ಪ್ರಥಮ್‌ ʼಫಸ್ಟ್ ನೈಟ್ ವಿತ್ ದೆವ್ವʼ ಟೀಸರ್ ಔಟ್‌..! ಮಸ್ತ್‌ ಇದೆ ನೋಡಿ..

Bigg Boss Pratham : ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ.. ಟೀಸರ್‌ ಸಖತ್ತಾಗಿದೆ ಮಿಸ್‌ ಮಾಡದೇ ನೋಡಿ.

Written by - YASHODHA POOJARI | Edited by - Krishna N K | Last Updated : Feb 25, 2024, 08:28 PM IST
  • ʼಫಸ್ಟ್ ನೈಟ್ ವಿತ್ ದೆವ್ವʼ ಚಿತ್ರದ ಟೀಸರ್ ಬಿಡುಗಡೆ
  • ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ ಚಿತ್ರ
  • ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ ʼಫಸ್ಟ್ ನೈಟ್ ವಿತ್ ದೆವ್ವʼ
ಪ್ರಥಮ್‌ ʼಫಸ್ಟ್ ನೈಟ್ ವಿತ್ ದೆವ್ವʼ ಟೀಸರ್ ಔಟ್‌..! ಮಸ್ತ್‌ ಇದೆ ನೋಡಿ.. title=

First night with Devva : ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ ʼಫಸ್ಟ್ ನೈಟ್ ವಿತ್ ದೆವ್ವʼ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ ಬಿಗ್ ಬಾಸ್ ಸ್ಪರ್ಧಿಗಳಾದ ತುಕಾಲಿ ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ನಾನು ನಿರ್ದೇಶಕರ ನಟ ಎಂದು ಮಾತನಾಡಿದ ಪ್ರಥಮ್, ಪಿ.ವಿ.ಆರ್ ಸ್ವಾಮಿ‌ ಅವರು ಬಹುಬೇಗನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ. ಈ ಚಿತ್ರದಲ್ಲಿ ನಗುವಿಗೆ ಬರವಿಲ್ಲ. ಹಾರಾರ್, ಕಾಮಿಡಿ, ಆಕ್ಷಮ್ ಹಾಗೂ ಸೆಂಟಿಮೆಂಟ್ ಗಳ ಸಮ್ಮಿಲ್ಲನವೇ ಈ ನಮ್ಮ ಚಿತ್ರ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಾಯಕಿಯರು. ನಿಖಿತ ನನ್ನ ಹೆಂಡತಿ ಪಾತ್ರ‌‌ ಮಾಡಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಮಾರಂಭಕ್ಕೆ ಬಂದಿರುವ ತುಕಾಲಿ ಸಂತೋಷ್ ಹಾಗೂ ನಮೃತಾ ಅವರಿಗೆ ಧನ್ಯವಾದ ಎಂದರು.

ಇದನ್ನೂ ಓದಿ: ಮತ್ತೆ ಬರ್ತಿದೆ ಬಿಗ್ ಬಾಸ್ ಹೊಸ ಸೀಸನ್… ಈ ದಿನದಂದು ಆರಂಭ: ದಕ್ಷಿಣ ಭಾರತದ ಈ ಪ್ರಖ್ಯಾತ ನಟನೇ ನಿರೂಪಕ!

ನವೆಂಬರ್ ನಲ್ಲಿ ಆರಂಭವಾದ ಈ ಚಿತ್ರ, ನನ್ನ ತಂಡದ ಸಹಕಾರದಿಂದ ನಿಗದಿಯಂತೆ ಪೂರ್ಣವಾಗಿದೆ. ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಸಿದ್ದತೆ ನಡೆಯತ್ತಿದೆ ಎಂದು ನಿರ್ದೇಶಕ ಹಾಗೂ ಛಾಯಾಗ್ರಾಹಕ ಪಿ‌ವಿಆರ್ ಸ್ವಾಮಿ ತಿಳಿಸಿದರು.

ನಿರ್ಮಾಪಕ ನವೀನ್ ಬೀರಪ್ಪ, ನಾಯಕಿರಾದ ನಿಖಿತ, ಸುಶ್ಮಿತ, ಜೀವಿತ, ನಟಿ ಪುಷ್ಪ ಸ್ವಾಮಿ, ನಟ ಹರೀಶ್ ರಾಜ್, ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಕಾರ್ಯಕಾರಿ ನಿರ್ಮಾಪಕ ಅರವಿಂದ್ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಚಿತ್ರದ ಕುರಿತು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News