ದೀಪಾವಳಿ ಹಬ್ಬದ ದಿನ "ಬ್ಯಾಡ್ ಮ್ಯಾನರ್ಸ್" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಿಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಿತ್ತಿದೆ ನೋಡಿ ಹಾರೈಸಿ ಎಂದರು.

Written by - Yashaswini V | Last Updated : Nov 15, 2023, 10:07 AM IST
  • ನವೆಂಬರ್ 24 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ "ಬ್ಯಾಡ್ ಮಾನರ್ಸ್"
  • "ಬ್ಯಾಡ್ ಮಾನರ್ಸ್" ಅಭಿಷೇಕ್ ಅಂಬರೀಷ್ ಅಭಿನಯದ ಎರಡನೇ ಚಿತ್ರ
ದೀಪಾವಳಿ ಹಬ್ಬದ ದಿನ "ಬ್ಯಾಡ್ ಮ್ಯಾನರ್ಸ್" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್  title=

ಕೆ.ಎಂ.ಸುಧೀರ್ ನಿರ್ಮಾಣದ, "ದುನಿಯಾ" ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ "ಬ್ಯಾಡ್ ಮ್ಯಾನರ್ಸ್" ಚಿತ್ರದ ಟ್ರೇಲರ್ ದೀಪಾವಳಿ ಹಬ್ಬದ ಶುಭದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಿದೆ. ಸುಮಲತ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ಅವಿವಾ ಅಭಿಷೇಕ್,  ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.  ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಿಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಿತ್ತಿದೆ ನೋಡಿ ಹಾರೈಸಿ ಎಂದರು.

ನಮ್ಮ ಕುಟುಂಬದ ಮೇಲೆ ನೀವಿಟ್ಟಿರುವ ಪ್ರೀತಿಗೆ ಧನ್ಯವಾದ. ನಾನು, ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂದ ಮೇಲೆ ಕಥೆ ಕೇಳಲಿಲ್ಲ‌‌. ಅವರು ಚೆನ್ನಾಗಿ ಕಥೆ ಮಾಡಿಕೊಂಡಿರುತ್ತಾರೆ ಎಂಬ ನಂಬಿಕೆ ನನಗಿದೆ. ನವೆಂಬರ್ 24 ರಂದು ನನ್ನ ಮಗನ ಸಿನಿಮಾ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಆಶೀರ್ವಾದ ಅಭಿಷೇಕ್ ಮೇಲಿರಲಿ ಎಂದು ಸುಮಲತ ಅಂಬರೀಶ್ ತಿಳಿಸಿದರು.

ಇದನ್ನೂ ಓದಿ- ಖ್ಯಾತ ನಟಿಗೆ ಕಿಸ್‌ ಕೊಟ್ಟ ಅಲ್ಲು ಅರ್ಜುನ್‌ ತಮ್ಮ..! ಫೋಟೋ ವೈರಲ್

ಈ ಸಂದರ್ಭದಲ್ಲಿ ನಾನು ಅಂಬರೀಶ್ ಹಾಗೂ ಪುನೀತ್ ರಾಜಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದರ್ಶನ್ ಅವರಿಗೆ ಧನ್ಯವಾದ. ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ. ಅಭಿಷೇಕ್ ಅವರ ಪಾತ್ರ ಈ ಚಿತ್ರದಲ್ಲಿ ವಿಭಿನ್ನವಾಗಿದೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಸೂರಿ.

"ಬ್ಯಾಡ್ ಮಾನರ್ಸ್" ನನ್ನ ಅಭಿನಯದ ಎರಡನೇ ಚಿತ್ರ. ನವೆಂಬರ್ 24 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ.  ನಿರ್ಮಾಪಕ ಸುಧೀರ್, ನಿರ್ದೇಶಕ ಸೂರಿ ಅವರಿಗೆ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನನ್ನ ಅಣ್ಣ ದರ್ಶನ್ ಅವರಿಗೆ ಹಾಗೂ ಇಲ್ಲಿ ಅಗಮಿಸಿರುವ ಪ್ರತಿಯೊಬ್ಬ ಸ್ನೇಹಿತರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಾಯಕ ಅಭಿಷೇಕ್ ಅಂಬರೀಶ್.

ಇದನ್ನೂ ಓದಿ- ಮೃಣಾಲ್ ಜೊತೆಗಿನ ಡೇಟಿಂಗ್ ಗುಟ್ಟು ರಟ್ಟು ಮಾಡಿದ ರ‍್ಯಾಪರ್..! ʼಫ್ಯಾನ್ಸ್‌ ಶಾಕ್‌ ಬಾದ್‌ ಶಾ ರಾಕ್‌ʼ 

ನಿರ್ಮಾಪಕ ಕೆ.ಎಂ ಸುಧೀರ್ ಮಾತನಾಡಿ, ಇದೇ ತಿಂಗಳ 24 ರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು. ಹಿರಿಯ ನಟರಾದ ಉಮೇಶ್, ದತ್ತಣ್ಣ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News