ನಾನು ಧರಿಸಿದ್ದ ಹುಲಿ ಉಗುರು ನಕಲಿ, ನೈಜವಾದುದ್ದಲ್ಲ : ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಹುಲಿ ಉಗುರು ಪೆಂಡೆಂಟ್‌ : ವರ್ತೂರು ಸಂತೋಷ್‌ ಹುಲಿ ಉಗುರು ಧರಿಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಬಿಗ್‌ಬಾಸ್‌ ಮನೆಯಿಂದಲೇ ಅರಣ್ಯ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ ಮದುವೆ ಸಮಯದಲ್ಲಿ ನಿಖಿಲ್‌ ಕುಮಾರ್‌ ಧರಿಸಿದ್ದ ಹುಲಿ ಉಗುರಿನ ವಿಚಾರವಾಗಿ ಸ್ಪಷ್ಟತೆ ನೀಡಿದ್ದಾರೆ.

Written by - Krishna N K | Last Updated : Oct 25, 2023, 01:22 PM IST
  • ರಾಜ್ಯದಲ್ಲಿ ಹುಲಿ ಉಗುರಿನ ವಿಚಾರ ಸಖತ್‌ ಸದ್ದು ಮಾಡುತ್ತಿದೆ.
  • ರಾಜ್ಯದಲ್ಲಿ ಹುಲಿ ಉಗುರು ಪೆಂಡೆಂಟ್‌ ಪ್ರಕರಣ ಹೆಚ್ಚುತ್ತಿದೆ.
  • ಈ ಕುರಿತು ನಟ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ನಾನು ಧರಿಸಿದ್ದ ಹುಲಿ ಉಗುರು ನಕಲಿ, ನೈಜವಾದುದ್ದಲ್ಲ : ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ title=
Nikhil kumaraswamy, Tiger claw pendant,

Tiger claw pendant case : ರಾಜ್ಯದಲ್ಲಿ ಹುಲಿ ಉಗುರಿನ ವಿಚಾರ ಸಖತ್‌ ಸದ್ದು ಮಾಡುತ್ತಿದೆ. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ ಬಂಧನದಿಂದ ಪ್ರಾರಂಭವಾದ ಈ ಪ್ರಸಂಗ ಇದೀಗ ಸ್ಯಾಂಡಲ್‌ವುಡ್‌ನ ದಿಗ್ಗಜ ನಟರು, ಮತ್ತು ಸ್ವಾಮೀಜಿಗಳ ಕುತ್ತಿಗೆಗೆ ಬಂದು ತಲುಪಿದೆ. ಇದರ ಬೆನ್ನಲ್ಲೆ ಮದುವೆ ಸಮಯದಲ್ಲಿ ನಿಖಿಲ್‌ ಕುಮಾರ್‌ ಧರಿಸಿದ್ದ ಹುಲಿ ಉಗುರಿನ ವಿಚಾರ ಮುನ್ನೆಲೆಗೆ ಬಂದಿದೆ.

ಹೌದು.. ವರ್ತೂರು ಸಂತೋಷ್‌ ಹುಲಿ ಉಗುರು ಧರಿಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಬಿಗ್‌ಬಾಸ್‌ ಮನೆಯಿಂದಲೇ ಅರಣ್ಯ ಪೊಲೀಸರು ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೆ ಸೋಷಿಯಲ್‌ ಮೀಡಿಯಾದಲ್ಲಿ ದರ್ಶನ್‌, ಸಂತೋಷ್‌ ಗುರೂಜಿ, ನಟ ಜಗ್ಗೇಶ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಯಶ್‌, ಶಿವರಾಜಕುಮಾರ್‌ ಹುಲಿ ಉಗುರು ಧರಿಸಿದ್ದ ಫೋಟೋಸ್‌ ವೈರಲ್‌ ಆಗಿವೆ.

ಇದನ್ನೂ ಓದಿ:BBK 10: ದರಿದ್ರ ಅನ್‌ಲಕ್ಕಿ ಬೇಬಿ.. ಮನೆಯವರ ಚುಚ್ಚು ಮಾತು ನೆನೆದು ಕಣ್ಣೀರಿಟ್ಟ ʻನಾಗಿಣಿʼ

ಅಲ್ಲದೆ, ವರ್ತೂರು ಸಂತೋಷ್‌ ಮೇಲೆ ದೂರು ದಾಖಲಿಸಿ ಬಂಧಿಸಿದಂತೆ ಇವರನ್ನೂ ಬಂಧಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇದರ ಬೆನ್ನಲ್ಲೆ ಮದುವೆ ಸಂದರ್ಭದಲ್ಲಿ ನಟ ನಿಖಿಲ್‌ ಕುಮಾರಸ್ವಾಮಿ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದರು ಎನ್ನುವ ವಿಚಾರ ಚರ್ಚೆಗೆ ಕಾರಣವಾಯ್ತು. ಸಧ್ಯ ಈ ಕುರಿತು ನಿಖಿಲ್‌ ಸ್ಪಷ್ಟನೆ ನೀಡಿದ್ದಾರೆ.

ಫೆಸ್‌ಬುಕ್‌ನಲ್ಲಿ ಈ ಕುರಿತು ಸ್ಪಷತೆ ನೀಡಿರುವ ನಿಖಿಲ್‌, ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಫೈರ್ ಕ್ಯಾಂಪ್ : ತಣ್ಣನೆಯ ರಾತ್ರಿ.. ಬಿಸಿಯಾದ ಕಂಬನಿ!

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News