Kerebete : ಡಾಲಿ, ಕಿಚ್ಚನ ಬಳಿಕ ʼಕೆರೆಬೇಟೆʼ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಾಥ್..!

Ashwini puneeth rajkumar : ಕೆರೆಬೇಟೆ ಸಿನಿಮಾ ತನ್ನ ಟೀಸರ್ ಮತ್ತು ಟ್ರೈಲರ್ ಹಾಗೂ ಎರಡು ಹಾಡುಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್ ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. 

Written by - YASHODHA POOJARI | Edited by - Krishna N K | Last Updated : Mar 9, 2024, 04:21 PM IST
  • ಕೆರೆಬೇಟೆ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
  • ಸಧ್ಯ ಚಿತ್ರತಂಡ ಚಿತ್ರದ 3ನೇ ಹಾಡನ್ನು ರಿಲೀಸ್ ಮಾಡಿದೆ.
  • ಕೆರಬೇಟೆಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌ ನೀಡಿದ್ದಾರೆ.
Kerebete : ಡಾಲಿ, ಕಿಚ್ಚನ ಬಳಿಕ ʼಕೆರೆಬೇಟೆʼ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಾಥ್..! title=
kerebete movie

Kerebete movie : ಸ್ಯಾಂಡಲ್ ವುಡ್ ನಲ್ಲಿ ಸದ್ಯ  ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ಈಗಾಗಲೇ ಸಿನಿಮಾದಿಂದ ಟೀಸರ್, ಟ್ರೈಲರ್ ಮತ್ತು ಎರಡು ಹಾಡುಗಳು ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್ ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. 'ಕಣ್ಣುಗಳೆ ಕಳೆದು ಹೋದಾಗ...' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ. .... ಈ ಸುಂದರ ಹಾಡಿಗೆ.... ಸಿದ್ಧಾರ್ಥ ಬೆಳ್ಮಣ್ಣು ಧ್ವನಿ ನೀಡಿದ್ದು ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: Sara Tendulkar: ಯಾವ ಸ್ಟಾರ್‌ ಹಿರೋಯಿನ್‌ಗೂ ಕಮ್ಮಿಇಲ್ಲ ಕ್ರಿಕೆಟಿರ್ ಸಚಿನ್ ಪುತ್ರಿ! ಪೋಟೋಸ್‌ ವೈರಲ್

ಇತ್ತೀಚಿಗಷ್ಟೇ ಸಿನಿಮಾತಂಡ 2ನೇ ಹಾಡನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ರಿಲೀಸ್ ಮಾಡಿ ಅಭಿಮಾನಿಗಳ ಗಮನ ಸೆಳೆದಿದ್ದರು. ಇದೀಗ ಸಿನಿಮಾ ತಂಡ ಚಿತ್ರದ ಪ್ಯಾತೋ ಸಾಂಗ್ ರಿಲೀಸ್ ಮಾಡಿದೆ. ಈ ಹಾಡಿಗೆ ಮನ ಸೋತ ಅಶ್ವಿನಿ ಪುನೀತ್ ರಾಜಕುಮಾರ್ ಸಂತಸ ವ್ಯಕ್ತಪಡಿಸಿದರು. ಹಾಡು ರಿಲೀಸ್ ಮಾಡುವ ನೆಪದಲ್ಲಿ ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾ ತಂಡ ಒಂದಿಷ್ಟು ಇಂಟರೆಸ್ಟಿಂಗ್ ಮಾಹಿತಿಯನ್ನ ಹಂಚಿಕೊಂಡರು.

ನಿರ್ದೇಶಕ ರಾಜ್ ಗುರು ಮಾತನಾಡಿ ನಿರ್ಮಾಪಕ ಅಶ್ವಿನಿ ಪುನೀತ್ ರಾಜಕುಮಾರ್ ಹಾಡನ್ನು ರಿಲೀಸ್ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. 'ದೊಡ್ಮನೆಗೂ ನನಗೂ ಒಂದು ಸಂಬಂಧವಿದೆ‌. ಅಪ್ಪು ಸರ್ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಮಣ್ಣಿನ ಕಥೆಗಳ ಬಗ್ಗೆ ತುಂಬಾ ಮಾತನಾಡುತ್ತಿದ್ವಿ. ಈ ರೀತಿಯ ಸಿನಿಮಾ ಅವರಿಗೆ ತುಂಬಾ ಇಷ್ಟ' ಎಂದರು.

ನಾಯಕಿ ಬಿಂಧು ಶಿವರಾಮ್ ಮಾತನಾಡಿ, 'ಮಲೆನಾಡಿನ ಭಾಷೆ ನನಗೆ ತುಂಬಾ ಕಷ್ಟವಾಯಿತು. ಇಡೀ ಸಿನಿಮಾ ತಂಡ ಮಲೆನಾಡಿನವರಾಗಿದ್ದರಿಂದ ಅದೇ ಭಾಷೆಯನ್ನು ಮಾತನಾಡುತ್ತಿದ್ದರು. ಹಾಗಾಗಿ ನನಗೂ ಅವರ ಜೊತೆ ಸೇರಿ ಮಲೆನಾಡಿನ ಭಾಷೆ ಮಾತನಾಡಲು ಸುಲಭವಾಯ್ತು. ಈ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಗಟ್ಟಿಯಾಗಿದೆ' ಎಂದರು.

ಇದನ್ನೂ ಓದಿ:ಕಠಿಣ ನಿರ್ಧಾರ ಕೈಗೊಂಡ ನಟಿ ಸಮಂತಾ ! ಸ್ಯಾಮ್ ಮಾತು ಕೇಳಿ ಪ್ಯಾನ್ಸ್‌ ಬೇಸರ

ನಾಯಕ ಗೌರಿಶಂಕರ್ ಮಾತನಾಡಿ, 'ಅಶ್ವಿನಿ ಮೇಡಮ್ ಸಿನಿಮಾದ ಟೀಸರ್, ಟ್ರೈಲರ್ ಹಾಡನ್ನು ನೋಡಿ ತುಂಬಾ ಇಷ್ಟಪಟ್ಟರು. ಈ ಸಿನಿಮಾ ನನಗೆ ಗೆಲ್ಲಲೇ ಬೇಕಾಗಿದೆ. ಏಕೆಂದರೆ ನಾನು ತುಂಬಾ ಸೋಲನ್ನು ಕಂಡಿದ್ದೇನೆ. ಸೋತು ಮನೆಯಲ್ಲಿ ಕೂರುವುದು ತುಂಬಾ ಕಷ್ಟ. ಸಿನಿಮಾ ಸಹವಾಸವೇ ಬೇಡ ಅಂತ ಇದ್ದೆ. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಹಾಗಾಗಿ ಈ ಸಿನಿಮಾ ಒಪ್ಪಿಕೊಂಡೆ. ತುಂಬಾ ಪ್ರಿಪರೇಷನ್ ಮಾಡಿದ್ದೇವೆ, ಗೆಲುವು ನನಗೆ ಅನಿವಾರ್ಯವಾಗಿದೆ' ಎಂದರು

ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News