ಅಂಬರೀಶ್ ನಿಧನಕ್ಕೆ ಅಮಿತಾಬ್ ಬಚ್ಚನ್ ಕಂಬನಿ

  

Last Updated : Nov 25, 2018, 01:57 PM IST
ಅಂಬರೀಶ್ ನಿಧನಕ್ಕೆ ಅಮಿತಾಬ್ ಬಚ್ಚನ್ ಕಂಬನಿ title=

ನವದೆಹಲಿ: ಕನ್ನಡ ಚಿತ್ರರಂಗದ ಮೇರು ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತಾಬ್, "ನನ್ನ ಸಹೋದ್ಯೋಗಿ ಅಂಬರೀಶ್​ ನಿಧನರಾದ ಸುದ್ದಿ ಕೇಳಿ ನೋವಾಗಿದೆ. ಅವರ ಸಾವಿಗೆ ನನ್ನ ಸಂತಾಪ ಎಂದಿದ್ದಾರೆ. 

ತೀವ್ರ ಎದೆನೋವು ಹಾಗು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಅಂಬರೀಶ್(66) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಇವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನಡೆಯಲಿದೆ.
 

Trending News