Kantara 2 : ಕಾಂತಾರ 2 ಸಿನಿಮಾಕ್ಕೆ ಅಣ್ಣಪ್ಪ ಪಂಜುರ್ಲಿ ದೈವದಿಂದ ಅನುಮತಿ

Kantara 2 : ಇತ್ತೀಚೆಗೆ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ತಂಡೊಂದಿಗೆ ಅಣ್ಣಪ್ಪ ಪಂಜುರ್ಲಿ ದೈವದ ನೇಮದ ವೇಳೆ ಸಿನಿಮಾಕ್ಕೆ ಅನುಮತಿ ಕೋರಿದ್ದರು. ದೈವ ಅನುಮತಿಯೂ ನೀಡಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. 

Written by - Chetana Devarmani | Last Updated : Dec 12, 2022, 03:52 PM IST
  • ಅಣ್ಣಪ್ಪ ಪಂಜುರ್ಲಿ ದೈವದ ಅನುಮತಿ ಕೋರಿದ್ದ ರಿಷಬ್‌ ಶೆಟ್ಟಿ
  • ಕಾಂತಾರ ಯಶಸ್ಸಿನ ಬಳಿಕ ಕಾಂತಾರ 2 ಸಿನಿಮಾ ಮಾಡಲು ತಯಾರಿ
  • ಕಾಂತಾರ 2 ಸಿನಿಮಾಕ್ಕೆ ಅಣ್ಣಪ್ಪ ಪಂಜುರ್ಲಿ ದೈವದಿಂದ ಅನುಮತಿ
Kantara 2 : ಕಾಂತಾರ 2 ಸಿನಿಮಾಕ್ಕೆ ಅಣ್ಣಪ್ಪ ಪಂಜುರ್ಲಿ ದೈವದಿಂದ ಅನುಮತಿ title=
ರಿಷಬ್‌ ಶೆಟ್ಟಿ

Kantara 2 : ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಕಾಂತಾರ 2 ಸಿನಿಮಾ ಮಾಡಲು ನಿರ್ದೇಶಕ ರಿಷಭ್ ಶೆಟ್ಟಿ ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರವೊಂದು ಹರಿದಾಡುತ್ತಿತ್ತು. ಅದಕ್ಕೆ ಇದೀಗ ಸ್ಪಷ್ಟನೆ ದೊರೆತಂತಿದೆ. ಇತ್ತೀಚೆಗೆ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ತಂಡೊಂದಿಗೆ ಅಣ್ಣಪ್ಪ ಪಂಜುರ್ಲಿ ದೈವದ ನೇಮದ ವೇಳೆ ಸಿನಿಮಾಕ್ಕೆ ಅನುಮತಿ ಕೋರಿದ್ದರು. ದೈವ ಅನುಮತಿಯೂ ನೀಡಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : ನಟಿ ರಮ್ಯಾ ನಿರ್ಮಾಣದ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರಕ್ಕೆ ಸಂಕಷ್ಟ

ನಟ ರಿಷಬ್ ಶೆಟ್ಟಿ ಅನುಮತಿ ಪಡೆದ ಬಗ್ಗೆ ದೈವ ನರ್ತಕ ಉಮೇಶ್ ಗಂಧಕಾಡು ಮಾತನಾಡಿ, ರಿಷಭ್ ಶೆಟ್ಟಿಯವರು ಕೆಲವು ದಿನಗಳ ಹಿಂದೆ ಅಣ್ಣಪ್ಪ‌ ಪಂಜುರ್ಲಿ ಸೇವೆ ಮಾಡಬೇಕೆಂದು ಕೇಳಿಕೊಂಡಿದ್ದರು. ಅದಕ್ಕಾಗಿ ನಗರದ ಬಂದಲೆಯ ಮಡಿವಾಳಬೆಟ್ಟು ದೈವಸ್ಥಾನದಲ್ಲಿ ನಾನೇ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿದ್ದೆ. ದೈವದ ನೇಮದ ವೇಳೆ ಹೇಳುವ ನುಡಿ ನರ್ತಕ ಹೇಳುವುದಲ್ಲ ಬದಲಾಗಿ ದೈವವೇ ಹೇಳುವುದು. ಅದು ದೈವ ನರ್ತಕರಾದ ನಮಗೆ ಗೊತ್ತಾಗದೇ ಆಗುವಂತದ್ದು ಎಂದರು. 

ಅಣ್ಣಪ್ಪ ಪಂಜುರ್ಲಿಯ ನೇಮದ ವೇಳೆ ಪುಷ್ಪ ಪ್ರಶ್ನೆಯಲ್ಲಿ ದೈವದ ಬಳಿ ಕಾಂತಾರ-2 ಸಿನಿಮಾ ಮಾಡಲು ಅರಿಕೆ ಮಾಡಿದ್ದ ವೇಳೆ ಶುಭ ಶಕುನ ಬಂದಿದೆ. ಕಾಂತಾರ-2 ಸಿನಿಮಾ ಬಹಳ ಶುದ್ಧಾಚಾರದಿಂದ ಮಾಡಬೇಕು. ಧರ್ಮಸ್ಥಳಕ್ಕೆ ತೆರಳಿ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ಪ್ರಾರ್ಥನೆಯೂ ಮಾಡಬೇಕು ಎಂದು ದೈವ ನುಡಿದಿದೆ‌ ಎಂದು ಅಣ್ಣಪ್ಪ ಪಂಜುರ್ಲಿ ದೈವ ನರ್ತಕ ಉಮೇಶ್ ಗಂಧಕಾಡು ಹೇಳಿದ್ದಾರೆ.

ಇದನ್ನೂ ಓದಿ : Trending Video : ಟಾಪ್‌ಲೆಸ್‌ ಆಗಿ ಬಾಲ್ಕನಿಗೆ ಬಂದ ನಟಿ.! ಚಳಿಯಲ್ಲಿ ಹೀಗೆಲ್ಲಾ ಮಾಡಿದ್ರೆ ಹೇಗ್‌ ಗುರು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News