Banaras: ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ!

ಬೆಳಗಾವಿಯ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ಬನಾರಸ್’ ಹೀರೋ ಝೈದ್ ಖಾನ್ ರನ್ನು ಗೌರವಿಸಲಾಯಿತು.

Written by - YASHODHA POOJARI | Edited by - Puttaraj K Alur | Last Updated : Nov 1, 2022, 05:28 PM IST
  • 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾದ ನಟ ಝೈದ್ ಖಾನ್
  • ಗಡಿನಾಡು ಬೆಳಗಾವಿಯಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಸಿನಿಮಾದ ಹೀರೋ
  • ಝೈದ್ ಖಾನ್‍ಗೆ ಸನ್ಮಾನಿಸಿ ಗೌರವಿಸಿದ ಬೆಳಗಾವಿಯ ಕನ್ನಡಪರ ಸಂಘಟನೆಗಳು
Banaras: ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ! title=
ಕನ್ನಡ ರಾಜ್ಯೋತ್ಸವದಲ್ಲಿ ಝೈದ್ ಖಾನ್

ಬೆಂಗಳೂರು: ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ‘ಬನಾರಸ್’ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಕನ್ನಡ ರಾಜ್ಯೋತ್ಸವದ ನಿಮಿತ್ತ ಕುಂದಾನಗರಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: "ಡಾ. ರಾಜ್ ಮತ್ತು ಗೋಕಾಕ್ ಚಳುವಳಿ" : ಮಾತೃಭಾಷೆಯ ಉಳಿವಿಗೆ ನಡೆದ ಹೋರಾಟದ ಮೆಲುಕು

ನಂತರ ಬೆಳಗಾವಿ ಜಿಲ್ಲೆಯ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಯೂ ‘ಬನಾರಸ್’ ಹೀರೋ ಝೈದ್ ಖಾನ್ ಅವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದ ವೇದಿಕೆಗೆ ಝೈದ್‌ರನ್ನು ಪ್ರೀತಿಯಿಂದ ಬರಮಾಡಿಕೊಂಡು ಸನ್ಮಾನಿಸಲಾಯಿತು. ಬಳಿಕ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೃಹತ್ ಪಾದಯಾತ್ರೆ ಆರಂಭಿಸಿದ್ದವು. ಇದರಲ್ಲಿಯೂ ಝೈದ್ ಖಾನ್ ಉತ್ಸಾಹದಿಂದ ಹೆಜ್ಜೆ ಹಾಕಿದರು. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ನಿಜಕ್ಕೂ ಭಿನ್ನವಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ಈ ಸೀಮೆಯ ಕನ್ನಡಪರ ಮನಸುಗಳೆಲ್ಲ ಒಂದುಗೂಡಿ 10 ಸಾವಿರ ಮೀಟರ್ ಕನ್ನಡ ಧ್ವಜ ಪ್ರದರ್ಶನ ನಡೆಸಿ ಗಿನ್ನಿಸ್ ದಾಖಲೆ ಬರೆಯಲಾಯ್ತು. ಈ ಕಾರ್ಯಕ್ರಮದ ನೇತೃತ್ವವನ್ನು ಕಿರಣ್ ಮಾಳೆನವರ್ ಮತ್ತು ಸುನೀಲ್ ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ‘ಬನಾರಸ್’ ಹೀರೋ ಝೈದ್ ಖಾನ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಡಾ.ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಕನ್ನಡ ಸೇನೆಯ ರಾಜು ಹಾಗೂ ಹುಬ್ಬಳಿಯ ಯುವ ನಾಯಕ ರಶೀದ್ ಹಾಗೂ ಆಯೂಬ್ ಉಪಸ್ಥಿತರಿದ್ದರು.

ಬೆಳಗಾವಿ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಅಕ್ಷರಶಃ ಕಂಗೊಳಿಸಿತ್ತು. ಅದೆಲ್ಲದರಲ್ಲಿಯೂ ‘ಬನಾರಸ್’ ನಾಯಕ ನಟ ಝೈದ್ ಖಾನ್ ಭಾಗಿಯಾಗಿದ್ದು ನಿಜವಾದ ವಿಶೇಷ. ಈ ಸಂದರ್ಭದಲ್ಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪತ್ರಿಕಾಗೋಷ್ಟಿ ನಡೆಸಲಾಯ್ತು.  

ಇದನ್ನೂ ಓದಿ: ಅಪ್ಪುಗೆ ʻಕರ್ನಾಟಕ ರತ್ನʼ ಪ್ರಶಸ್ತಿ ಪ್ರದಾನ ಹಿನ್ನೆಲೆ ನಿಮಿಷಾಂಭ ದೇಗುಲಕ್ಕೆ ಶಿವಣ್ಣ ಭೇಟಿ

ಇದೇ ಹೊತ್ತಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಝೈದ್ ಖಾನ್‌ರನ್ನು ಆಹ್ವಾನಿಸಲಾಗಿತ್ತು. ಝೈದ್ ಕನ್ನಡತನದ ಮೇಲಿನ ಪ್ರೀತಿಯಿಂದಲೇ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ನೇತೃತ್ವವನ್ನು ವಾಜೀದ್ ಅಹ್ಮದ್ ಹಿರೇಗುಡಿ, ಕನ್ನಡ ಪರ ಹೋರಾಟಗಾರ ಮಹಾಂತೇಶ್ ರಂಗತಿಮಠ ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರು ವಹಿಸಿಕೊಂಡಿದ್ದರು.

ಬೆಳಗಾವಿಯಲ್ಲಿ ನಡೆದ ಇಷ್ಟೆಲ್ಲಾ ಕಾರ್ಯಕ್ರಮಗಳ ಮೂಲಕ ‘ಬನಾರಸ್’ ಹೀರೋ ಝೈದ್ ಖಾನ್ ಕನ್ನಡದ ಕಂಪು ಪಸರಿಸುವ ಕಾರ್ಯ ನಡೆಸಿದರು. ಅತ್ಯಂತ ಅಚ್ಚುಕಟ್ಟಾಗಿ ನಡೆದ ಈ ಎಲ್ಲಾ ಕಾರ್ಯಕ್ರಮಗಳ ಉಸ್ತುವಾರಿಯನ್ನು ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಕನ್ನಡ ಸೇನೆಯ ರಾಜು ಕೋಲಾರ, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಅಯೂಬ್ ಪಾರ್ಕನಳ್ಳಿ, ಡಾ.ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಇಷಾಕ್ ನಿಪ್ಪಾಣಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ ರಶೀದ್  ಮುಂತಾದವರು ವಹಿಸಿಕೊಂಡಿದ್ದರು. ಇದೆಲ್ಲದರ ಮೇಲುಸ್ತುವಾರಿಯನ್ನು ರಾಹುಲ್ ಗಾಂಧಿ ಸಾರಥ್ಯದ ;ಭಾರತ್ ಜೋಡೋ ಯಾತ್ರೆ;ಯ ಉಸ್ತುವಾರಿ ಹೊತ್ತಿದ್ದ ಡಾ.ಶಕೀಲ್ ನವಾಜ್ ಹೊತ್ತು, ಸಮರ್ಥವಾಗಿ ನೆರವೇರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News