ನಟ ದರ್ಶನ್‌ ಅರೆಸ್ಟ್‌: ಮೌನ ಮುರಿದ ನಟಿ ರಚಿತಾರಾಮ್!

Rachita Ram Reaction on Darshan Case: ಕನ್ನಡದ ನಟಿ, ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ದರ್ಶನ್‌ ಅರೆಸ್ಟ್‌ ಕುರಿತಾಗಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಈ ಬಗ್ಗೆ ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿಕೊಂಡು.. ಧರ್ಮೋ ರಕ್ಷತಿ ರಕ್ಷಿತಃ ಬರೆದುಕೊಂಡಿದ್ದಾರೆ.  

Written by - Savita M B | Last Updated : Jun 18, 2024, 03:51 PM IST
  • ಚಿತ್ರದುರ್ಗ ಮೂಲದ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಕುರಿತಾಗಿ ಚಿತ್ರರಂಗದ ಹಲವರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
  • ಇದೀಗ ಗುಳಿಕೆನ್ನೆ ಚೆಲುವೆ, ನಟಿ ರಚಿತಾ ರಾಮ್‌ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಾಗಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ..
ನಟ ದರ್ಶನ್‌ ಅರೆಸ್ಟ್‌: ಮೌನ ಮುರಿದ ನಟಿ ರಚಿತಾರಾಮ್! title=

Rachita Ram: ಚಿತ್ರದುರ್ಗ ಮೂಲದ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಕುರಿತಾಗಿ ಚಿತ್ರರಂಗದ ಗಣ್ಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಗುಳಿಕೆನ್ನೆ ಚೆಲುವೆ, ನಟಿ ರಚಿತಾ ರಾಮ್‌ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಾಗಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ.. 

ಇದನ್ನೂ ಓದಿ-Sridevi first husband: ನಟಿ ಶ್ರೀದೇವಿ ಮೊದಲ ಪತಿ ಈ ಸ್ಟಾರ್‌ ನಟ.. ಬೋನಿ ಕಪೂರ್‌ʼಗಿಂತ ಮೊದಲು ವಿವಾಹವಾಗಿದ್ದು ಈತನ ಜೊತೆ!

ನಟಿ ರಚಿತಾ ಪೋಸ್ಟ್‌ನಲ್ಲಿ ಏನಿದೆ?: 

ನಮಸ್ಕಾರ,  
ಈ ನೋಟ್‌ನ ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! 

ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.  ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಸ್ವಲ್ಪ ಕಷ್ಟವಾಗತ್ತದೆ. ಏನಿದ್ರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ. ಕೊನೆಗೆ ಧರ್ಮೋ ರಕ್ಷತಿ ರಕ್ಷಿತಃ ಎಂದು ಎಂದು ನಟಿ ರಚಿತಾ ರಾಮ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.. 

ಇದನ್ನೂ ಓದಿ-ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News