"ಕೃಷ್ಣಂ ಪ್ರಣಯ ಸಖಿ" ಚಿತ್ರದ "ಚಿನ್ನಮ್ಮ" ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾ

ಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು. 

Written by - Ranjitha R K | Last Updated : Jun 24, 2024, 04:45 PM IST
  • ಚಿನ್ನಮ್ಮ" ಹಾಡು‌ ಇತ್ತೀಚಿಗೆ ಮಂತ್ರಿ‌ ಮಾಲ್ ನಲ್ಲಿ ಬಿಡುಗಡೆ
  • ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆಗೆ
  • ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.
"ಕೃಷ್ಣಂ ಪ್ರಣಯ ಸಖಿ" ಚಿತ್ರದ "ಚಿನ್ನಮ್ಮ" ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾ  title=

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ "ಚಿನ್ನಮ್ಮ" ಹಾಡು‌ ಇತ್ತೀಚಿಗೆ ಮಂತ್ರಿ‌ ಮಾಲ್ ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು.ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.ಸುಪ್ರೀಂ ಹೀರೋ ಶಶಿಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.ಈ ಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.   

ಚಿತ್ರದಲ್ಲಿ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿದ್ದು, ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ‌. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ."ಚಿನ್ನಮ್ಮ" ಹಾಡು ಕೂಡಾ ಎಲ್ಲರಿಗೂ ಪ್ರಿಯವಾಗಲಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು. 

ಇದನ್ನೂ ಓದಿ : Renukaswamy Murder Case: ಮಗನನ್ನು ತಬ್ಬಿಕೊಂಡು ಕಣ್ಣೀರಿಟ್ಟ ದರ್ಶನ್, ಧೈರ್ಯ ತುಂಬಿದ ಪತ್ನಿ!

ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್ ಅವರು ಬರೆದಿರುವ "ಚಿನ್ನಮ್ಮ" ಹಾಡು ತುಂಬಾ ಚೆನ್ನಾಗಿದೆ.ಅರ್ಜುನ್ ಜನ್ಯ ಅವರ ಸಂಗೀತ, ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಅವರ ಗಾಯನ ಮತ್ತು ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್ ರಾಮಪ್ರಸಾದ್ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.       

ಬಹು ನಿರೀಕ್ಷಿತ "ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,ರಘುರಾಮ್,ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪವಿತ್ರಾ ಗೌಡ ಖಾತೆಗೆ ಜಗದೀಶ್ ಅಕೌಂಟ್ ನಿಂದ ವರ್ಗಾವಣೆಯಾಗಿತ್ತು 2 ಕೋಟಿ ರೂಪಾಯಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News