ಜಮೀನಿಗೆ ನುಗ್ಗಿದ 15 ಜಾನುವಾರುಗಳಿಗೆ ಮಚ್ಚಿನೇಟು!; ಮುಗ್ಧ ಪ್ರಾಣಿಗಳ ಮೂಕರೋಧನೆ

ಗಡಿ ಜಿಲ್ಲೆ ರೈತರ ಮೇಲೆ ದರ್ಪ ಮೆರೆಯುತ್ತಿರುವ ಟಿಬೆಟಿಯನ್ನರು, 15ಕ್ಕೂ ಹೆಚ್ಚು ಎತ್ತುಗಳ ಕಾಲು, ಬಾಲ, ಕೊಂಬುಗಳನ್ನು ಕತ್ತರಿಸಿದ್ದಾರೆಂಬ ಆರೋಪ ಕೇಳಿಬಂದಿದೆ. 

Written by - Puttaraj K Alur | Last Updated : Feb 29, 2024, 05:14 PM IST
  • ಜೋಳದ ಬೆಳೆಯನ್ನು ತಿಂದು ನಾಶ ಮಾಡಿವೆ ಎಂದು ಎತ್ತುಗಳ ಕಾಲು ಕತ್ತರಿಸಿದ ಟಿಬೆಟಿಯನ್ನರು
  • ಹನೂರು ತಾಲೂಕಿನ ಒಡೆಯರ ಪಾಳ್ಯದ ಟಿಬೆಟಿಯನ್ ಕ್ಯಾಂಪ್‌ನ ʼದಿ ವಿಲೇಜ್ʼನಲ್ಲಿ ಅವಮಾನವೀಯ ಘಟನೆ
  • ದಿ ವಿಲೇಜ್ ನಲ್ಲಿ ವ್ಯವಸಾಯ ಮಾಡಿಕೊಂಡು ವಾಸವಿರುವ ಟಿಬೆಟಿಯನ್ನರಿಂದ ಹೀನ ಕೃತ್ಯ
ಜಮೀನಿಗೆ ನುಗ್ಗಿದ 15 ಜಾನುವಾರುಗಳಿಗೆ ಮಚ್ಚಿನೇಟು!; ಮುಗ್ಧ ಪ್ರಾಣಿಗಳ ಮೂಕರೋಧನೆ title=
ಟಿಬೆಟಿಯನ್ನರಿಂದ ಹೀನ ಕೃತ್ಯ!

ಚಾಮರಾಜನಗರ: ಚಾಮರಾಜನಗರ: ಜೋಳದ ಬೆಳೆಯನ್ನು ತಿಂದಿವೆ ಎಂದು 15 ಜಾನುವಾರಗಳಿಗೆ ಮಚ್ಚಿನೇಟು ನೀಡಿರುವ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರ ಪಾಳ್ಯ ಸಮೀಪದ ಟಿಬೆಟಿಯನ್ ಕ್ಯಾಂಪ್‌ನ ʼಡಿ ವಿಲೇಜ್ʼನಲ್ಲಿ ಬುಧವಾರ ಸಂಜೆ ನಡೆದಿದೆ.

ದಿ ವಿಲೇಜ್‌ನಲ್ಲಿ ಟಿಬೆಟಿಯನ್ನರು ವ್ಯವಸಾಯ ಮಾಡಿಕೊಂಡು ವಾಸವಿದ್ದಾರೆ. ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಹಿರಿಯಂಬಲ ಗ್ರಾಮದ ರಘು, ಸಿದ್ದಪ್ಪ, ಬಸವರಾಜು ಎಂಬುವವರು ಎತ್ತುಗಳನ್ನು ಮೇಯಲು ಬಿಟ್ಟಿದ್ದರು. ಈ ಸಂದರ್ಭದಲ್ಲಿ ಎತ್ತುಗಳು ಖಾಸಗಿ ಜಮೀನಿಗೆ ನುಗ್ಗಿ ಜೋಳದ ಫಸಲನ್ನು ತಿಂದಿವೆ. ಇದರಿಂದ ಕುಪಿತರಾದ ನಾಲ್ವರು ಟಿಬೇಟಿಯನ್ ವ್ಯಕ್ತಿಗಳು 15ಕ್ಕೂ ಹೆಚ್ಚು ಎತ್ತುಗಳ ಕಾಲು, ಬಾಲ ಹಾಗೂ ಕೊಂಬುಗಳಿಗೆ ಮಚ್ಚಿನಿಂದ ಹಲ್ಲೆ ಮಾಡಿ ಓಡಿಸಿದ್ದಾರೆ. 

ಇದನ್ನೂ ಓದಿ: Salary hike update : ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರಿ ಉದ್ಯೋಗಿಗಳಿಗೆ 3 ಪ್ರಮುಖ ಘೋಷಣೆಗಳು! ವೇತನದಲ್ಲಿ ಆಗುವುದು ಭಾರೀ ಹೆಚ್ಚಳ

ಸಣ್ಣಪುಟ್ಟ ಗಾಯಗಳಾಗಿದ್ದ ಎತ್ತುಗಳು ಮನೆಗಳಿಗೆ ತೆರಳಿದರೆ ತೀವ್ರ ಗಾಯಗೊಂಡಿದ್ದ ಮೂರು ಎತ್ತುಗಳು ನಡೆಯಲು ಆಗದೆ ಜಮೀನಿನಲ್ಲೇ ಅಸ್ವಸ್ಥಗೊಂಡು ಬಿದ್ದಿವೆ. ವಿಚಾರ ತಿಳಿಯುತ್ತಿದ್ದಂತೆ ಜಾನುವಾರುಗಳ ಮಾಲೀಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೂಕಪ್ರಾಣಿಗಳ ಪರಿಸ್ಥಿತಿ ಕಂಡು ಗೋಳಾಡಿದ್ದಾರೆ.

ಗಡಿ ಜಿಲ್ಲೆ ರೈತರ ಮೇಲೆ ದರ್ಪ ಮೆರೆಯುತ್ತಿರುವ ಟಿಬೆಟಿಯನ್ನರು, 15ಕ್ಕೂ ಹೆಚ್ಚು ಎತ್ತುಗಳ ಕಾಲು, ಬಾಲ, ಕೊಂಬುಗಳನ್ನು ಕತ್ತರಿಸಿದ್ದಾರೆಂಬ ಆರೋಪ ಕೇಳಿಬಂದಿದೆ.  ಇದರಿಂದಾಗಿ ಎತ್ತುಗಳು ಬದುಕಿದ್ದು ಸತ್ತಂತೆ ಆಗಿವೆ. ಎತ್ತುಗಳ ಸ್ಥಿತಿ ಕಂಡು ಎತ್ತುಗಳ ಮಾಲೀಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Typical Farming: ಕಡಿಮೆ ಹೂಡಿಕೆ ಮತ್ತು ಹೆಚ್ಚು ಲಾಭ..! ಲಕ್ಷಗಟ್ಟಲೆ ದುಡಿಯುತ್ತಿರುವ ಆದರ್ಶ ರೈತ

ಹೊಲಗಳಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೆವು. ಲಕ್ಷಾಂತರ ಬೆಲೆ ಬಾಳುವ ಎತ್ತುಗಳ ಕಾಲಗಳನ್ನೇ ಕತ್ತರಿಸಿದ್ದಾರೆ ಅಂತಾ ಮಹಿಳೆಯರು ಗೋಳಾಡುತ್ತಿರುವ ದೃಶ್ಯವು ಮನ ಕಲಕುವಂತಿತ್ತು. ಇನ್ನು ಈ ಅಮಾನವೀಯ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News