ಸುದೀಪ್‌-ಅಪ್ಪು ಪ್ಯಾನ್ಸ್‌ ನಡುವೆ ಜಗಳ ಹಚ್ಚುವ ಕೆಲಸ ಮಾಡಿದ ಕಿಡಿಗೇಡಿಗಳು..! ಅಷ್ಟಕ್ಕೂ ಆಗಿದ್ದೇನು..?

Ashwini Puneeth Rajkumar : ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮತ್ತು ಕಿಚ್ಚ ಸುದೀಪ್‌ ಅಭಿಮಾನಿಗಳ ಮಧ್ಯ ಕೆಲ ಕಿಡಿಗೇಡಿಗಳು ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್‌ಸಿಬಿ ಸೋಲುತ್ತಿರುವುದಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಕಾರಣ ಎಂಬ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೆ, ಕೆಲವರು ಸುದೀಪ್‌ ಫ್ಯಾನ್ಸ್‌ ಹೆಸರಲ್ಲಿ ಅದೇ ಪೋಸ್ಟ್‌ ಅನ್ನು ಶೇರ್‌ ಮಾಡುತ್ತಿದ್ದಾರೆ.

Written by - Krishna N K | Last Updated : Apr 5, 2024, 06:35 PM IST
    • ಕಿಡಿಗೇಡಿಗಳಿಂದ ಅಪ್ಪು ಸುದೀಪ್‌ ಅಭಿಮಾನಿಗಳ ಮಧ್ಯ ಜಗಳ ಹಚ್ಚುವ ಕೆಲಸ
    • ಅಶ್ವಿನಿ ಅವರ ಕುರಿತು ಸುದೀಪ್‌ ಫ್ಯಾನ್ಸ್‌ ಹೆಸರಲ್ಲಿ ಪೋಸ್ಟ್‌ ಶೇರ್‌
    • ಗಜಪಡೆ ಹಂಚಿಕೊಂಡಿದ್ದ ಪೋಸ್ಟ್‌ ಅನ್ನು ಕಿಚ್‌ನ ಅಭಿಮಾನಿಗಳ ಹೆಸರಲ್ಲಿ ಪೋಸ್ಟ್‌
ಸುದೀಪ್‌-ಅಪ್ಪು ಪ್ಯಾನ್ಸ್‌ ನಡುವೆ ಜಗಳ ಹಚ್ಚುವ ಕೆಲಸ ಮಾಡಿದ ಕಿಡಿಗೇಡಿಗಳು..! ಅಷ್ಟಕ್ಕೂ ಆಗಿದ್ದೇನು..? title=

Appu and Sudeep fans : ಗಜಪಡೆ ಎಂಬ ಪೇಜ್‌ ಮೂಲಕ ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರ ವಿರುದ್ಧ ಅವಹೇಳನಕಾರಿ ಪೊಸ್ಟ್‌ ಹಂಚಿಕೊಳ್ಳಲಾಗಿತ್ತು. ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂದು ಬರೆದು ಅಶ್ವಿನಿಯವರ ಫೊಟೋ ಇರುವ ಪೋಸ್ಟರ್‌ ಅನ್ನು ಶೇರ್‌ ಮಾಡಲಾಗಿತ್ತು.

ಇದೀಗ ಗಜಪಡೆ ಪೋಸ್ಟ್‌ ಅನ್ನು ಹೆಸರು ಬದಲಾಯಿಸಿ ಕಿಚ್ಚ ಸುದೀಪ್‌ ಅಭಿಮಾನಿಗಳ ಹೆಸರಿನಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಶ್ವಿನಿಯವರ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಅಪ್ಪು ಅಭಿಮಾನಿಗಳು ಎಚ್ಚೆತ್ತುಕೊಂಡಿದ್ದು, ಈ ಕುರಿತು ದೂರು ದಾಖಲಿಸಿದ್ದಾರೆ. 

ಇದನ್ನೂ ಓದಿ:ಓವರ್ ಆ್ಯಕ್ಟಿಂಗ್, ಎರಡನೇ ಪಾರ್ಟ್‌ನಲ್ಲಿ ಮಂತ್ರವಾದಿ..! ಹೀಗಿದೆ ಶರಣ್‌ ʼಅವತಾರ ಪುರುಷ 2ʼ 

ಬೆಂಗಳೂರು ನಗರ ಪೊಲೀಸ್ ಆಯುಕ್ತರು ನೀಡಿದ ದೂರಿನಲ್ಲಿ, ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನೆ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾ‌ರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಮೇಡಮ್ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ "ಗಜ ಪಡೆ" ಎಂಬ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದದ್ದೆ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಮೇಡಂ ಅವರನ್ನು ಹೊಣೆ ಮಾಡಿ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಿರುತ್ತಾನೆ. 

ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ಆ ನಕಲಿ ಖಾತೆಯ ಹೆಸರನ್ನು "ಸುದೀಪ್ ಅಭಿಮಾನಿ" ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಿರುತ್ತಾನೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ ಈ ಘಟನೆಯಿಂದ ಕರ್ನಾಟಕದ ರಾಜವಂಶದ ಅಭಿಮಾನಿಗಳಿಗೆ ತುಂಬಾ ನೋವು ಉಂಟಾಗಿರುತ್ತದೆ ಹಾಗಾಗಿ ಅವನನ್ನು ಶೀಘ್ರದಲ್ಲೇ ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ ಎಂದು ಉಲ್ಲೇಖಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News