ಹೊಲಗೇರಿ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್‍ನಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಸಿದ್ದರು. ತಕ್ಷಣ ಎಚ್ಚೆತ್ತ ಉಪೇಂದ್ರ ಆ ವಿಡಿಯೋ ಡಿಲೀಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು.

Written by - VISHWANATH HARIHARA | Edited by - Puttaraj K Alur | Last Updated : Aug 14, 2023, 12:52 PM IST
  • ಹೊಲಗೇರಿ ಪದ ಬಳಕೆ ವಿಚಾರವಾಗಿ ಸ್ಯಾಂಡಲ್‌ವುಡ್ ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್
  • ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ದೂರಿನನ್ವಯ ಎಫ್‍ಐಆರ್
  • ವಿಚಾರಣೆಗೆ ಹಾಜರಾಗುವಂತೆ ನಟ ಉಪೇಂದ್ರಗೆ ನೋಟಿಸ್ ನೀಡಿರುವ ಸಿಕೆ ಅಚ್ಚುಕಟ್ಟು ಪೊಲೀಸರು
ಹೊಲಗೇರಿ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು title=
ನಟ ಉಪೇಂದ್ರ ವಿರುದ್ಧ ಮತ್ತೊಂದು FIR!

ಬೆಂಗಳೂರು: ಹೊಲಗೇರಿ ಪದ ಬಳಕೆ ವಿಚಾರವಾಗಿ ಸ್ಯಾಂಡಲ್‌ವುಡ್ ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತಮ್ಮ ಲೈವ್ ವಿಡಿಯೋದಲ್ಲಿ ಸಮುದಾಯವೊಂದರ ಭಾವನೆಗಳಿಗೆ ನೋವುಂಟಾಗುವಂತೆ ಮಾತನಾಡಿದ ಆರೋಪದಡಿ ನಿನ್ನೆಯಷ್ಟೇ ಉಪೇಂದ್ರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್‌ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿತ್ತು.ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, SC/ST ದೌರ್ಜನ್ಯ ತಡೆ ಕಾಯ್ದೆಯಡಿ ಉಪೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 50 ನೇ ವಯಸ್ಸಿನಲ್ಲಿ ಮತ್ತೆ ತಂದೆಯಾದ ಖ್ಯಾತ ನಟ, ಮದುವೆಯಾಗದೇ ಎರಡನೇ ಮಗು ಪಡೆದ ಬಾಲಿವುಡ್‌ ತಾರೆ!

ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್‍ನಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಸಿದ್ದರು. ನಂತರ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣ ಎಚ್ಚೆತ್ತ ಉಪೇಂದ್ರ ಆ ವಿಡಿಯೋ ಡಿಲೀಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು.

ಆದರೆ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ವಿರುದ್ಧ ಆಕ್ರೋಶ ಮುಂದುವರೆದಿದ್ದು, ಸದ್ಯ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮತ್ತೊಂದು ಕಡೆ ಸಿಕೆ ಅಚ್ಚುಕಟ್ಟು ಪೊಲೀಸರು ಉಪೇಂದ್ರಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ದಿ ರೆಕಾರ್ಡಿಂಗ್ ಅಕಾಡೆಮಿ ಮತದಾನ ಸದಸ್ಯರಾಗಿ ಇಂಡೋ-ಆಸ್ಟ್ರೇಲಿಯನ್ ಗಾಯಕ ಶ್ರೀರಾಮ್ ಅಯ್ಯರ್ ಆಯ್ಕೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News