ಆಕೆ ಸಹ ಬೇರೊಬ್ಬ ಯುವಕನನ್ನು ಪ್ರೀತಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳಂತೆ. ಆಕೆ ಅಪ್ರಾಪ್ತೆಯಾಗಿದ್ದರಿಂದ ಪೊಲೀಸರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರಂತೆ. ಇದರ ಬೆನ್ನಲ್ಲೇ ಕೊಲೆಯಾದ ಮಗಳು ಕವನ ಸಹ ಅನ್ಯಜಾತಿಯ ಯುವಕನನ್ನು ಪ್ರೀತಿಸುವ ವಿಚಾರ ಮಂಜುನಾಥ್‌ಗೆ ತಿಳಿದಿದೆ. ಹೀಗಾಗಿ ಆತ ಆಕೆಯನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ವಿಶ್ವನಾಥಪುರ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರಲು ಕಾಯುತ್ತಿರುವ 42 ಮುಖಂಡರ ಅರ್ಜಿ ನನ್ನ ಬಳಿ ಇದೆ : ಡಿಕೆಶಿ ಹೊಸ ಬಾಂಬ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News