Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!

Crime News: ಪತ್ನಿಯೊಬ್ಬಳು ಪ್ರೀತಿಗೆ ಅಡ್ಡಿಯಾದ ಪತಿಯನ್ನು ಕೊಂದು ಮಳ್ಳಿ ಮಳ್ಳಿ ನಾಟಕವಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

Written by - Chetana Devarmani | Last Updated : Jan 13, 2024, 12:14 PM IST
  • ಸಿಲಿಕಾನ್ ಸಿಟಿಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
  • ವೆಂಕಟರಾಮಣ ಮೇಲೆ ಕಲ್ಲು ಎತ್ತು ಹಾಕಿ ಕೊಲೆ
  • ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪತ್ನಿ
Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!   title=

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನೊಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿದ್ದಾಳೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಸಹಜ ಸಾವೆಂದು ನಾಟಕವಾಡಿದ್ದರು. 

ಪತ್ನಿ ಹಾಗೂ ಆಕೆಯ ಪ್ರಿಯಕರ ನಿತೀಶ್ ಕುಮಾರ್ ಪತಿ ವೆಂಕಟರಮಣ ಅವರ ಕೊಲೆ ಮಾಡಿದ್ದಾರೆ. ಜನವರಿ‌ 6 ರಂದು ಪತಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಆರೋಪಿ ನಿತೇಶ್‌ನನ್ನು ಪತ್ನಿ ಮನೆಗೆ ಕರೆಸಿಕೊಂಡಿದ್ದಾಳೆ. ಆದರೆ ಈ ವೇಳೆ ಗಂಡ ವೆಂಕಟರಮಣ ದಿಢೀರ್‌ ಎಂದು ಮನೆಗೆ ಬಂದಿದ್ದಾರೆ. ಈ ವೇಳೆ ಇಬ್ಬರು ರೂಮ್ ನಲ್ಲಿದ್ದನ್ನ ಕಂಡು ಗಂಡ ಶಾಕ್ ಆಗಿದ್ದರು. 

ಆಗ ಪತ್ನಿ ಹಾಗೂ ಆಕೆಯ ಪ್ರಿಯಕರ ನಿತೀಶ್ ಕುಮಾರ್ ಸೇರಿ ವೆಂಕಟರಮಣ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು ಮನೆಯ ಹೊರಗೆ ಶೌಚಾಲಯದ ಬಳಿ ಇಟ್ಟು ಅಸಹಜ ಸಾವು ಎಂದು ಸೀನ್ ಕ್ರಿಯೇಟ್ ಮಾಡಿದ್ದಾರೆ. ಚೂಪಾದ ಕಲ್ಲು ಇಟ್ಟು ಕಲ್ಲಿನ ಮೇಲೆ ಬಿದ್ದಿದ್ದಾನೆ ಎಂದು ಸೀನ್ ಕ್ರೀಯೆಟ್ ಮಾಡಿದ್ದಾರೆ. 

ಇದನ್ನೂ ಓದಿ: ಹೊಸಪೇಟೆ ಹೈಟೆಕ್ ವೇಶ್ಯಾವಟಿಕೆ ಜಾಲ ಭೇದಿಸಿದ ಪೊಲೀಸರು 

ಬಳಿಕ ಬೆಳಗ್ಗೆ ಗಂಡ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪತ್ನಿಯೇ ಪೊಲೀಸರಿಗೆ ಕರೆ ಮಾಡಿದ್ದಾಳೆ. ಸ್ಥಳಕ್ಕೆ ಬಂದ ಪೊಲೀಸರಿಗೆ  ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿದ್ದರು. ಆದರೆ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿದಾಗ ಕೊಲೆ ಎಂಬುದು ಪತ್ತೆಯಾಗಿದೆ. ಪೊಲೀಸರಿಗೂ ಸ್ಥಳ ಪರಿಶೀಲನೆ ವೇಳೆ ಕೊಲೆ ಎಂಬುದಾಗಿ ಅನುಮಾನ ಬಂದಿತ್ತು. 

ಪೊಲೀಸರ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿ ನಿಗಾ ಇಟ್ಟಿದ್ರು. ಮರಣೋತ್ತರ ವರದಿ ಬಂದ ಬಳಿಕ ಪತ್ನಿಯನ್ನ ವಿಚಾರಿಸಿದಾಗ ನನ್ನ ಗಂಡನನ್ನು ಕಳೆದಕೊಂಡಿದಿನಿ ಅಂತ ನಾಟಕವಾಡಿದ್ದಳು. ಪೊಲೀಸರ ತಮ್ಮ ಸ್ಟೈಲ್ ನಲ್ಲಿ‌ ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬಯಲಿಗೆ ಬಂದಿದೆ. 

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,151 ಸರ್ಕಾರಿ ಹುದ್ದೆಗಳ ಭರ್ತಿ

ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದಾಗಿ ಹೇಳಿದ್ದಳು. ನಿತೀಶ್ ಹಾಗೂ ಪತ್ನಿ ಇಬ್ಬರು ಆಂಧ್ರಪ್ರದೇಶ ಸತ್ಯ ಸಾಯಿ ತಾಲೂಕಿನವರು ಎಂದು ತಿಳಿದುಬಂದಿದೆ. ಇವರಿಬ್ಬರೂ ಬಾಲ್ಯದಿಂದ ಸ್ನೇಹಿತರಾಗಿದ್ದವರು ಬಳಿಕ ಇಬ್ಬರು ಪ್ರೀತಿಸಿದ್ದರು. ಗಂಡ ವೆಂಕಟರಮಣ ಮನೆಯಲ್ಲಿ ಇಲ್ಲದಿರುವಾಗ ಕರೆ ಮಾಡಿ ನಿತೀಶ್ ನನ್ನು ಕರೆಸಿಕೊಳ್ಳುತ್ತಿದ್ದಳು. ಸದ್ಯ ಇಬ್ಬರನ್ನೂ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News