COVID-19 ಗೆದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವಿಷಯವನ್ನು ಅವರ ಪುತ್ರ ಚರಣ್ ಅವರು ಖಚಿತಪಡಿಸಿದ್ದಾರೆ.  

Last Updated : Sep 4, 2020, 09:41 AM IST
  • ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವಿಷಯವನ್ನು ಅವರ ಪುತ್ರ ಚರಣ್ ಅವರು ಖಚಿತಪಡಿಸಿದ್ದಾರೆ.
COVID-19 ಗೆದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ title=

ಚೆನ್ನೈ: COVID- 19 ವೈರಸ್ ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಬಹುಭಾಷಾ ಗಾಯಕ  ಎಸ್‌ಪಿ ಬಾಲಸುಬ್ರಹ್ಮಣ್ಯಂ (SP Balasubrahmanyam)ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ವಾರದ ಕೊನೆ ಅಥವಾ ಮುಂದಿನ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವಿಷಯವನ್ನು ಅವರ ಪುತ್ರ ಚರಣ್ ಅವರು ಖಚಿತಪಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆದ ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 5ರಂದು ಅವರಿಗೆ ಕೋವಿಡ್-19 (COVID-19) ವೈರಸ್ ತಗುಲಿರುವುದು ದೃಢವಾಗಿತ್ತು. ಬಳಿಕ ಅವರ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿತ್ತು. ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು. 

ಆಗಸ್ಟ್ 28ರಿಂದ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಹಂತಹಂತವಾಗಿ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಲಾಗಿದ್ದು ವಾರದ ಕೊನೆ ಅಥವಾ ಮುಂದಿನ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಎಸ್‌ಪಿಬಿ ಆರೋಗ್ಯದ ಬಗ್ಗೆ ಪುತ್ರ ಎಸ್‌ಪಿ ಚರಣ್ ಹೇಳಿದ್ದೇನು? ವಾಚ್ ವಿಡಿಯೋ

ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಗುಣಮುಖರಾಗಲೆಂದು ಚಿತ್ರರಂಗದ ಗಣ್ಯರು, ಅಭಿಮಾನಿಗಳು ಪ್ರಾರ್ಥಿಸಿದ್ದರು. ನಿನ್ನೆ ಕರ್ನಾಟಕ ಚಲನಚಿತ್ರದ ವತಿಯಿಂದ ಸಾಮೂಹಿಕ ಪ್ರಾರ್ಥನೆಯನ್ನು ಕೂಡ ಮಾಡಲಾಗಿತ್ತು.

Trending News