ರೇಣುಕಾಸ್ವಾಮಿ ಹತ್ಯೆ ಆಕಸ್ಮಿಕ ಘಟನೆ, ದರ್ಶನ್ ಒಳ್ಳೆ ವ್ಯಕ್ತಿ : ಬಿಸಿ ಪಾಟೀಲ್‌

BC Patil on Darshan case : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು..  

Written by - Krishna N K | Last Updated : Jul 6, 2024, 03:45 PM IST
    • ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟ ಮಾಜಿ ಸಚಿವ ಬಿಸಿ ಪಾಟೀಲ್‌
    • ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ,
    • ರೇಣುಕಾಸ್ವಾಮಿ ಪತ್ನಿಗೆ ಉದ್ಯೋಗ ಕೊಡ್ಬೇಕು ಎಂದ ಮಾಜಿ ಸಚಿವ
ರೇಣುಕಾಸ್ವಾಮಿ ಹತ್ಯೆ ಆಕಸ್ಮಿಕ ಘಟನೆ, ದರ್ಶನ್ ಒಳ್ಳೆ ವ್ಯಕ್ತಿ : ಬಿಸಿ ಪಾಟೀಲ್‌ title=
BC Patil

ಚಿತ್ರದುರ್ಗ : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಇದೊಂದು ಆಕಸ್ಮಿಕ ಘಟನೆ ಆಗಿದ್ದು ರೇಣುಕಾಸ್ವಾಮಿ ಪತ್ನಿಗೆ ಉದ್ಯೋಗ ಕೊಡ್ಬೇಕು, ಈ ಪ್ರಕರಣದಲ್ಲಿ ಯಾರಾದ್ರೂ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು.

ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟ ನಂತರ ಮಾದ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಬಿ.ಸಿ ಪಾಟೀಲ್, ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದರು.

ಇದನ್ನೂ ಓದಿ: ಈ ವಾರ OTT ನಲ್ಲಿ ಬಿಡುಗಡೆಯಾದ ಚಲನಚಿತ್ರಗಳ ಪಟ್ಟಿ ಇಲ್ಲಿದೆ..! ನಾಳೆ ರಜೆ ಇದೆ ನೋಡಿ..

ಅಲ್ಲದೆ, ಇಲ್ಲಿ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ, ಮಾಡ್ರನ್ ಜಗತ್ತಲ್ಲಿ ಟೆಕ್ನಾಲಜಿ ಹೆಚ್ಚಾದ ಮೇಲೆ ಸೈಬರ್ ಕ್ರೈಮ್ ಜಾಸ್ತಿಯಾಗಿದೆ. ರೇಣುಕಾ ಸ್ವಾಮಿ ಮೇಲೆ ಸಣ್ಣ ದೂರು ಕೊಟ್ಟಿದ್ರೆ ವಿಚಾರಣೆ ನಡೆಸಬಹುದಿತ್ತು. 
ಆದ್ರೆ ಅದು ಮರಣ ದಂಡನೆ ಕೊಡುವಂತ ಅಪರಾಧ ಅಲ್ಲ ಎಂದು ಬಿಸಿ ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದರು.

ದರ್ಶನ್ ಪೊಲೀಸರಿಗೆ ಕರೆ ಮಾಡಿ ಹೇಳಿದ್ರೆ ಮುಗಿದು ಹೋಗುತ್ತಿತ್ತು. ಯಾವುದು ಸುಳ್ಳು ಯಾವುದು ನಿಜ ಅಂತ ಹೇಳೋಕೆ ಆಗಲ್ಲ. ಆದರೆ ದರ್ಶನ್ ಒಳ್ಳೆ ವ್ಯಕ್ತಿ, ಒಳ್ಳೆಯ ನಟ ಆಗಿದ್ದ. ಈಗ ಅವರ ಮೇಲೆ ಕೊಲೆ ಆರೋಪ ಬಂದಿದೆ, ಕೋರ್ಟ್ ನಲ್ಲಿ ಕೇಸ್ ಎದುರಿಸುತ್ತಿದ್ದಾರೆ, ತನಿಖೆ ಆದ್ಮೇಲೆ ಗೊತ್ತಾಗುತ್ತೆ ಎಂದರು. ಅಲ್ಲದೆ, ದರ್ಶನ್‌ ಅವರನ್ನು ಬ್ಯಾನ್ ಮಾಡುವ ವಿಚಾರ ಚೆಂಬರ್‌ಗೆ ಬಿಟ್ಟಿದ್ದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News